ಬೆಳ್ತಂಗಡಿ; ತಾಲೂಕು ಆಸ್ಪತ್ರೆಯ ಸಮಸ್ಯೆಗಳ ಬಗ್ಗೆ ಜಿಲ್ಲಾ ಆರೋಗ್ಯಾಧಿಕಾರಿ ಅವರು ಬೆಳ್ತಂಗಡಿ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ರಕ್ಷಾ ಸಮಿತಿಯ ಸದಸ್ಯರ ಸಭೆ ನಡೆಸಿ ಚರ್ಚೆ ನಡೆಸಿದರು.
ತಾಲೂಕು ಆಸ್ಪತ್ರೆಯ ಸಮಸ್ಯೆಗಳ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರಿಗೆ ತಿಳಿಸಿದಾಗ ಅವರು ಕೂಡಲೇ ಅರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಅವರ ಗಮನಕ್ಕೆ ತಂದ ಹಿನ್ನಲೆಯಲ್ಲಿ ಜಿಲ್ಲಾ ಅರೋಗ್ಯ ಅಧಿಕಾರಿ ಇಂದು ಆಸ್ಪತ್ರೆಗೆ ಭೇಟಿ ನೀಡಿ ಸದಸ್ಯರೊಂದಿಗೆ ಸಮಾಲೋಚನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಅರೋಗ್ಯ ರಕ್ಷಾ ಸಮಿತಿ ಸದಸ್ಯರು ವೀರೇಂದ್ರ ಕುಮಾರ್ ಜೈನ್. ನವೀನ್ ಗೌಡ ಸವಣಾಲು. ಸವಿತ ಕೊರಗ. ರಶೀದ್ ಕಕ್ಕಿಂಜೆ ಉಪಸ್ಥಿತರಿದ್ದರು.
