Home ಸ್ಥಳೀಯ ಸಮಾಚಾರ ಬೆನಕ ಹೆಲ್ತ್ ಸೆಂಟರ್ ಉಜಿರೆಯ ಡಾ. ಗೋಪಾಲಕೃಷ್ಣ ಕೆ ಅವರಿಗೆ “ಆಯುಷ್ ಶ್ರೀ” ಪ್ರಶಸ್ತಿ

ಬೆನಕ ಹೆಲ್ತ್ ಸೆಂಟರ್ ಉಜಿರೆಯ ಡಾ. ಗೋಪಾಲಕೃಷ್ಣ ಕೆ ಅವರಿಗೆ “ಆಯುಷ್ ಶ್ರೀ” ಪ್ರಶಸ್ತಿ

0

ಮಂಗಳೂರು: ಮಂಗಳೂರಿನ ಡಾ. ಟಿ.ಎಂ.ಎ. ಪೈ ಅಂತಾರಾಷ್ಟ್ರೀಯ ಕನ್ವೆನ್ಷನ್ ಸೆಂಟರ್‌ನಲ್ಲಿ ಆಯೋಜಿಸಲಾದ ಆಯುಷ್ ಹಬ್ಬ–2026ರ ಅಂಗವಾಗಿ ನಡೆದ ಆಯುಷ್ ಅಭಿನಂದನಂ ಕಾರ್ಯಕ್ರಮದಲ್ಲಿ ಆಯುಷ್ ವೈದ್ಯ ಪದ್ಧತಿಗಳಲ್ಲಿ ಗಣನೀಯ ಸಾಧನೆ ಮಾಡಿದ ಸಾಧಕರಿಗೆ ಗೌರವ ಸಲ್ಲಿಸಲಾಯಿತು.

ಈ ಸಮಾರಂಭದಲ್ಲಿ ಉಜಿರೆಯ ಬೆನಕ ಹೆಲ್ತ್ ಸೆಂಟರ್‌ನ ವೈದ್ಯಕೀಯ ನಿರ್ದೇಶಕರಾದ ಡಾ. ಗೋಪಾಲಕೃಷ್ಣ ಕೆ ಅವರಿಗೆ ಸಮಾಜಕ್ಕೆ ಆಯುಷ್ ವೈದ್ಯ ಪದ್ಧತಿಗಳ ಮೂಲಕ ಸಲ್ಲಿಸಿದ ವಿಶಿಷ್ಟ ಹಾಗೂ ನಿರಂತರ ಸೇವೆಯನ್ನು ಗುರುತಿಸಿ ಪ್ರತಿಷ್ಠಿತ “ಆಯುಷ್ ಶ್ರೀ” ಪ್ರಶಸ್ತಿ ಪ್ರದಾನಿಸಲಾಯಿತು.

ಡಾ. ಗೋಪಾಲಕೃಷ್ಣ ಕೆ ಅವರು ಆಯುರ್ವೇದ ಮತ್ತು ಸಮಗ್ರ ವೈದ್ಯಕೀಯ ಚಿಕಿತ್ಸೆಯ ಮೂಲಕ ಅನೇಕ ರೋಗಿಗಳಿಗೆ ಆರೋಗ್ಯಕರ ಜೀವನವನ್ನು ನೀಡುವಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ. ಅವರ ಸೇವಾಭಾವ, ಸಮರ್ಪಣೆ ಮತ್ತು ಮಾನವೀಯ ವೈದ್ಯಕೀಯ ದೃಷ್ಟಿಕೋನವು ಸಮಾಜಕ್ಕೆ ಮಾದರಿಯಾಗಿದೆ ಎಂದು ಈ ಸಂದರ್ಭದಲ್ಲಿ ವಕ್ತಾರರು ಅಭಿಪ್ರಾಯಪಟ್ಟರು.

ಆಯುಷ್ ಹಬ್ಬ–2026ರ ಉದ್ದೇಶ ಭಾರತೀಯ ವೈದ್ಯ ಪದ್ಧತಿಗಳ ಮಹತ್ವವನ್ನು ಜನರಿಗೆ ತಲುಪಿಸುವುದು ಹಾಗೂ ಈ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ವೈದ್ಯರನ್ನು ಗೌರವಿಸುವುದಾಗಿದೆ. ಈ ಕಾರ್ಯಕ್ರಮದಲ್ಲಿ ವಿವಿಧ ಆಯುಷ್ ವೈದ್ಯ ಪದ್ಧತಿಗಳ ತಜ್ಞರು, ಆರೋಗ್ಯ ಕ್ಷೇತ್ರದ ಗಣ್ಯರು ಮತ್ತು ಸಾರ್ವಜನಿಕರು ಭಾಗವಹಿಸಿದ್ದರು

NO COMMENTS

LEAVE A REPLY

Please enter your comment!
Please enter your name here

Exit mobile version