ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣ ಸಂಬಂಧ ಎಸ್.ಐ.ಟಿ ವಿಚಾರಣೆಗೆ ಸೋಮವಾರ ಹಾಜರಾಗುವಂತೆ ಸುಜಾತ ಭಟ್ ಗೆ ನೋಟಿಸ್ ಜಾರಿ ಮಾಡಲಾಗಿರುವುದಾಗಿ ತಿಳಿದು ಬಂದಿದೆ.
ಧರ್ಮಸ್ಥಳ ಪ್ರಕರಣದಲ್ಲಿ ಆರಂಭದಲ್ಲಿ ಆರೋಪಿ ಚಿನ್ನಯ್ಯನೊಂದಿಗೆ ಜಯಂತ್ ಟಿ ಮತ್ತು ಗಿರೀಶ್ ಮಟ್ಟಣ್ಣವರ್ ಜೊತೆ ಸುಜಾತ ಭಟ್ ದೆಹಲಿಗೆ ಹೋಗಿದ್ದ ಪ್ರಕರಣ ಮತ್ತು ಚಿನ್ನಯ್ಯನಿಗೆ ಬೆಂಗಳೂರು ಮನೆಯಲ್ಲಿ ಆಶ್ರಯ ನೀಡಿದ್ದ ಹಿನ್ನೆಲೆಯಲ್ಲಿ ವಿಚಾರಣೆಗೆ ಅ.27 ರಂದು ಸೋಮವಾರ ವಿಚಾರಣೆಗೆ ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಹಾಜರಾಗುವಂತೆ ಸುಜಾತ ಭಟ್ ಗೆ ಎಸ್.ಐ.ಟಿ ಕಚೇರಿಯಿಂದ ಅ.25 ರಂದು ನೋಟಿಸ್ ಜಾರಿ ಮಾಡಲಾಗಿದೆ.
ಇದೇ ದಿನ ವಿಚಾರಣೆಗೆ ಹಾಜರಾಗುವಂತೆ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್, ಜಯಂತ್ ಟಿ, ಹಾಗೂ ವಿಠಲ ಗೌಡ ಅವರಿಗೂ ಎಸ್.ಐ.ಟಿ ನೋಟೀಸ್ ನೀಡಿದ್ದು ಸೋಮವಾರ ಎಸ್.ಐ.ಟಿ ತನಿಖೆಯಲ್ಲಿ ಅತ್ಯಂತ ಮಹತ್ವದ ಬೆಳವಣಿಗೆಗಳು ನಡೆಯುವ ನಿರೀಕ್ಷೆಯಿದೆ.








