Home ಅಪರಾಧ ಲೋಕ ಧರ್ಮಸ್ಥಳದಲ್ಲಿ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಮಲಯಾಳಿ ಕ್ರೈಸ್ತ ಬಾಂಧವರ ಸಭೆ

ಧರ್ಮಸ್ಥಳದಲ್ಲಿ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಮಲಯಾಳಿ ಕ್ರೈಸ್ತ ಬಾಂಧವರ ಸಭೆ

0
2

ಬೆಳ್ತಂಗಡಿ;  ಧರ್ಮಸ್ಥಳದ ನೇತ್ರಾವತಿಯಲ್ಲಿರುವ ಪಾರಿಜಾತ ಸಭಾಂಗಣದಲ್ಲಿ ಕಾಂಗ್ರೆಸ್ ಅಲ್ಪಸಂಖ್ಯಾತ ಗ್ರಾಮೀಣ ಘಟಕದ ಅಧ್ಯಕ್ಷರಾದ  ಪಿ.ಟಿ. ಸಬಾಸ್ಟಿಯನ್ ಅವರ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ ಅಲ್ಪಸಂಖ್ಯಾತ ವಿಂಗ್‌ನ ಮಲಯಾಳಿ ಕ್ರೈಸ್ತ ಬಾಂಧವರ ಸಭೆ ನಡೆಯಿತು.

ಸಭೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಎಲ್ಲರಿಗೂ ಶುಭಾಶಯಗಳನ್ನು ಕೋರಲಾಯಿತು. ಇದೇ ಸಂದರ್ಭದಲ್ಲಿ ಪ್ರಸ್ತುತ ರಾಜಕೀಯ ವಿದ್ಯಮಾನಗಳು ಹಾಗೂ ಕ್ರೈಸ್ತ ಸಮುದಾಯಕ್ಕೆ ಸಂಬಂಧಿಸಿದ ವಿವಿಧ ಪ್ರಮುಖ ವಿಚಾರಗಳ ಕುರಿತು ಸಮಗ್ರವಾಗಿ ಚರ್ಚಿಸಲಾಯಿತು.

ವಿಶೇಷವಾಗಿ ಕಸ್ತೂರಿರಂಗನ್ ವರದಿಯ ಅನುಷ್ಠಾನದಿಂದ ನಮ್ಮ ಬಹುತೇಕ ಜನರಿಗೆ ಉಂಟಾಗಬಹುದಾದ ತೊಂದರೆಗಳು ಹಾಗೂ ಅದರ ಪರಿಣಾಮಗಳ ಕುರಿತು ಚರ್ಚಿಸಲಾಯಿತು. ಈ ವಿಚಾರದಲ್ಲಿ ನಮ್ಮ ಸಮುದಾಯದ ಹಿತಾಸಕ್ತಿಯನ್ನು ಕಾಪಾಡುವ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷದ ಬೆಂಬಲ ಮತ್ತು ಸಹಕಾರವನ್ನು ಖಚಿತಪಡಿಸಿಕೊಳ್ಳುವ ಕುರಿತು ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಯಿತು.

ಅದೇ ರೀತಿ, ಕೇಂದ್ರ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ FCRA ತಿದ್ದುಪಡಿಯ ಕುರಿತು ವಿವಿಧ ಕ್ರೈಸ್ತ ಸಮುದಾಯಗಳಲ್ಲಿ ಉಂಟಾಗಿರುವ ಆತಂಕಗಳನ್ನು ನಿವಾರಿಸುವಂತೆ ಸಂಬಂಧಪಟ್ಟವರ ಗಮನಕ್ಕೆ ತರಲು ಹಾಗೂ ಅಗತ್ಯ ಕ್ರಮ ಕೈಗೊಳ್ಳುವಂತೆ ಆಗ್ರಹಿಸುವ ಕುರಿತು ಚರ್ಚಿಸಲಾಯಿತು.

ಈ ಎಲ್ಲಾ ಪ್ರಮುಖ ವಿಚಾರಗಳ ಕುರಿತು ಕಾಂಗ್ರೆಸ್ ಪಕ್ಷದ ಉನ್ನತ ನಾಯಕರನ್ನು ಭೇಟಿ ಮಾಡಿ, ನಮ್ಮ ಸಮುದಾಯದ ಸಮಸ್ಯೆಗಳು ಮತ್ತು ಬೇಡಿಕೆಗಳನ್ನು ಮಂಡಿಸಲು ನಿಯೋಗವೊಂದನ್ನು ಕಳುಹಿಸುವ ಕುರಿತು ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು. ಮುಂದಿನ ದಿನಗಳಲ್ಲಿಯೂ ನಮ್ಮ ಸಮುದಾಯದ ವಿವಿಧ ವಿಚಾರಗಳಲ್ಲಿ ಅಗತ್ಯ ಸಹಕಾರ ನೀಡುವಂತೆ ಮನವಿ ಮಾಡಲು ನಿರ್ಧರಿಸಲಾಯಿತು.

ಸಭೆಯಲ್ಲಿ ಭಾರತ್ ಜೋಡೋ ಕಾರ್ಯಕ್ರಮದ ಉದ್ದೇಶ ಹಾಗೂ ಅದರ ಕುರಿತಾದ ಮಾಹಿತಿಯನ್ನು ಹಂಚಿಕೊಳ್ಳಲಾಯಿತು. ಪ್ರಸ್ತುತ ರಾಜಕೀಯ ಪರಿಸ್ಥಿತಿ, ಕಾಂಗ್ರೆಸ್ ಪಕ್ಷದ ನಿಲುವು ಹಾಗೂ ಸರ್ಕಾರದ ವಿವಿಧ ಜನಪರ ಕಾರ್ಯಕ್ರಮಗಳ ಬಗ್ಗೆಯೂ ಮಾಹಿತಿ ನೀಡಲಾಯಿತು.

ಇದೇ ಸಂದರ್ಭದಲ್ಲಿ ಕರ್ನಾಟಕದ ಮುಖ್ಯಮಂತ್ರಿ ಶ್ರೀ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಸರ್ಕಾರವು ಕ್ರೈಸ್ತ ಸಮುದಾಯ ಸೇರಿದಂತೆ ಅಲ್ಪಸಂಖ್ಯಾತ ಸಮುದಾಯಗಳ ನ್ಯಾಯಸಮ್ಮತ ಬೇಡಿಕೆಗಳು ಹಾಗೂ ಹಕ್ಕುಗಳಿಗೆ ಅಗತ್ಯ ಬೆಂಬಲ ಮತ್ತು ಸಹಕಾರ ನೀಡಲಿದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಲಾಯಿತು. ಸಮುದಾಯದ ಪ್ರಮುಖ ವಿಚಾರಗಳನ್ನು ಸರ್ಕಾರದ ಗಮನಕ್ಕೆ ತಂದು, ಅವುಗಳಿಗೆ ಸೂಕ್ತ ಪರಿಹಾರ ಕಂಡುಕೊಳ್ಳಲು ಮುಂದಿನ ದಿನಗಳಲ್ಲಿ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.

ಮಲಯಾಳಿ ಕ್ರೈಸ್ತ ಸಮುದಾಯದ ಹಿತಾಸಕ್ತಿಗಳನ್ನು ಕಾಪಾಡುವ ನಿಟ್ಟಿನಲ್ಲಿ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸುವುದು, ಸಮುದಾಯದ ಸಮಸ್ಯೆಗಳನ್ನು ಸಂಬಂಧಪಟ್ಟ ನಾಯಕರ ಗಮನಕ್ಕೆ ಪರಿಣಾಮಕಾರಿಯಾಗಿ ತರುವುದು ಹಾಗೂ ಸಂದರ್ಭಗಳಲ್ಲಿ ಸರ್ಕಾರ ಮತ್ತು ಪಕ್ಷದ ಸಹಕಾರವನ್ನು ಪಡೆದುಕೊಳ್ಳುವುದು ಎಂಬ ನಿರ್ಧಾರವನ್ನು  ಸಭೆಯಲ್ಲಿ ತೆಗೆದುಕೊಳ್ಳಲಾಯಿತು.

NO COMMENTS

LEAVE A REPLY

Please enter your comment!
Please enter your name here