Home ಅಪರಾಧ ಲೋಕ ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣ ತನಿಖೆ ಮಹತ್ವದ ಘಟ್ಟಕ್ಕೆ ಎಸ್.ಐ.ಟಿ ಕಚೇರಿಗೆ ಆಗಮಿಸಿದ ಪ್ರಣವ್ ಮೊಹಂತಿ

ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣ ತನಿಖೆ ಮಹತ್ವದ ಘಟ್ಟಕ್ಕೆ ಎಸ್.ಐ.ಟಿ ಕಚೇರಿಗೆ ಆಗಮಿಸಿದ ಪ್ರಣವ್ ಮೊಹಂತಿ

0

ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣದ ಸಂಬಂಧ ತನಿಖೆ ಮಹತ್ವದ ಹಂತ ತಲುಪಿದ್ದು ಎಸ್.ಐ.ಟಿ ಮುಖ್ಯಸ್ಥ ಪ್ರಣವ್ ಮೊಹಂತಿ ಬೆಳ್ತಂಗಡಿ ಕಚೇರಿಗೆ ಶನಿವಾರ ಮಧ್ಯಾಹ್ನದ ವೇಳೆ ಆಗಮಿಸಿದ್ದಾರೆ.
ಕಳೆದ ನಾಲ್ಕು ತಿಂಗಳಿನಿಂದ ನಡೆಯುತ್ತಿರುವ ಎಸ್.ಐ.ಟಿ‌ತನಿಖೆ ಇದೀಗ ಮಹತ್ವದ ಘಟ್ಟ ತಲುಪಿದೆ. ಚಿನ್ನಯ್ಯ ತಂದಿದ್ದ ತಲೆಬುರುಡೆಗೆ ಸಂಬಂಧಿಸಿದಂತೆ ತನಿಖೆ ಪೂರ್ಣಗೊಂಡಿದ್ದು ಇದರಲ್ಲಿ ಯಾವರೋತಿಯಾಗಿಬಕ್ರಮ ಕೈಗೊಳ್ಳಬೇಕು ಎಂಬ ಬಗ್ಗೆ ಅಂತಿಮ ನಿರ್ಧಾರಕ್ಕೆ ಎಸ್.ಐ.ಟಿ ತಂಡ ಬಂದಿದ್ದು ಈ ಬಗ್ಗೆ ಮಹತ್ವದ ಸಭೆಗಳು ಎಸ್.ಐ.ಟಿ ಕಚೇರಿಯಲ್ಲಿ ಶನಿವಾರ ಭಾನುವಾರ ನಡೆಯಲಿದೆ. ಸೋಮವಾರ ವಿಚಾರಣೆಗಾಗಿ ಹಾಜರಾಗಲು ಇದೀಗ ಮಹೇಶ್ ಶೆಟ್ಟಿ ತಿಮರೋಡಿ ಗಿರೀಶ್ ಮಟ್ಟಣ್ಣನವರ್, ಜಯಂತ್ ಟಿ, ಹಾಗೂ ವಿಠಲ ಗೌಡ ಅವರಿಗೆ ನೋಟೀಸ್ ನೀಡಿದೆ
ಬುರುಡೆಗೆ ಸಂಬಂಧಿಸಿದಂತೆ ಇವರ ವಿಚಾರಣೆ ನಡೆಯುವ ನಿರೀಕ್ಷೆಯಿದೆ. ಅದೇ ರೀತಿ ಚಿನ್ನಯ್ಯ ನೀಡಿದ‌ ಹೇಳಿಕೆಗಳ ಬಗ್ಗೆಯು ತನಿಖೆ ನಡೆಸುವ ಬಗ್ಗೆ ಎಸ್.ಐ.ಟಿ ಮಹತ್ವದ ನಿರ್ಧಾರಗಳನ್ನು ತೆಗದುಕೊಳ್ಳುವ ನಿರೀಕ್ಷೆಯಿದೆ.
ಒಟ್ಟಾರೆಯಾಗಿ ಎಸ್.ಐ.ಟಿ ತನಿಖೆಯಲ್ಲಿ ಮುಂದಿನ ವಾರ ಅತ್ಯಂತ ಮಹತ್ವದ ಬೆಳವಣಿಗೆಗಳು ನಡೆಯುವ ನಿರೀಕ್ಷೆಯಿದೆ

NO COMMENTS

LEAVE A REPLY

Please enter your comment!
Please enter your name here

Exit mobile version