Home ಅಪರಾಧ ಲೋಕ ಭೂಪರಿವರ್ತನೆ ಯಾಗದ ಜಾಗಕ್ಕೆ ಉದ್ಯಮ ಲೈಸೆನ್ಸ್ – ಲೋಕಾಯುಕ್ತ ಠಾಣೆಯಲ್ಲಿ ಪಿಡಿಒ ವಿರುದ್ಧ ದೂರು ದಾಖಲು

ಭೂಪರಿವರ್ತನೆ ಯಾಗದ ಜಾಗಕ್ಕೆ ಉದ್ಯಮ ಲೈಸೆನ್ಸ್ – ಲೋಕಾಯುಕ್ತ ಠಾಣೆಯಲ್ಲಿ ಪಿಡಿಒ ವಿರುದ್ಧ ದೂರು ದಾಖಲು

0

ಬೆಳ್ತಂಗಡಿ: ಲಾಯಿಲ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿ.ಡಿ.ಒ) ಭೂ ಪರಿವರ್ತನೆಯಾಗದ ಜಾಗದಲ್ಲಿ ಹೊಟೇಲ್ ಉದ್ಯಮ ನಡೆಸಲು ಕಾನೂನು ಬಾಹಿರವಾಗಿ ವಾಣಿಜ್ಯ ವ್ಯವಹಾರದ ಪರವಾನಿಗೆ ನೀಡಿರುವ ಬಗ್ಗೆ ಆ.6ರಂದು ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಸ.ನಂ: 164/2B1B ರಲ್ಲಿ 0.01.50 ಎಕ್ರರೆ ಜಾಗವನ್ನು ವಾಣಿಜ್ಯ ಉದ್ದೇಶಕ್ಕೆ ಭೂ ಪರಿವರ್ತನೆ ಮಾಡದೇ ವಾಣಿಜ್ಯ ವ್ಯವಹಾರದ ಉದ್ದೇಶಕ್ಕಾಗಿ ಜಾಗದಲ್ಲಿ 30.09.2025 ರಂದು ಲಾಯಿಲಾ ಗ್ರಾಮ ಪಂಚಾಯತ್ ನಲ್ಲಿ ಪ್ರಭಾರ ಅಭಿವೃದ್ಧಿ ಅಧಿಕಾರಿ (ಪಿಡಿಒ) ಆಗಿದ್ದ ಶ್ರೀನಿವಾಸ ಡಿ.ಪಿ. ಇವರು ಕಾನೂನು ಬಾಹಿರವಾಗಿ ಲೈಸೆನ್ಸ್ ನೀಡೊದ್ದಾರೆ.
ಭೂ ಪರಿವರ್ತನೆಯಾಗದೆ ಮತ್ತು 9/11 ಆಗದೆ ಅನಧಿಕೃತವಾಗಿ ವಾಣಿಜ್ಯ ಉದ್ದೇಶಕ್ಕೆ ಶ್ರೀನಿವಾಸ ಡಿ.ಪಿ. ಅವರು ಕಾನೂನು ಬಾಹಿರವಾಗಿ ಲೈಸೆನ್ಸ್ ನೀಡಿ ಕಾನೂನು ಬಾಹಿರ ಕೃತ್ಯ ಮಾಡಿರುವುದರಿಂದ ತಕ್ಷಣ ಈ ಬಗ್ಗೆ ತನಿಖೆ ನಡೆಸಿ ಅಭಿವೃದ್ಧಿ ಅಧಿಕಾರಿ (ಪಿಡಿಓ) ಆಗಿದ್ದ ಶ್ರೀನಿವಾಸ ಡಿ.ಪಿ. ಹಾಗೂ ಕಾನೂನು ಪ್ರಕಾರ ಯಾವುದೇ ದಾಖಲೆಗಳಿಲ್ಲದೆ ಲೈಸೆನ್ಸ್ ಮಾಡಿಸಿಕೊಂಡವರ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳಲು ಲಾಯಿಲ ಗ್ರಾಮಸ್ಥರೊಬ್ಬರು ಆ.6 ರಂದು ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

NO COMMENTS

LEAVE A REPLY

Please enter your comment!
Please enter your name here

Exit mobile version