Home ಬ್ರೇಕಿಂಗ್‌ ನ್ಯೂಸ್ ಮಹೇಶ್ ಶೆಟ್ಟಿ  ಮನೆಯಲ್ಲಿ ಬಂದೂಕು ಪತ್ತೆಯಾದ ಪ್ರಕರಣಕ್ಕೆ ನೀಡಿದ್ದ ತಡೆಯಾಜ್ಞೆ ಮುಂದುವರಿಸಿದ ಹೈ ಕೋರ್ಟ್

ಮಹೇಶ್ ಶೆಟ್ಟಿ  ಮನೆಯಲ್ಲಿ ಬಂದೂಕು ಪತ್ತೆಯಾದ ಪ್ರಕರಣಕ್ಕೆ ನೀಡಿದ್ದ ತಡೆಯಾಜ್ಞೆ ಮುಂದುವರಿಸಿದ ಹೈ ಕೋರ್ಟ್

0

ಬೆಳ್ತಂಗಡಿ : ಮಹೇಶ್ ಶೆಟ್ಟಿ ತಿಮರೋಡಿ ಅವರ  ಮನೆಯಲ್ಲಿ ಎಸ್.ಐ.ಟಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ ಅಕ್ರಮ ಬಂದೂಕು ಪ್ರಕರಣದಲ್ಲಿ ಹೈಕೋರ್ಟ್ ನಲ್ಲಿ ‌ನ.24 ರಂದು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಮುಂದಿನ ಎರಡು ವಾರಗಳ ಕಾಲ ತಡೆಯಾಜ್ಞೆಯನ್ನು ಮುಂದುವರಿಸಿದ್ದು ಪ್ರಕರಣದ ವಿಚಾರಣೆಯನ್ನು ಮುಂದೂಡಿದೆ.

ಧರ್ಮಸ್ಥಳ ಪ್ರಕರಣದ ಸಂಬಂಧ ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿ ಅವರ  ಮನೆಗೆ ಎಸ್.ಐ.ಟಿ ಅಧಿಕಾರಿಗಳು ನ್ಯಾಯಾಲಯದಿಂದ ಸರ್ಚ್ ವಾರಂಟ್ ಪಡೆದು ಅಗಸ್ಟ್ 26 ರಂದು ಶೋಧ ನಡೆಸಿದಾಗ ಎರಡು ತಲವಾರು ಮತ್ತು ಒಂದು ಬಂದೂಕು ಸೇರಿ ಒಟ್ಟು 44 ವಸ್ತುಗಳನ್ನು ವಶಪಡಿಸಿಕೊಂಡಿದ್ದರು. ಬಳಿಕ ಎಸ್.ಐ.ಟಿ ಎಸ್ಪಿ ಸಿ.ಎ.ಸೈಮನ್ ಸೆಪ್ಟೆಂಬರ್‌ 16 ರಂದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅರ್ಮ್ಸ್ ಆಕ್ಟ್ ಅಡಿಯಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಅವರ  ವಿರುದ್ಧ ಪ್ರಕರಣ ದಾಖಲಿಸಿದ್ದರು.

ಬೆಳ್ತಂಗಡಿ ಪೊಲೀಸರು ವಿಚಾರಣೆಗೆ ಹಾಜರಾಗಲು ನೋಟಿಸ್ ಜಾರಿ ಮಾಡಿದ್ದರು.

ಈ ಬಗ್ಗೆ ಹೈಕೋರ್ಟ್ ಗೆ ತಿಮರೋಡಿ ಅರ್ಜಿ ಸಲ್ಲಿಸಿದ್ದು. ಈ ಅರ್ಜಿಯ ವಿಚಾರಣೆಯ ವೇಳೆ ಹೈಕೋರ್ಟ್ ಪ್ರಕರಣಕ್ಕೆ ತಾತ್ಕಾಲಿಕ ತಡೆ ನೀಡಿ ಆದೇಶ ನೀಡಿತ್ತು.  ನ.24 ರಂದು ಪ್ರಕರಣದ ವಿಚಾರಣೆ ವೇಳೆ ಹೈಕೋರ್ಟ್ ಗೆ  ಆಕ್ಷೇಪಣೆ ಸಲ್ಲಿಸಲು ಮತ್ತು ಮಧ್ಯಂತರ ತಡೆಯಾಜ್ಞೆ ತೆರವು ಅರ್ಜಿ ಸಲ್ಲಿಸಲು ಸಮಯಾವಕಾಶ ನೀಡುವಂತೆ  ಸರಕಾರಿ ವಕೀಲರು ಕೋರಿದ್ದು ಅದರಂತೆ ನ್ಯಾಯಾಲಯ ಎರಡು ವಾರಗಳ ಕಾಲಾವಕಾಶ ನೀಡಿದೆ ಅಲ್ಲಿಯವರೆಗೆ ಪ್ರಕರಣಕ್ಕೆ ನೀಡಿದ್ದ  ಮಧ್ಯಂತರ ತಡೆ ಯಾಜ್ಞೆಯನ್ನು ಮುಂದುವರಿಸಿದೆ.

NO COMMENTS

LEAVE A REPLY

Please enter your comment!
Please enter your name here

Exit mobile version