
ಬೆಳ್ತಂಗಡಿ: ಲಾಯಿಲ ಸೇತುವೆ ಬಳಿ ಅನಾರೋಗ್ಯ ಅಥವಾ ಬೇರೆ ಕಾರಣದಿಂದ ಮೃತಪಟ್ಟ ಅಪರಿಚಿತ ಶವ ಪತ್ತೆಯಾದ ಘಟನೆ ಡಿ.17 ರಂದು ನಡೆದಿದೆ.
ಸ್ಥಳೀಯರು ಅಪರಿಚಿತ ಮೃತದೇಹ ನೋಡಿ ಕೂಡಲೇ ಬೆಳ್ತಂಗಡಿ ಪೊಲೀಸರಿಗೆ ಮಾಹಿತಿ ನೀಡಿದ್ದು ಅದರಂತೆ ಸ್ಥಳಕ್ಕೆ ಬೆಳ್ತಂಗಡಿ ಸಬ್ ಇನ್ಸ್ಪೆಕ್ಟರ್ ಅನಂದ್.ಎಮ್ ಮತ್ತು ಸಿಬ್ಬಂದಿ ಘಟನಾ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ತನಿಖೆ ನಡೆಸಲು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮೃತದೇಹದ ಮಹಜರು ನಡೆಸಿದ ಬಳಿಕ ಶವಪರೀಕ್ಷೆಗಾಗಿ ಸಾಯಿರಾಮ್ ಅಂಬುಲೆನ್ಸ್ ಮೂಲಕ ಶವವನ್ನು ಮಂಗಳೂರು ಆಸ್ಪತ್ರೆಗೆ ರವಾನಿಸಲಾಗಿದೆ.ಈ ವೇಳೆ ಅಂಬುಲೆನ್ಸ್ ಚಾಲಕ ಪವನ್ ಬಂಗೇರ, ಕರುಣಾಕರ ರೆಂಕೆದಗುತ್ತು ಪೊಲೀಸರಿಗೆ ಸಹಕರಿಸಿದರು.






