ಬೆಳ್ತಂಗಡಿ; ರೆಖ್ಯ ಗ್ರಾಮದ ಸರ್ವೆ ನಂಬರ್ 62ಕ್ಕೆ ಸಂಬಂಧಿಸಿದ ಅರಣ್ಯ ಭೂಮಿ ಸಮಸ್ಯೆಯನ್ನು ಶೀಘ್ರವಾಗಿ ಬಗೆಹರಿಸುವಂತೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಮಂಗಳವಾರ ಬೆಂಗಳೂರಿನ ವಿಧಾನಸೌಧದಲ್ಲಿ ಸಚಿವರಾದ ರಾಮಲಿಂಗಾ ರೆಡ್ಡಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಅವರೊಂದಿಗೆ ರೆಖ್ಯ ಗ್ರಾಮಸ್ಥರ ಹಾಗೂ ಇತರರು ಇದ್ದರು. ಕಳೆದ ಹಲವು ವರ್ಷಗಳಿಂದ ಇರುವ ಈ ಸಮಸ್ಯೆ ಬಗ್ಗೆ ಸಚಿವರಿಗೆ ಪೂರ್ಣ ಮಾಹಿತಿಗಳನ್ನು ನೀಡಿ ಇದಕ್ಕೆ ಶಾಶ್ವತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಸಚಿವರಲ್ಲಿ ಒತ್ತಾಯಿಸಲಾಯಿತು




