ಬೆಂಗಳೂರು : ತಾಂತ್ರಿಕ ಕಾರಣಗಳಿಂದ ಧರ್ಮಸ್ಥಳ ಪ್ರಕರಣದ ಎಸ್ಐಟಿ ತನಿಖಾ ವರದಿ ವಿಳಂಬವಾಗಿದೆ. ಇದೇ ಕಾರಣದಿಂದಾಗಿ ವರದಿ ಪಡೆಯುವುದನ್ನು ಕೆಲ ದಿನಗಳ ಕಾಲ ಮುಂದೂಡಿದ್ದೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
ಗುರುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಮಹಿಳಾ ಆಯೋಗವು ತನಿಖೆ ಮಾಡಿ ಎಂದು ಕೋರಿದೆ ಈ ಸಂಬಂಧ ಸಮಗ್ರ ತನಿಖೆಯಾದರೆ ಎಲ್ಲ ಮಾಹಿತಿ ಗೊತ್ತಾಗುತ್ತದೆ. ಅದಕ್ಕಾಗಿ ಸಮಯ ಹಿಡಿಯಲಿದ್ದು, ವರದಿಯನ್ನು ಎಲ್ಲ ಆಯಾಮಗಳನ್ನು ನೋಡಿಯೇ ಕೊಡಬೇಕು. ಜತೆಗೆ, ತಾಂತ್ರಿಕ ಕಾರಣಗಳಿಂದ ವಿಳಂಬವಾಗಿದೆ ಎಂದು ತಿಳಿಸಿದರು.
