


ಬೆಳ್ತಂಗಡಿ; ನೆರಿಯ ಗ್ರಾಮದಲ್ಲಿ ಬೆಂಕಿ ಆಕಸ್ಮಿಕದಲ್ಲಿ ಸಂಪೂರ್ಣವಾಗಿ ಸುಟ್ಟು ಹೋದ ಹರೀಶ್ ವಿ. ಅವರ ಮನೆಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಮಂಗಳವಾರ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದರು. ತಾತ್ಕಾಲಿಕವಾಗಿ ವಾಸ್ತವ್ಯವಿರಲು ಮನೆಯ ವ್ಯವಸ್ಥೆಯನ್ನು ಮತ್ತು ಮುಂದಿನ ಮನೆ ನಿರ್ಮಾಣದ ಕುರಿತು ಸ್ಥಳೀಯ ಕಾರ್ಯಕರ್ತರೊಂದಿಗೆ ಚರ್ಚಿಸಲಾಯಿತು.
ಇದೆ ಸಂದರ್ಭದಲ್ಲಿ ಶಾಸಕರು ವೈಯಕ್ತಿಕವಾಗಿ ಹರೀಶ್ ಅವರಿಗೆ ಸಹಾಯ ಧನವನ್ನು ನೀಡಿ ಧೈರ್ಯ ತುಂಬಿದರು
ಈ ಸಂದರ್ಭದಲ್ಲಿ ಬಿ.ಜೆ.ಪಿ ಮಹಾಶಕ್ತಿ ಕೇಂದ್ರ ಪ್ರಮುಖರಾದ ಬಾಬು ಗೌಡ ಪರ್ಪಳ, ಶಕ್ತಿ ಕೇಂದ್ರ ಪ್ರಮುಖರರಾದ ವಿಶ್ವನಾಥ ಅಣಿಯೂರು,ಗ್ರಾಮ ಪಂಚಾಯತ್ ಅಧ್ಯಕ್ಷರಾದ ವಸಂತಿ, ಉಪಾಧ್ಯಕ್ಷರಾದ ಸಜಿತ, ಸದಸ್ಯರಾದ ಕುಶಲ, ವಿ.ಹಿಂ.ಪ ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ, ಆರ್,ಎಸ್ ಎಸ್ ಪ್ರಮುಖರಾದ ಶಿವಪ್ರಸಾದ್ ಸುರ್ಯ, ಸುದರ್ಶನ್ ಕನ್ಯಾಡಿ, ರಾಜೇಶ್ ತೋಟತ್ತಾಡಿ, ಅಕ್ಷಯ್ ಅಣಿಯೂರು ಹಾಗು ಕಾರ್ಯಕರ್ತರು ಉಪಸ್ಥಿತರಿದ್ದರು.


