
ಬೆಳ್ತಂಗಡಿ; ತಾಲೂಕಿನಾದ್ಯಂತ ಕಳೆದ ಎರಡುದಿನಗಳಿಂದ ನಿರಂತರವಾಗಿ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ನದಿಗಳು, ಹಳ್ಳಗಳು ಹಾಗೂ ತೊರೆಗಳು ತುಂಬಿ ಹರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಶಿಶಿಲ ಗ್ರಾಮದ ಪವಿತ್ರ ಮತ್ತ್ವತೀರ್ಥ ಶ್ರೀ ಶಿಶಿಲೇಶ್ವರ ದೇವಸ್ಥಾನದ ಕಪಿಲ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗಿದ್ದು ದೇವಸ್ಥಾನದ ಅಂಗಣಕ್ಕೆ ನದಿ ನೀರು ನುಗ್ಗಿದೆ ಶಿಶಿಲೇಶ್ವರ ದೇವಸ್ಥಾನಕ್ಕೆ ಸಂಪರ್ಕ ಕಲ್ಪಿಸುವ ಕಿಂಡಿಅಣೆಕಟ್ಟು ಹಾಗೂ ಸೇತುವೆ ಜಲಾವೃತವಾಗಿದೆ.










