
ಬೆಳ್ತಂಗಡಿ; ದಕ್ಷಿಣ ಕನ್ನಡ ಜಿಲ್ಲೆ, ಬೆಳ್ತಂಗಡಿ ತಾಲೂಕಿನ ದಟ್ಟ ಅಡವಿಯ ನಡುವೆ ಇರುವ ಸುಲ್ಕೇರಿ ಮೊಗ್ರು ಗ್ರಾಮದ ಪಂಜಾಲ, ಮಾಳಿಗೆ ಬೈಲಿನ 15 ಆದಿವಾಸಿ ಕುಟುಂಬ ಸೇರಿ ಒಟ್ಟು 28 ಕುಟುಂಬಗಳಿಗೆ ವಿದ್ಯುತ್ ಭಾಗ್ಯ ಲಭಿಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದಿವಾಸಿಗಳು ನೆಲೆಸಿರುವ ಅರಣ್ಯ ಪ್ರದೇಶದ ವಸತಿ ಪ್ರದೇಶಗಳಿಗೆ ವಿದ್ಯುತ್, ನೀರು, ರಸ್ತೆ ಸೇರಿದಂತೆ ಅಗತ್ಯ ಮೂಲಸೌಕರ್ಯ ಕಲ್ಪಿಸಲು ಸೂಚಿಸಿದ ಹಿನ್ನೆಲೆಯಲ್ಲಿ ಅರಣ್ಯ, ಜೀವಿಶಾಸ್ತ್ರ ಮತ್ತ ಪರಿಸರ ಸಚಿವ ಈಶ್ವರ ಖಂಡ್ರೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿ, ವಿದ್ಯುತ್ ಮಾರ್ಗ ಅಳವಡಿಕೆಗೆ ಅರಣ್ಯ ಭೂಮಿ ಪರಿವರ್ತನೆಗಾಗಿ ಪರಿವೇಶ್ ಪೋರ್ಟಲ್ ನಲ್ಲಿ ಅರ್ಜಿ ಹಾಕಿಸಿ, ಅನುಮತಿ ಪಡೆಯಲು ಕ್ರಮ ವಹಿಸಿದ್ದರು. ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ರವರು ಈ ಬಗ್ಗೆ ವಿಶೇಷ ಮುತುವರ್ಜಿ ವಹಿಸಿದ್ದರು.
ಈ ಬಗ್ಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರು ಅನುಮತಿಗಾಗಿ ಹೆಚ್ಚಿನ ಮುತುವರ್ಜಿ ಸಹಕರಿಸಿದಕ್ಕಾಗಿ ಸುಲ್ಕೇರಿ ಮೊಗ್ರು ಗ್ರಾಮದ ಪಂಜಾಲ, ಮಾಳಿಗೆ ಬೈಲಿನ ನಿವಾಸಿಗಳು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರಿಗೆ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಶೇಖರ್ ಕುಕ್ಕೆಡಿ, ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸತೀಶ್ ಮಿತ್ತಮರ್, ಮಾಜಿ ಪಂಚಾಯತ್ ಸದಸ್ಯರಾದ ಸತೀಶ್ ಎಸ್ ಎಂ ರವರಿಗೆ ಮಾಳಿಗೆ ಬೈಲಿನಲ್ಲಿ ತುಂಗಪ್ಪ ಮಲೆಕುಡಿಯ ಮನೆಯಲ್ಲಿ ನಡೆದ ಸಭೆಯಲ್ಲಿ
ಅಭಿನಂದನೆ ಸಲ್ಲಿಸಿದರು.

ಈ ಸಂಧರ್ಭದಲ್ಲಿ ಜಿಲ್ಲಾ ಕೆಡಿಪಿ ಸದಸ್ಯರಾದ ಸಂತೋಷ್ ಕುಮಾರ್, ಮಾಜಿ ಗ್ರಾಮ ಪಂಚಾಯತ್ ಸದಸ್ಯರಾದ , ಪ್ರಸಾದ್ ಪಿಂಟೋ, ಕೆಡಿಪಿ ಸದಸ್ಯರಾದ ಸುನಿಲ್ ಜೈನ್, ಸೇವಾ ಸಹಕಾರಿ ಬ್ಯಾಂಕಿನ ನಿರ್ದೇಶಕರಾದ ಚಿದಾನಂದ ಇಂಚರ, ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ಶ್ರೀಮತಿ ವಿನುಷ ಪ್ರಕಾಶ್, ಪ್ರಮುಖರಾದ ಕುಶಾಲಪ್ಪ ಗೌಡ, ಕೃಷ್ಣಪ್ಪ ಪೂಜಾರಿ ಶಿರ್ಲಾಲ್, ನಾರಾಯಣ ಪೂಜಾರಿ, ಸುಂದರ ಪೂಜಾರಿ ಕೆಡೆಲು, ಸಂತೋಷ್ ಎಂಕೆ ಕೇಡೆಲು, ಆನಂದ ಎ೦,ಕೆ, ಜಯಂತ ಎಂ.ಕೆ ,ಸುಭಾಷ್ ಎಮ್ ಕೆ ಪುರಂದರ, ಸದಾನಂದ ಆಚಾರ್ಯ, ಸದಾನಂದ ಪೂಜಾರಿ ಮಾಲಿಗೆ, ಹೆರಾಲ್ಡ್ ಪಿಂಟೋ, ಅಶೋಕ್ ಸುವರ್ಣ, ವೆಂಕಪ್ಪ ಮಲೆಕುಡಿಯ, , ಶಿವಪ್ಪ ಮಲೆಕೊಡಿಯ ಸದಾನಂದ ಮಲೆಕುಡಿಯ, ಸುರೇಶ್ ಪೂಜಾರಿ, ವಿಶ್ವನಾಥ್ ಪೂಜಾರಿ, ಲೋಕಯ್ಯ ಪೂಜಾರಿ, ಪ್ರವೀಣ್ ಎಂ ಕೆ, ಅಮ್ಮಾಜಿ ಎಂ ಕೆ, ಬಾಬು ಪೂಜಾರಿ ಪಂಜಲ, ದರ್ನಪ್ಪ ಪೂಜಾರಿ ದೋರಿಂಜ, ವೀರೇಂದ್ರ ಕುಮಾರ್ ಜೈನ್ ನಾಗರ, ಪುಷ್ಪರಾಜ್ ನಾವುರ ರವಿಬಂಗೇರ ಪಿಲ್ಯ, ಹಾಗೂ ಪ್ರಮುಖರು ಉಪಸ್ಥಿರಿದ್ದರು.










