Home ಸ್ಥಳೀಯ ಸಮಾಚಾರ ಸಂಭ್ರಮದ ಬಂಗಾಡಿ ಕೊಲ್ಲಿ ಸೂರ್ಯಚಂದ್ರ ಜೋಡುಕರೆ ಕಂಬಳ

ಸಂಭ್ರಮದ ಬಂಗಾಡಿ ಕೊಲ್ಲಿ ಸೂರ್ಯಚಂದ್ರ ಜೋಡುಕರೆ ಕಂಬಳ

2
0

ಬೆಳ್ತಂಗಡಿ: ಕಂಬಳ ಕ್ರೀಡೆ ಎಂದರೆ ಅದು ತುಳುನಾಡಿನ ಜಾನಪದ ಕ್ರೀಡೆಯ ಜೊತೆಗೆ ಈ ತುಳುನಾಡಿನ ಸಂಸ್ಕೃತಿ, ಆಚಾರ, ವಿಚಾರ, ಸೌಹಾರ್ದತೆ ಯನ್ನು ಸಂತೋಷದಿಂದ ಆಚರಿಸಿಕೊಂಡು ಅದನ್ನು ಯುವಜನತೆಗೆ, ವಿದ್ಯಾರ್ಥಿಗಳಿಗೆ ಮಾತ್ರವಲ್ಲದೆ ಮುಂದೆ ಹುಟ್ಟುವ ಪೀಳಿಗೆಗೆ ವರ್ಗಾಯಿಸುವ ಕೆಲಸ ಎಂದು ವಿಧಾನ ಸಭೆಯ ಸಭಾಪತಿ ಯು.ಟಿ ಖಾದರ್ ಹೇಳಿದರು.

ಬಂಗಾಡಿ ಕೊಲ್ಲಿ ಸೂರ್ಯಚಂದ್ರ ಜೋಡುಕರೆ ಕಂಬಳ ಸಮಿತಿ ವತಿಯಿಂದ ನಡೆದ ಕಂಬಳ ಕೂಟದಲ್ಲಿ ಭಾಗವಹಿಸಿದ ಅವರು ಶುಭ ಕೋರಿದರು.

ಈ‌ ರೀತಿಯ ಕ್ರೀಡೆಯ ಮೂಲಕ ಹಿರಿಯರು ಕೊಡುಗೆ ನೀಡಿದ್ದಾರೆ. ಅದರ ಕಾರಣದಿಂದ ಪಾಶ್ಚಾತ್ಯ ಸಂಸ್ಕೃತಿ ಎಷ್ಟೇ ಪ್ರಭಾವ ನೀಡಿದರೂ ನಮ್ಮ ತುಳುನಾಡ ಸಂಸ್ಕೃತಿಯನ್ನು ಮೆಟ್ಟಿನಿಲ್ಲಲು ಯಾರಿಂದಲೂ ಸಾಧ್ಯವಾಗಿಲ್ಲ ಎಂಬುದು ಕಠಿಣ ಸತ್ಯ ಎಂದವರು‌ ಹೇಳಿದರು.

ಈ ಸಂದರ್ಭದಲ್ಲಿ
ಯುವ ಕಾಂಗ್ರೆಸ್ ಜಿಲ್ಲಾ ಮುಖಂಡರಾದ ಅಭಿನಂದನ್ ಹರೀಶ್‌ ಕುಮಾರ್, ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ ಹಾಗೂ ಇತರರು ಉಪಸ್ಥಿತರಿದ್ದರು.
ಕಂಬಳ ಸಮಿತಿ ಅಧ್ಯಕ್ಷ ರಂಜನ್ ಜಿ ಗೌಡ ಸ್ವಾಗತಿಸಿದರು.
ಕಾರ್ಯಾಧ್ಯಕ್ಷ ಪುಷ್ಪರಾಜ ಶೆಟ್ಟಿ ಸಹಿತ ಎಲ್ಲಾ ಪದಾಧಿಕಾರಿಗಳು ಸಭಾಪತಿಗಳನ್ನು ಗೌರವಿಸಿದರು.

LEAVE A REPLY

Please enter your comment!
Please enter your name here