Home ಅಪರಾಧ ಲೋಕ ಬೆಳ್ತಂಗಡಿ; ಸರಕಾರಿ ಜಾಗದಲ್ಲಿ ಮರ ಕಡಿದು ದಾಸ್ತಾನು ಪ್ರಕರಣ‌ದಾಖಲು

ಬೆಳ್ತಂಗಡಿ; ಸರಕಾರಿ ಜಾಗದಲ್ಲಿ ಮರ ಕಡಿದು ದಾಸ್ತಾನು ಪ್ರಕರಣ‌ದಾಖಲು

0

ಬೆಳ್ತಂಗಡಿ : ಸರಕಾರಿ ಜಾಗದಲ್ಲಿ ಅಕ್ರಮವಾಗಿ ಮರಗಳನ್ನು ಕಡಿದು ದಾಸ್ತಾನು ಮಾಡಿರುವ ಬಗ್ಗೆ ಮಂಗಳೂರು ಅರಣ್ಯ ಸಂಚಾರಿ ದಳದ ಅಧಿಕಾರಿಗಳಿಗೆ ಬಂದ ಮಾಹಿತಿ ಮೇರೆಗೆ ದಾಳಿ ಮಾಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬೆಳ್ತಂಗಡಿ ತಾಲೂಕಿನ ಬಂದಾರು ಗ್ರಾಮದ ಪುನರಡ್ಕ ಎಂಬಲ್ಲಿ ಸರಕಾರಿ ಜಾಗದಲ್ಲಿ ಅಕ್ರಮವಾಗಿ ಹಲಸು ಮತ್ತು ಸಾಗುವಾನಿ ಮರಗಳನ್ನು ಕಡಿದು 14 ದಿಮ್ಮಿ ಮತ್ತು ಕಟ್ಟಿಗೆಯನ್ನಾಗಿ ಪರಿವರ್ತಿಸಿ ದಾಸ್ತಾನು ಮಾಡಿರುವ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ಮಂಗಳೂರು ಸಂಚಾರಿ ಅರಣ್ಯ ದಳದ ಅಧಿಕಾರಿಗಳು ನ.21 ರಂದು ದಾಳಿ ಮಾಡಿ ಪತ್ತೆ ಹಚ್ಚಿ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಪ್ರಕರಣದ ಆರೋಪಿ ಬೆಳ್ತಂಗಡಿ ತಾಲೂಕಿನ ಕೊಯ್ಯೂರು ಗ್ರಾಮದ ಗುರ್ಬೊಟ್ಟು ನಿವಾಸಿ ದೂಜ ಎಂಬವರ ಮಗ ಪ್ರವೀಣ್ ವಿರುದ್ಧ ಮಂಗಳೂರು ಅರಣ್ಯ ಸಂಚಾರಿ ದಳದ ವಲಯ ಅರಣ್ಯ ಅಧಿಕಾರಿ ಬೆಳ್ತಂಗಡಿ ನ್ಯಾಯಾಲಯದ ಅನುಮತಿ ಪಡೆದುಕೊಂಡು ಪ್ರಕರಣ ದಾಖಲಿಸಿ ಕೊಂಡಿದ್ದಾರೆ.

ಮಂಗಳೂರು ಸಂಚಾರಿ ಅರಣ್ಯ ದಳದ ವಲಯ ಅರಣ್ಯ ಅಧಿಕಾರಿ ಶ್ರೀ ಸಂತೋಷ್, ಉಪ ವಲಯ ಅರಣ್ಯ ಅಧಿಕಾರಿ ಶ್ರೀ ಪ್ರಶಾಂತ್,ಉಪ ವಲಯ ಅರಣ್ಯ ಅಧಿಕಾರಿ ಶ್ರೀ ಶಿವಾನಂದ ಸದೇಪ ಮಾದರ,ಉಪ ವಲಯ ಅರಣ್ಯ ಅಧಿಕಾರಿ ಶ್ರೀ ಸೋಮನಾಥ್,ವಾಹನ ಚಾಲಕ
ಶ್ರೀ ಜಯಪ್ರಕಾಶ್ ಕೆ ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.

NO COMMENTS

LEAVE A REPLY

Please enter your comment!
Please enter your name here

Exit mobile version