Home ಸ್ಥಳೀಯ ಸಮಾಚಾರ ಚಿತ್ಪಾವನ ಬ್ರಾಹ್ಮಣರ ಸಂಘದ ಮಹಿಳಾ ಘಟಕದ ಉದ್ಘಾಟನೆ

ಚಿತ್ಪಾವನ ಬ್ರಾಹ್ಮಣರ ಸಂಘದ ಮಹಿಳಾ ಘಟಕದ ಉದ್ಘಾಟನೆ

0


ಬೆಳ್ತಂಗಡಿ: ತಾಲೂಕು ಚಿತ್ಪಾವನ ಬ್ರಾಹ್ಮಣರ ಸಂಘದ ಮಹಿಳಾ ಘಟಕದ ಉದ್ಘಾಟನಾ ಸಮಾರಂಭ ಮಂಗಳವಾರ ಮುಂಡಾಜೆಯ ಶ್ರೀ ಪರಶುರಾಮ ದೇವಸ್ಥಾನದ ಸಭಾ ಭವನದಲ್ಲಿ ಜರಗಿತು.
ನಿಡ್ಲೆಯ ಉದ್ಯಮಿ ಲಲಿತಾ ಲಕ್ಷ್ಮೀಶ ರಾವ್ ಕಾರ್ಯಕ್ರಮ ಉದ್ಘಾಟಿಸಿ ಸಾಧನೆಗೆ ಪ್ರಯತ್ನದ ಜತೆ ಛಲವು ಇರಬೇಕು. ಹಿರಿಯರನ್ನು ಗೌರವಯುತವಾಗಿ ಕಾಣುವುದರೊಂದಿಗೆ ಅವರ ಸಲಹೆ ಸೂಚನೆಗಳೊಂದಿಗೆ ಮುಂದುವರಿದರೆ ಉನ್ನತಿ ಗಳಿಸಲು ಸಾಧ್ಯ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಚಿತ್ಪಾವನ ಬ್ರಾಹ್ಮಣ ಸಂಘದ ಅಧ್ಯಕ್ಷ ತ್ರಿವಿಕ್ರಮ ಹೆಬ್ಬಾರ್ ಮಾತನ್ನಡಿ ಮಹಿಳಾ ವಿಭಾಗ ಸ್ಥಾಪನೆಯಿಂದ ಸಂಘದ ಬಲ ಹೆಚ್ಚಿದೆ. ಮಹಿಳೆಯರ ಸಾಧನೆಗಳಿಗೆ ಉತ್ತಮ ವೇದಿಕೆ ನಿರ್ಮಾಣವಾಗಿದೆ ಎಂದರು.
ನೂತನ ಅಧ್ಯಕ್ಷೆ ಅಶ್ವಿನಿ ಎ.ಹೆಬ್ಬಾರ್ ಮಾತನಾಡಿ ಸಂಘಟನೆಗಳು ಸಾಧನೆಗೆ ಪ್ರೇರಣೆ ನೀಡುತ್ತವೆ.ಸಮಾಜದಲ್ಲಿ ಮಹಿಳೆಯರು ಸಾಕಷ್ಟು ಸಾಧನೆಗಳನ್ನು ಮಾಡುತ್ತಿರುವುದು ಶ್ಲಾಘನೀಯ ಎಂದರು.
ಶಿವಳ್ಳಿ ಮಹಿಳಾ ಘಟಕದ ಅಧ್ಯಕ್ಷೆ ಜಯಾ ಅನಂತ ಕೃಷ್ಣ ಅರ್ಮುಡತ್ತಾಯ, ಸ್ಥಾನಿಕ ಮಹಿಳಾ ಘಟಕದ ಅಧ್ಯಕ್ಷೆ ರಾಜೇಶ್ವರಿ ರಾವ್,ಚಿತ್ಪಾವನ ಸಂಘದ ಭಾರತಿ ಫಡಕೆ,ನಾರಾಯಣ ಫಡಕೆ ಶುಭ ಹಾರೈಸಿದರು.ತಾಲೂಕು
ಚಿತ್ಪಾವನ ಸಂಘಟನೆ ಕಾರ್ಯದರ್ಶಿ ಸುಷ್ಮಾ ಭಿಡೆ ಸ್ವಾಗತಿಸಿದರು.ಚಿತ್ರಾ ಭಿಡೆ ಕಾರ್ಯಕ್ರಮ ನಿರೂಪಿಸಿದರು.
ಮಹಿಳಾ ಘಟಕದ ಕಾರ್ಯದರ್ಶಿ ಡಾ. ದೀಪಾಲಿ ಡೋಂಗ್ರೆ ವಂದಿಸಿದರು.ಖಜಾಂಜಿ ಡಾ.ಸುಷ್ಮಾ ಡೋಂಗ್ರೆ ಅತಿಥಿಗಳ ಪರಿಚಯ ನೀಡಿದರು.

NO COMMENTS

LEAVE A REPLY

Please enter your comment!
Please enter your name here

Exit mobile version