Home ಅಪರಾಧ ಲೋಕ ಕಳಿಯ ಸುಮಂತ್ ಕೊಲೆ ಪ್ರಕರಣ ವದಂತಿಗಳಿಗೆ ಕಿವಿಕೊಡಬೇಡಿ, ವದಂತಿ ಹರಡುವವರ ವಿರುದ್ದ ಕ್ರಮ ಎಸ್.ಪಿ ಹೇಳಿಕೆ

ಕಳಿಯ ಸುಮಂತ್ ಕೊಲೆ ಪ್ರಕರಣ ವದಂತಿಗಳಿಗೆ ಕಿವಿಕೊಡಬೇಡಿ, ವದಂತಿ ಹರಡುವವರ ವಿರುದ್ದ ಕ್ರಮ ಎಸ್.ಪಿ ಹೇಳಿಕೆ

0

ಬೆಳ್ತಂಗಡಿ; ಕಳಿಯದಲ್ಲಿ ನಡೆದ ಸುಮಂತ್ ಕೊಲೆ ಪ್ರಕರಣದ ಬಗ್ಗೆ ನಡೆದ ತನಿಖೆಯಲ್ಲಿ ಈ ವರೆಗೆ ವಿಧಿವಿಜ್ಞಾನ ಪ್ರಯೋಗಾಲಯಗಳ ವರದಿಗಳು ಬಂದಿಲ್ಲ ಈ ಬಗ್ಗೆ ತನಿಖೆ ನಡೆಯುತ್ತಿದೆ ಆದರೆ ಕೆಲವರು ಆರೋಪಿಗಳ ಬಗ್ಗೆ ಊಹಾಪೋಹಗಳನ್ನು ಹರಡುವ ಕಾರ್ಯವನ್ನು ಮಾಡುತ್ತಿದ್ದಾರೆ ಇಂತಹ ವದಂತಿಗಳಿಗೆ ಸಾರ್ವಜನಿಕರು ಕಿವಿಕೊಡಬಾರದು ಹಾಗೂ ವದಂತಿಗಳನ್ನು ಹರಡುವವರ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ಈ ಬಗ್ಗೆ ಫೆ.3 ರಂದು ಪತ್ರಿಕಾ ಪ್ರಕಟಣೆ ನೀಡಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರು
ದಿನಾಂಕ 14-01-2026 ರಂದು ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಒಡಿಲ್ನಾಳ ಗ್ರಾಮದ ಸಂಬೋಳ್ಯದ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಮೊದಲು ಹೊರಡಿಸಿದ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದಂತೆ, ಮೃತ್ಯುವಿನ ಕಾರಣ ಮುಳುಗು (drowning) ಆಗಿದೆ. ಆದರೆ ತಲೆಯಲ್ಲಿದ್ದ ಗಾಯದಿಂದ ಸಂಶಯ ಉಂಟಾದ ಕಾರಣ ಪ್ರಕರಣವನ್ನು ಸಂಪೂರ್ಣ ಹಾಗೂ ಸಮಗ್ರವಾಗಿ ತನಿಖೆ ನಡೆಸುವ ಉದ್ದೇಶದಿಂದ ಹತ್ಯೆ (murder) ಕಲಂನ್ನು ಸೇರಿಸಲಾಗಿದೆ. ವೈದ್ಯಕೀಯ ನ್ಯಾಯವಿಜ್ಞಾನ (Forensic) ಹಾಗೂ ಅಂತಿಮ ಮರಣೋತ್ತರ ಪರೀಕ್ಷಾ (Final PM) ವರದಿ ಇನ್ನೂ ಬರಬೇಕಿದ್ದು, ಇದು ಹತ್ಯೆಯೇ ಅಥವಾ ಅಸಹಜ ಮರಣ (UDR)ವೇ ಎಂಬುದರ ಬಗ್ಗೆ ಈವರೆಗೆ ಯಾವುದೇ ನಿರ್ಧಾರಕ್ಕೆ ಬರಲಾಗುವುದಿಲ್ಲ.
ಈ ಮಧ್ಯೆ, ಕೆಲವರು ಪ್ರಕರಣಕ್ಕೆ ಸಂಬಂಧಿಸಿದಂತೆ ವಿವಿಧ ಸಿದ್ಧಾಂತಗಳನ್ನು ರೂಪಿಸಿ ಆರೋಪಿಗಳನ್ನು ಕುರಿತು ಊಹಾಪೋಹಗಳನ್ನು ಹರಡುತ್ತಿದ್ದಾರೆ. ತನಿಖೆ ಎಲ್ಲ ಸಾಧ್ಯತೆಗಳನ್ನು ಪರಿಶೀಲಿಸುವ ದಿಸೆಯಲ್ಲಿ ನಡೆಯುತ್ತಿದೆ; ಆದರೆ ವಿಚಾರಣೆಗೊಳಪಡಿಸಲಾದ ಪ್ರತಿಯೊಬ್ಬರೂ ಆರೋಪಿಗಳೇ ಎನ್ನುವುದಿಲ್ಲ. ಈ ಪ್ರಕರಣದ ಎಲ್ಲ ಅಂಶಗಳನ್ನು ಸಮಗ್ರವಾಗಿ ಪರಿಶೀಲಿಸಲು ನಾಲ್ಕು ವಿಶೇಷ ತನಿಖಾ ತಂಡಗಳು ಕಾರ್ಯನಿರ್ವಹಿಸುತ್ತಿವೆ.

ಇದಲ್ಲದೆ ಆಗಸ್ಟ್ 2025 ರ ಒಂದು ಅಸಹಜ ಮರಣ (UDR) ಪ್ರಕರಣವನ್ನು ಈ ಪ್ರಕರಣದೊಂದಿಗೆ ಸಂಪರ್ಕಿಸಲಾಗಿದೆ ಎಂದು ಗಮನಕ್ಕೆ ಬಂದಿದೆ. ಇದುವರೆಗೆ ಆ ಇನ್ನೊಂದು ಪ್ರಕರಣ ಹತ್ಯೆಯಾಗಿದೆ ಎಂಬುದಕ್ಕೆ ಯಾವುದೇ ಸಾಕ್ಷ್ಯ ಲಭ್ಯವಿಲ್ಲ.

ಯಾವುದೇ ಶಂಕಿತರ ಕುರಿತು ಹರಡಲಾಗುತ್ತಿರುವ ವಿವಿಧ ವದಂತಿಗಳಿಗೆ ಸಾರ್ವಜನಿಕರು ಕಿವಿಗೊಡಬಾರದೆಂದು ಮನವಿ ಮಾಡಲಾಗಿದೆ. ಇಂತಹ ವದಂತಿಗಳನ್ನು ಹರಡುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಪತ್ರಿಕಾಹೇಳಿಕೆಯಲ್ಲಿ ತಿಳಿಸಿದ್ದಾರೆ.

NO COMMENTS

LEAVE A REPLY

Please enter your comment!
Please enter your name here

Exit mobile version