ಬೆಳ್ತಂಗಡಿ : ಹಳೆ ದ್ವೇಷದ ವಿಚಾರದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳ್ತಂಗಡಿ ಮಿನಿ ವಿಧಾನಸೌಧದ ರಸ್ತೆಯ ಬಳಿ ನ.3 ರಂದು ಸಂಜೆ 4:30 ರ ಸುಮಾರಿಗೆ ಧರ್ಮಸ್ಥಳ ಗ್ರಾಮದ ಇಬ್ರಾಹಿಂ(32) ಎಂಬವರಿಗೆ ಉಜಿರೆ ಟಿ.ಬಿ ಕ್ರಾಸ್ ನಿವಾಸಿ ಅಫ್ರೀದ್ @ ಅಪ್ಪಿ ಎಂಬಾತ ಆಟೋ ರಿಕ್ಷಾದಲ್ಲಿ ಬಂದು ಯಾವುದೋ ಅಯುಧದಿಂದ ಬಲಕಣ್ಣಿಗೆ ಮತ್ತು ಎಡಕಣ್ಣಿಗೆ ಮಾರಣಾಂತಿಕ ಹಲ್ಲೆ ನಡೆಸುತ್ತಿದ್ದಾಗ ಸಾರ್ವಜನಿಕರು ಸೇರುತ್ತಿದ್ದಂತೆ ಸ್ಥಳದಿಂದ ಪರಾರಿಯಾಗಿದ್ದಾರೆ. ಹಲ್ಲೆಗೊಳಗಾದ ಗಾಯಗೊಂಡ ಇಬ್ರಾಹಿಂ ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ನ.3 ರಂದು ಆರೋಪಿ ಅಫ್ರೀದ್ @ ಅಪ್ಪಿ ಮತ್ತು ಆಟೋ ಚಾಲಕನ ವಿರುದ್ಧ BNS 2023(u/s-118(1)) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.









