Home ಅಪರಾಧ ಲೋಕ ಕೊಕ್ಕಡ; ಕಾರು ತಡೆದು ವ್ಯಕ್ತಿಮೇಲೆ ಹಲ್ಲೆ ನಡೆಸಿ ನೈತಿಕ ಪೊಲೀಸ್ ಗಿರಿ ಐವರು ಪೋಲಿಸ್ ವಶಕ್ಕೆ,...

ಕೊಕ್ಕಡ; ಕಾರು ತಡೆದು ವ್ಯಕ್ತಿಮೇಲೆ ಹಲ್ಲೆ ನಡೆಸಿ ನೈತಿಕ ಪೊಲೀಸ್ ಗಿರಿ ಐವರು ಪೋಲಿಸ್ ವಶಕ್ಕೆ, ಬಾಲಕಿಯ ಅಪಹರಣ ದೂರು

0

ಕೊಕ್ಕಡ: ಅಪ್ರಾಪ್ತ ಬಾಲಕಿಯೊಂದಿಗೆ ಕಾರಿನಲ್ಲಿ ತೆರಳುತ್ತಿದ್ದ
ವ್ಯಕ್ತಿಯೊಬ್ಬರ ಮೇಲೆ ಗುಂಪೊಂದು ಹಲ್ಲೆ ನಡೆಸಿದ ಘಟನೆ ಕೊಕ್ಕಡ ಕಾಪಿನಬಾಗಿಲು ಎಂಬಲ್ಲಿ ಸಂಭವಿಸಿದೆ. ಈ ಸಂಬಂಧ ಐವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿರುವುದಾಗಿ ತಿಳಿದು ಬಂದಿದೆ, ಕಾರು ಚಾಲಕನ ವಿರುದ್ಧವೂ ಅಪಹರಣ ಪ್ರಕರಣ ದಾಖಲಾಗಿದೆ.

ಕಾರ್ಕಳ ಈದು ನಿವಾಸಿ ಶೈಕ್ ಮುಕ್ತಾರ್ (50) ನೀಡಿದ ದೂರಿನಂತೆ, ಅವರು ಆಗಸ್ಟ್ 11ರ ರಾತ್ರಿ ತಮ್ಮ ಪರಿಚಯಸ್ಥರ ಅಪ್ರಾಪ್ತ ಮಗಳನ್ನು ಕಾರಿನಲ್ಲಿ ಕರೆದುಕೊಂಡು ಹಾಸನ ಕಡೆಗೆ ತೆರಳುತ್ತಿದ್ದರು. ಈ ವೇಳೆ ಕೊಕ್ಕಡ ಕಾಪಿನಬಾಗಿಲಿನಲ್ಲಿ ಕಾರು ತಡೆದು ನಿಲ್ಲಿಸಿದ ಗುಂಪೊಂದು ಶೈಕ್ ಮುಕ್ತಾರ್ ಅವರಿಗೆ ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆ ನಡೆಸಿದೆ.
ಎಂದು ದೂರು ನೀಡಲಾಗಿದೆ. ಈ ದೂರಿನನ್ವಯ ಕೊಕ್ಕಡದ ಧನುಷ್ (23), ದಿನೇಶ್ ಚಾರ್ಮಾಡಿ (45), ಪೂರ್ಣಕ್ಷ ಬಿ ಪುದುವೆಟ್ಟು (40), ಸೂರಜ್ ಕೊಕ್ಕಡ (25), ಮತ್ತು ರಂಜಿತ್ ಬಂಡಾರಿ ಕೊಕ್ಕಡ (29) ಅವರನ್ನು ಉಪ್ಪಿನಂಗಡಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಪ್ರತಿದೂರು: ಇದೇ ಘಟನೆಗೆ ಸಂಬಂಧಿಸಿದಂತೆ, ಶೈಕ್ ಮುಕ್ತಾರ್ ಅವರು
ತಮ್ಮ ಮಗಳನ್ನು ಬಲವಂತವಾಗಿ ಕಾರಿನಲ್ಲಿ ಕುಳ್ಳಿರಿಸಿಕೊಂಡು ಅಪಹರಿಸಿದ್ದಾರೆ ಎಂದು ಬಾಲಕಿಯ ತಾಯಿ ನೀಡಿದ ದೂರಿನ ಮೇರೆಗೆ ಉಪ್ಪಿನಂಗಡಿ ಠಾಣೆಯಲ್ಲಿ ಶೈಕ್ ಮುಕ್ತಾರ್ ವಿರುದ್ಧ ಎಫ್‌ಐಆ‌ರ್’ ದಾಖಲಾಗಿದ್ದು, ಇದರ ಬಗ್ಗೆ ತನಿಖೆ ಮುಂದುವರಿದಿದೆ.

NO COMMENTS

LEAVE A REPLY

Please enter your comment!
Please enter your name here

Exit mobile version