ಬೆಳ್ತಂಗಡಿ; ಸಹಕಾರಿಕ್ಷೇತ್ರದಲ್ಲಿ ಕಳೆದ 25ವರ್ಷಗಳಿಂದ ಸಲ್ಲಿಸಿರುವ ಸೇವೆಗಾಗಿ ಬೆಳ್ತಂಗಡಿ ತಾಲೂಕಿನ ಹಿರಿಯ ಸಹಕಾರಿ ಮುಖಂಡ ಸತೀಶ್ ಕಾಶಿಪಟ್ಣ ಅವರಿಗೆ ರಾಜ್ಯ ಸರಕಾರ ಸಹಕಾರ ರತ್ನ ಪ್ರಶಸ್ತಿಗೆ ಆಯ್ಕೆ ಮಾಡಿದೆ. ಪೆರಾಡಿ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾಗಿರುವ ಸತೀಶ್ ಕೆ ಅವರು ಜಿಲ್ಲಾ ಸಹಕಾರಿ ಯೂನಿಯನ್ ನಿರ್ದೇಶಕರಾಗಿ, ಬೆಳ್ತಂಗಡಿ ಕೃಷಿ ಉತ್ಪನ್ನಗಳ ಮಾರಾಟ ಮತ್ತು ಸಂಸ್ಕರಣ ಸಹಕಾರ ಸಂಘದ ಅಧ್ಯಕ್ಷರೂ ಆಗಿದ್ದಾರೆ.
ನ14ರಂದು ಬೆಂಗಳೂರಿನಲ್ಲಿ ನಡೆಯುವ ಸಹಕಾರಿ ಸಪ್ತಾಹ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳು ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ.
