
ಮಂಗಳೂರು, ದಂಡುಪಾಳ್ಯ ಗ್ಯಾಂಗ್ ನ ಆರೋಪಿ 29 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಚಿಕ್ಕ ಹನುಮ @ ಚಿಕ್ಕ ಹನುಮಂತಪ್ಪ(55) ನನ್ನು ಮಂಗಳೂರಿನ ಉರ್ವ ಠಾಣೆಯ ಪೊಲೀಸರು ಆಂಧ್ರಪ್ರದೇಶದಲ್ಲಿ ಬಂಧಿಸಿದ್ದಾರೆ.
ಆರೋಪಿ ಉರ್ವಾ ಪೊಲೀಸ್ ಠಾಣಾ ಅ.ಕ್ರ ನಂಬ್ರ 113/1997, ರ ಪ್ರಕರಣದಲ್ಲಿ 29 ವರ್ಷಗಳಿಂದ ತಲೆಮರೆಸಿಕೊಂಡಿದ್ದ. “ದಂಡುಪಾಳ್ಯ ಗ್ಯಾಂಗ್” ಎಂದೇ ಕುಖ್ಯಾತಿ ಪಡೆದಿರುವ ಗ್ಯಾಂಗ್ ನ ಸಹಚರ (ಎ-6) ಚಿಕ್ಕ ಹನುಮ @ ಚಿಕ್ಕ ಹನುಮಂತಪ್ಪ @ ಕೆ. ಕೃಷ್ಣಪ್ಪ @ ಕೃಷ್ಣ ನನ್ನು ಆಂದ್ರಪ್ರದೇಶ ರಾಜ್ಯದ ಅನ್ನಮಯ್ಯ ಜಿಲ್ಲೆಯ, ಮದನಪಳ್ಳಿ ಎಂಬಲ್ಲಿ ಉರ್ವ ಠಾಣಾ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ಮಾನ್ಯ ನ್ಯಾಯಾಲಯವು ಆರೋಪಿತನಿಗೆ ನ್ಯಾಯಾಂಗ ಬಂಧನ ವಿಧಿಸಿರುತ್ತದೆ.
ಹಿಂದಿನ ಪ್ರಕರಣದ ವಿವರ:-
ದಿನಾಂಕ: 11-10-1997 ರಂದು ಮಧ್ಯಾರಾತ್ರಿ ಮಂಗಳೂರು ತಾಲೂಕು ಉರ್ವಾ ಮಾರಿಗುಡಿ ಕ್ರಾಸ್ ಬಳಿರುವ ಅನ್ವರ್ ಮಹಲ್ ಎಂಬ ಮನೆಗೆ ನುಗ್ಗಿದ ದಂಡುಪಾಳ್ಯ ಗ್ಯಾಂಗ್* ಎಂದೇ ಕುಖ್ಯಾತಿ ಪಡೆದಿರುವ ಗ್ಯಾಂಗ್ ನ ಸಹಚರಗಳಾದ 1) ದೊಡ್ಡ ಹನುಮ @ ಹನುಮ 2)ವೆಂಕಟೇಶ @ ಚಂದ್ರ 3) ಮುನಿಕೃಷ್ಣ @ ಕೃಷ್ಣ ಮತ್ತು 4) ನಲ್ಲತಿಮ್ಮ @ ತಿಮ್ಮ5) ಕೃಷ್ಣ @ ದಂಡುಪಾಳ್ಯ ಕೃಷ್ಣ @ ನಾಗರಾಜ 6) ಚಿಕ್ಕ ಹನುಮ 7) ಕೃಷ್ಣಾಡು @ ಕೃಷ್ಣ 8) ವೆಂಕಟೇಶ್ @ ರಮೇಶ್ ಇವರುಗಳು ಮನೆಯಲ್ಲಿದ್ದ ಶ್ರೀಮತಿ ಲೂವಿಸ್ ಡಿಮೆಲ್ಲೋ, ಪ್ರಾಯ 80 ವರ್ಷ ಹಾಗೂ ರಂಜಿತ್ ವೇಗಸ್, ಪ್ರಾಯ 19 ವರ್ಷ ರವರನ್ನು ಕೊಲೆ ಮಾಡಿ ಚಿನ್ನಾಭರಣಗಳು ದೊಚಿಕೊಂಡು ಹೋಗಿರುತ್ತಾರೆ. ಆರೋಪಿಗಳ ಮೇಲೆ ತನಿಖೆ ನಡೆಸಿ ದೋಷರೋಪಣಾ ಪಟ್ಟಿಯನ್ನು ಮಾನ್ಯ ನಾಯಾಲಯಕ್ಕೆ ಸಲ್ಲಿಸಿದಂತೆ ಘನ 34 ನೇ ಅಪರ ನಗರ ಸಿವಿಲ್ ಮತ್ತು ಸೆಷನ್ ನ್ಯಾಯಾಧೀಶರು (ವಿಶೇಷ ನ್ಯಾಯಾಲಯ), ಕೇಂದ್ರ ಕಾರಾಗೃಹ ಆವರಣ ಪರಪ್ಪನ ಅಗ್ರಹಾರ ಬೆಂಗಳೂರು ರವರ ಎಸ್.ಸಿ ನಂ. 728/2010 ರಂತೆ ನ್ಯಾಯಾಲಯದಲ್ಲಿ ವಿಚಾರಣೆ ಮುಕ್ತಾಯಗೊಂಡು ಇತರೆ 5 ಆರೋಪಿ ದೊಡ್ಡ ಹನುಮ @ ಹನುಮ ಸೇರಿ ಘನ ನ್ಯಾಯಾಲಯವು ದೋಷಿ ಎಂದು ತೀರ್ಪು ನೀಡಿರುತ್ತದೆ.
ಈ ಪ್ರಕರಣದಲ್ಲಿ ಅವಾಧಿತನಾದ ಚಿಕ್ಕ ಹನುಮ @ ಚಿಕ್ಕ ಹನುಮಂತಪ್ಪ @ ಕೆ. ಕೃಷ್ಣಪ್ಪ @ ಕೃಷ್ಣ ತನ್ನ ಬುದ್ದಿವಂತಿಕೆಯನ್ನು ಬಳಸಿ ಚಿಕ್ಕ ಹನುಮಂತಪ್ಪ @ ಕೆ. ಕೃಷ್ಣಪ್ಪ @ ಕೃಷ್ಣ ಎಂದು ಹೆಸರು ಬದಲಾಯಿಸಿಕೊಂಡು ದಸ್ತಗಿರಿಗೆ ಸಿಗದೇ ಮಾನ್ಯ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ಆಂದ್ರಪ್ರದೇಶ ರಾಜ್ಯದಲ್ಲಿ ತಲೆಮರೆಸಿಕೊಂಡಿರುತ್ತಾನೆ. ಈತನ ಮೇಲೆ ಮಂಗಳೂರು ಮಾನ್ಯ JMFC 2ನೇ ನ್ಯಾಯಾಲಯವು 2010 ರಲ್ಲಿ LPC ವಾರೆಂಟ್ ಹೊರಡಿಸಿತ್ತು. ಈತನ ಮೇಲೆ ಕರ್ನಾಟಕ ರಾಜ್ಯದಲ್ಲಿ ಸುಮಾರು 13 ಕೊಲೆ,ದರೋಡೆ ಪ್ರಕರಣಗಳು ದಾಖಲಾಗಿರುವುದು ತಿಳಿದು ಬಂದಿದ್ದು ಇದರ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಸಂಗ್ರಹಿಸಲಾಗುತ್ತಿದೆ..
ಈ ಪತ್ತೆ ಕಾರ್ಯದಲ್ಲಿ ಉರ್ವಾ ಪೊಲೀಸ್ ಠಾಣೆಯ ನಿರೀಕ್ಷಕರಾದ ಶ್ಯಾಮ್ ಸುಂಧರ್ ಹೆಚ್.ಎಮ್, ಪಿಎಸ್ಐ ಗುರಪ್ಪ ಕಾಂತಿ, ಪಿಎಸ್ಐ ಎಲ್.ಮಂಜುಳಾ ಎಎಸ್ಐ ವಿನಯ ಕುಮಾರ್ ಮತ್ತು ಸಿಬ್ಬಂದಿಗಳಾದ ಲಲಿತಲಕ್ಷ್ಮಿ. ಅನಿಲ್, ಪ್ರಮೋದ್, ಆತ್ಮಾನಂದ, ಹರೀಶ್ ರವರು ಶ್ರಮಿಸಿರುತ್ತಾರೆ. ಸದ್ರಿ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಮಂಗಳೂರು ನಗರ ಪೊಲೀಸ್ ಆಯುಕ್ತರು ಪ್ರಶಾಂಸೆಯನ್ನು ವ್ಯಕ್ತ ಪಡಿಸಿ, ಹೆಚ್ಚು ಬಹುಮಾನಕ್ಕಾಗಿ ಕರ್ನಾಟಕ ರಾಜ್ಯದ ಡಿಜಿಪಿಐಜಿಪಿ ರವರಿಗೆ ಶಿಫಾರಸ್ಸು ಮಾಡಲಾಗಿದೆ.
ಇನ್ನು ವಿಚಾರಣಾ ನ್ಯಾಯಾಲಯವು 5 ಆರೋಪಿಗಳನ್ನು ದೋಷಿಗಳೆಂದು ಘೋಷಿಸಿ, ಆರಂಭದಲ್ಲಿ ಮರಣದಂಡನೆ ವಿಧಿಸಿತ್ತು. ನಂತರ, ಅವರು ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದರು ಮತ್ತು ಹೈಕೋರ್ಟ್ನ ನಿರ್ದೇಶನಗಳ ಆಧಾರದ ಮೇಲೆ ಶಿಕ್ಷೆಯನ್ನು ರದ್ದುಗೊಳಿಸಿ ಹೊಸದಾಗಿ ವಿಲೇವಾರಿ ಮಾಡಲು ಆದೇಶಿಸಿ, ಅವರ ವಿರುದ್ಧದ ಪ್ರಕರಣವನ್ನು ಖುಲಾಸೆಗೊಳಿಸಲಾಯಿತು. ಆದರೆ ಕರ್ನಾಟಕದಾದ್ಯಂತ ಅವರ ವಿರುದ್ಧ ಇನ್ನೂ ಪ್ರಕರಣಗಳು ಬಾಕಿ ಉಳಿದಿವೆ. ಮತ್ತು ಚಿಕ್ಕ ಹನುಮಂತು ಅವರನ್ನು ಖುಲಾಸೆಗೊಳಿಸಲಾಗಿಲ್ಲ ಮತ್ತು ನಮ್ಮ ಪ್ರಕರಣ ಮತ್ತು ಇತರ ಪ್ರಕರಣಗಳಲ್ಲಿಯೂ ವಿಚಾರಣೆ ನಡೆಸಬೇಕಾಗಿದೆ. ಎಲ್ಲಾ ಪ್ರಕರಣಗಳ ಸ್ಥಿತಿಯ ಬಗ್ಗೆ ನಾವು ಎಲ್ಲಾ ಠಾಣೆಗಳನ್ನು ಕೇಳಿದ್ದೇವೆ ಮತ್ತು ಎಲ್ಲಾ ಪ್ರಕರಣಗಳಲ್ಲಿ ಅವರನ್ನು ವಿಚಾರಣೆಗೆ ಒಳಪಡಿಸುವ ಪ್ರಕ್ರಿಯೆಯು ಈಗ ಪ್ರಾರಂಭವಾಗುತ್ತದೆ ಎಂದು ಪೊಲೀಸ್ ಆಯುಕ್ತರು ಹೇಳಿದ್ದಾರೆ.