Home ಅಪಘಾತ ಬೆಳ್ತಂಗಡಿ; ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ನದಿಯಲ್ಲಿ ಪತ್ತೆ

ಬೆಳ್ತಂಗಡಿ; ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ನದಿಯಲ್ಲಿ ಪತ್ತೆ

3
0

ಬೆಳ್ತಂಗಡಿ; ಕಳೆದ ಕೆಲ ದಿನಗಳಿಂದ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಕಣಿಯೂರು ಗ್ರಾಮದ ಪೆರಡಾಳ ಎಂಬಲ್ಲಿ ಆ 8 ರಂದು ಪತ್ತೆಯಾಗಿದೆ.
ಮೃತ ವ್ಯಕ್ತಿ ಕೊಯ್ಯೂರು ಗ್ರಾಮದ ಕೊಂಕದಡ್ಕ ನಿವಾಸಿ ಚಿದಾನಂದ ಯಾನೆ ಉಮೇಶ್ ಗೌಡ (52) ಎಂಬವರಾಗಿದ್ದಾರೆ.
ಈತ ಚಿಕ್ಕಮಗಳೂರು ಜಿಲ್ಲೆಯ ಆಲ್ದೂರಿನಲ್ಲಿ ಕೆಲಸಕ್ಕೆಂದು ಹೋಗಿದ್ದವರು ಆ 5 ರಂದು ಅಲ್ಲಿಂದ ಮನೆಗೆಂದು ಹೊರಟು ಬಂದಿದ್ದು ಮನೆಗೆ ಬಂದಿರಲಿಲ್ಲ ಇವರಿಗಾಗಿ ಹುಡುಕಾಟ ನಡೆಸಿದರೂ ಯಾವುದೇ ಮಾಹಿತಿ ಲಭ್ಯವಾಗಿರಲಿಲ್ಲ. ನಾಪತ್ತೆಯಾಗಿದ್ದ ಚಿದಾನಂದ ಯಾನೆ ಉಮೇಶ ಅವರ ಮೃತದೇಹ ಆ 8ರಂದು ಕಣಿಯೂರು ಗ್ರಾಮದ ಪೆರಡಾಳ ಎಂಬಲ್ಲಿ ನದಿ ಬದಿಯಲ್ಲಿ ಪೊದೆಯಲ್ಲಿ ಸಿಲುಕಿಕೊಂಡ ರೀತಿಯಲ್ಲಿ ಪತ್ತೆಯಾಗಿದ್ದು ಆತನ‌ ಪತ್ನಿಭವಾನಿ ಮೃತದೇಹವನ್ನು ಗುರುತಿಸಿದ್ದು ಈ ಬಗ್ಗೆ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದಾರೆ. ವಿಪರೀತ ಕುಡಿತದ ಚಟ ಹೊಂದಿದ್ದ ಈತ ನೀರಿಗೆ ಕಾಲುಜಾರಿ ಬಿದ್ದು ಅಥವಾ ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here