Home ಸ್ಥಳೀಯ ಸಮಾಚಾರ ಕೇಂದ್ರ ಬಜೆಟ್ ನಲ್ಲಿ ಕರಾವಳಿಯ ಅವಗಣನೆ ಖಂಡನಾರ್ಹ: ರಕ್ಷಿತ್ ಶಿವರಾಂ

ಕೇಂದ್ರ ಬಜೆಟ್ ನಲ್ಲಿ ಕರಾವಳಿಯ ಅವಗಣನೆ ಖಂಡನಾರ್ಹ: ರಕ್ಷಿತ್ ಶಿವರಾಂ

0

ಬೆಳ್ತಂಗಡಿ: ಕೇಂದ್ರದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ರವರು ಈ ಬಾರಿಯ ಬಜೆಟ್ ನಲ್ಲಿ ಕರಾವಳಿಗೆ ಯಾವುದೇ ಹೊಸ ಯೋಜನೆಗಳನ್ನಾಗಲಿ, ಅನುದಾನಗಳನ್ನು ಘೋಷಿಸದೆ ಅವಗಣನೆ ಮಾಡಿರುವುದು ಸಮಸ್ತ ದಕ್ಷಿಣ ಕನ್ನಡ ಜಿಲ್ಲೆಗೆ ಮಾಡಿದ ಅನ್ಯಾಯ.

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಜನ ಕಳೆದ ಸುಮಾರು 25 ವರ್ಷಗಳಿಂದ ಭಾರತೀಯ ಜನತಾ ಪಕ್ಷದ ಸಂಸದರನ್ನೇ ಆಯ್ಕೆ ಮಾಡಿ ಸಂಸತ್ತಿಗೆ ಕಳುಹಿಸಿಕೊಡುತ್ತಿದ್ದರೂ ಕೇಂದ್ರ ಸರಕಾರ ಸತತವಾಗಿ ಕರಾವಳಿ ಭಾಗಕ್ಕೆ ಅನ್ಯಾಯ ಮಾಡುತ್ತಿರುವುದನ್ನು ಸಹಿಸಲಸಾಧ್ಯವಾಗಿದೆ. ಎಂದು ಕೆಪಿಸಿಸಿ ಕಾರ್ಯದರ್ಶಿ ರಕ್ಷಿತ್ ಶಿವರಾಂ ಪತ್ರಿಕಾಹೇಳಿಕೆಯಲ್ಲಿ ತಿಳಿಸಿದ್ದಾರೆ.

NO COMMENTS

LEAVE A REPLY

Please enter your comment!
Please enter your name here

Exit mobile version