

ಬೆಳ್ತಂಗಡಿ; ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಜ25ರಂದು ಆಗಮಿಸಲಿದ್ದಾರೆ.
ಬೆಳಿಗ್ಗೆ 10 ಗಂಟೆಗೆ
ಕಾಶಿಪಟ್ನ ಗ್ರಾಮ ಪಂಚಾಯತ್ ವಿವಿಧ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ನೆರವೇರಿಸಲಿರುವ ಸಚಿವರು
ಬಳಿಕ 11 ಗಂಟೆಗೆ
ಕುಕ್ಕೆಡಿಯಲ್ಲಿ ನವೀಕೃತ ಡಾ. ಬಿ.ಆರ್ ಅಂಬೇಡ್ಕರ್ ಭವನದ ಉದ್ಘಾಟನೆ ಮತ್ತು ಹಕ್ಕು ಪತ್ರ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ
ಮಧ್ಯಾಹ್ನ 12:30
ಕನ್ಯಾಡಿ ಗ್ರಾಮದ ಪಡ್ಪು ಎಂಬಲ್ಲಿ ಮೂರು ಕೋಟಿ ವೆಚ್ಚದ ರಸ್ತೆ ಉದ್ಘಾಟನೆ
ಮಧ್ಯಾಹ್ನ 1.15
ನಡ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಭಾಗಿಗಳಾಗಲಿದ್ದು
ಮಧ್ಯಾಹ್ನ 2 ಗಂಟೆಗೆ
ಕಾಜೂರು ಮಖಾಂ ಉರೂಸ್, ಕಾರ್ಯಕ್ರಮದಲ್ಲಿ ಭಾಗಿಗಳಾಗಲಿದ್ದಾರೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ತಿಳಿಸಿದ್ದಾರೆ








