Home ರಾಜಕೀಯ ಸಮಾಚಾರ ಅಡ್ಡ ಮತದಾನ ವಿವಾದ:ಬೇಲೂರು ಶಾಸಕ ಹೆಚ್. ಕೆ. ಸುರೇಶ್ ಧರ್ಮಸ್ಥಳದಲ್ಲಿ ಅಣೆ ಪ್ರಮಾಣ

ಅಡ್ಡ ಮತದಾನ ವಿವಾದ:ಬೇಲೂರು ಶಾಸಕ ಹೆಚ್. ಕೆ. ಸುರೇಶ್ ಧರ್ಮಸ್ಥಳದಲ್ಲಿ ಅಣೆ ಪ್ರಮಾಣ

0

ಬೆಳ್ತಂಗಡಿ: ರಾಜ್ಯ ವಿಧಾನ ಪರಿಷತ್ ಚುನವಾಣೆಯಲ್ಲಿ ಬಿಜೆಪಿ ಪಾಳದಲ್ಲಿ ನಡೆದ ಅಡ್ಡ ಮತದಾನ ತೀವ್ರ ಚರ್ಚೆಯಾಗುತ್ತಿದ್ದಿ, ಬಿಜೆಪಿಯ ಶಾಸಕರು ನಾನಲ್ಲ ನಾನಲ್ಲ ಎನ್ನುತ್ತಿರುವ ವೇಳೆ ಹಾಸನ ಜಿಲ್ಲೆಯ ಬೇಲೂರು ಶಾಸಕ ಹುಲ್ಲಹಳ್ಳಿ ಕೆ.ಸುರೇಶ್ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಆಣೆ ಪ್ರಮಾಣ ಮಾಡಿದರು.

ಧರ್ಮಸ್ಥಳಕ್ಕೆ  ಭೇಟಿ ನೀಡಿದ ಅವರು ಮಂಜುನಾಥ ಸ್ವಾಮಿಯ ದರ್ಶನ ಪಡೆದು ನನ್ನ ಮೇಲೆ ಅಪಪ್ರಚಾರ ಮಾಡಿದವರಿಗೆ ಒಳ್ಳೆಯದಾಗಲಿ ಎಂದು ಪ್ರಾರ್ಥನೆ ಮಾಡಿ ತನ್ನ ನಂಬಿದ ಜನತೆ ಹಾಗೂ ಆರೋಪಕ್ಕೆ  ಸಲುವಾಗಿ ಕಾಣಿಕೆಯನ್ನು ಹುಂಡಿ ಹಾಕಿದರು.

ನಾನು ಪಕ್ಷ ದ್ರೋಹ ಮಾಡಿಲ್ಲ, ಬಿಜೆಪಿಯ ನಿಷ್ಟವಾಂತ ಪ್ರಾಮಾಣಿಕ ಕಾರ್ಯಕರ್ತ. ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿಲ್ಲ, ಪಕ್ಷದ ವರಿಷ್ಠರು ಸೂಚಿಸಿದ ವ್ಯಕ್ತಿಗೆ ಮತದಾನ ಮಾಡಿದೇನೆ ಎಂದು ಮಂಜುನಾಥ ಸ್ವಾಮಿ ಸನ್ನಿದಿಯಲ್ಲಿ ಪ್ರಮಾಣ ಮಾಡುತ್ತೇನೆ. ನನ್ನ ಮೇಲೆ ಬಂದಿರುವ ಆರೋಪಕ್ಕೆ ಮಂಜುನಾಥ ಸ್ವಾಮಿಯೇ ಹಾಗೂ ನನ್ನ ಕ್ಷೇತ್ರದ ಜನರೇ ಸಾಕ್ಷಿ. ಬಿಜೆಪಿ ಪಕ್ಷ ನನ್ನ ತಾಯಿ ಹಾಗಾಗಿ ನನ್ನ ಬೆಳವಣಿಗೆಯನ್ನು ಸಹಿಸಲಾರದೆ ಕೆಲವರು ನನ್ನ ಮೇಲೆ ಆರೋಪ ಮಾಡುತ್ತಿದ್ದಾರೆ ಎಂದು ಶಾಸಕ ಹೆಚ್ ಕೆ. ಸುರೇಶ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.

“ದೇವಸ್ಥಾನಕ್ಕೆ ಭೇಟಿ ನೀಡುವ ಮುನ್ನ ಅಣ್ಣಪ್ಪ ಬೆಟ್ಟದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿ  ನಾನು ಮೋಸ ಮಾಡಿಲ್ಲ  ಅಪಪ್ರಚಾರ ಮಾಡಿದವರಿಗೆ ಒಳ್ಳೆಯ ಬುದ್ಧಿ ನೀಡಲಿ ಎಂದು ಹೇಳಿ ತೆಂಗಿನಕಾಯಿ ಒಡೆದರು.”

259 ಅಧಿಕ ಮಂದಿ ಬೆಂಬಲಿಗರು 100 ಕ್ಕೂ ಮಿಕ್ಕಿ ಕಾರಿನಲ್ಲಿ ಕೇಸರಿ ಶಾಲು, ಬಿಜೆಪಿ ಪಕ್ಷದ ಬಾವುಟ ಹಿಡಿದುಕೊಂಡೀ ಧರ್ಮಸ್ಥಳಕ್ಕೆ ಆಗಮಿಸಿದರು.

ಪವಿತ್ರ ನೇತ್ರಾವತಿ ನದಿಯಲ್ಲಿ ತೀರ್ಥ ಪ್ರೋಕ್ಷಣೆ ಮಾಡಿ  ನಮಸ್ಕಾರಿಸಿ  ಬಳಿಕ ಮಂಜುನಾಥ ಸ್ವಾಮಿಯ ದರ್ಶನ ಪಡೆದರು. ಕಾರ್ಯರ್ಕತರು ಪ್ರಾಮಾಣಿಕ ಶಾಸಕರು, ನಾವು ದ್ರೋಹ ಮಾಡಿಲ್ಲ, ಭಾರತ ಮಾತೆಗೆ,  ಜೈಕಾರ ಕೂಗಿದರು.

NO COMMENTS

LEAVE A REPLY

Please enter your comment!
Please enter your name here

Exit mobile version