Home ಅಪರಾಧ ಲೋಕ ಬೆಳ್ತಂಗಡಿ : ಸೌಜನ್ಯ ಪರ ಹೋರಾಟಗಾರ ಜಯಂತ್.ಟಿ ವಿರುದ್ಧ ಸುಮೊಟೊ ಪ್ರಕರಣ

ಬೆಳ್ತಂಗಡಿ : ಸೌಜನ್ಯ ಪರ ಹೋರಾಟಗಾರ ಜಯಂತ್.ಟಿ ವಿರುದ್ಧ ಸುಮೊಟೊ ಪ್ರಕರಣ

50
0

ಬೆಳ್ತಂಗಡಿ : ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ಮಾಡಿದ ಪ್ರಕರಣದ ಸಂಬಂಧ ಹೋರಾಟಗಾರ ಜಯಂತ್.ಟಿ ವಿಡಿಯೋ ಮೂಲಕ ಜನರಿಗೆ ತಪ್ಪು ಸಂದೇಶ ಪ್ರಸಾರ ಮಾಡಿದ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಸುಮೊಟೊ ಪ್ರಕರಣ ದಾಖಲಾಗಿದೆ.

ಬೆಳ್ತಂಗಡಿ ತಾಲೂಕಿನ ಉಜಿರೆ ನಿವಾಸಿ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯನ್ನು ಬೆಳ್ತಂಗಡಿ ಪೊಲೀಸರ ಮನವಿ ಮೇರೆಗೆ ಪುತ್ತೂರು ಎಸಿ ಸ್ಟೆಲ್ಲಾ ವರ್ಗಿಸ್ ಸೆ.18 ರಂದು ಒಂದು ವರ್ಷಗಳ ಕಾಲ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಆದೇಶ ಹೊರಡಿಸಿದ್ದರು. ಈ ಗಡಿಪಾರು ಆದೇಶ ಮಾಡಿದ ಅಂಶಗಳು ಸರಿಯಾಗಿದೆ ಎಂದು ಗೊತ್ತಿದ್ದರು ಜನರನ್ನು ಪ್ರಚೋದಿಸಲು ಸುಳ್ಳು ಮಾಹಿತಿಗಳ ಮೂಲಕ ಬಂಟ್ವಾಳ ಡಿವೈಎಸ್ಪಿ ಮತ್ತು ಪುತ್ತೂರು ಎಸಿ ಬಗ್ಗೆ ಹೋರಾಟಗಾರ ಜಯಂತ್ ಟಿ ಎಂಬವರು ತಪ್ಪು ಸಂದೇಶಗಳನ್ನು ವಿಡಿಯೋ ಮಾಡಿಪ್ರಸಾರ ಮಾಡಿದ್ದಾರೆ ಎಂದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ BNS-353(1)(b) ಅಡಿಯಲ್ಲಿ ಜಯಂತ್ ಟಿ ವಿರುದ್ಧ ಅ.14 ರಂದು ಸುಮೊಟೊ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here