ಬೆಳ್ತಂಗಡಿ: ತಾಲೂಕಿನ ಚಾರ್ಮಾಡಿ ಗ್ರಾಮಪಂಚಾಯತು ವ್ಯಾಪ್ತಿಯ ಕಾಂಜಾಲು ನಿವಾಸಿ ಜೆಸ್ವಿನ್ ಬಾಲಕರ ವಿಭಾಗದ ವಾಲಿಬಾಲ್ ಪಂದ್ಯಾಟದಲ್ಲಿ ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನವನ್ನು ತನ್ನದಾಗಿಸಿಕೊಂಡು ಇದೀಗ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಲಿದ್ದಾರೆ.
ಬೆಂದ್ರಾಳ ಸೈಟ್ ಸಾವಿಯೋ ಆಂಗ್ಲಮಾಧ್ಯಮ ಶಾಲೆಯ ಎಂಟನೆ ತರಗತಿಯ ವಿಧ್ಯಾರ್ಥಿ ಯಾಗಿರುವ ಜೆಸ್ವಿನ್ ಅವರು ದಕ್ಷಿಣಕನ್ನಡ ಜಿಲ್ಲಾ ತಂಡವನ್ನು ಪ್ರತಿನಿಧಿಸಿ ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಭಾಗವಹಿಸಿದ್ದರು. ರಾಜ್ಯ ಮಟ್ಟದ ಪಂದ್ಯಾಟದಲ್ಲಿ ಜಿಲ್ಲಾ ತಂಡ ಪ್ರಥಮ ಸ್ಥಾನವನ್ನು ತನ್ನದಾಗಿಸಿಕೊಂಡಿದ್ದು ಜೆಸ್ವಿನ್ ರಾಷ್ಟ್ರೀಯ ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ.
ಇವರು ಕಾಂಜಾಲು ನಿವಾಸಿ ಜೋಷಿ ಪಾಲಾಟಿ ಹಾಗೂ ಜಿಪ್ಸಿ ದಂಪತಿಯರ ಪುತ್ರ ಬಾಲಕನ ಸಾಧನೆಗೆ ಸೈಂಟ್ ಸಾವಿಯೋ ಶಾಲೆಯ ಆಡಳಿತ ಮಂಡಳಿ ಶಿಕ್ಷಕರು ಹಾಗೂ ಸ್ಥಳೀಯ ಜನರು ಅಭಿನಂದನೆ ಸಲ್ಲಿಸಿದ್ದಾರೆ.
