Home ಸ್ಥಳೀಯ ಸಮಾಚಾರ ಅಳದಂಗಡಿ ಬರಾಯ ಕೆರೆಯಲ್ಲಿ ಗಣಿಗಾರಿಕೆ; ಗ್ರಾಮಸ್ಥರಿಂದ ಜಿಲ್ಲಾಧಿಕಾರಿಗೆ ಮನವಿ

ಅಳದಂಗಡಿ ಬರಾಯ ಕೆರೆಯಲ್ಲಿ ಗಣಿಗಾರಿಕೆ; ಗ್ರಾಮಸ್ಥರಿಂದ ಜಿಲ್ಲಾಧಿಕಾರಿಗೆ ಮನವಿ

0
2

ಬೆಳ್ತಂಗಡಿ;  ಅಳದಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಿಲ್ಯ ಗ್ರಾಮದ ಐತಿಹಾಸಿಕ ಬರಾಯಕೆರೆ ಎಂಬಲ್ಲಿ ಕಪ್ಪು ಕಲ್ಲಿನ ಗಣಿಗಾರಿಕೆ ನಡೆಯುತ್ತಿದ್ದು , ಇದರಿಂದಾಗಿ ಸಾರ್ವಜನಿಕರಿಗೆ ತೊಂದರೆ ಉಂಟಾಗಿದೆ ಎಂದು ಬರಾಯಕೆರೆ ಸಂರಕ್ಷಣಾ ಸಮಿತಿ ಇಂದು ಬೆಳ್ತಂಗಡಿ ತಾಲೂಕು ಪಂಚಾಯತ್ ನಲ್ಲಿ ಜಿಲ್ಲಾಧಿಕಾರಿ ದರ್ಶನ್ ಹೆಚ್ ವಿ ರವರಿಗೆ ಮನವಿ ಸಲ್ಲಿಸಿದರು.

ಸ್ಥಳೀಯ ಭೂಮಾಲೀಕ ಶ್ರೀಕಾಂತ್ ಭಟ್ ಎಂಬವರು ಕೃಷಿ ಚಟುವಟಿಕೆ ಕಾರಣ ನೀಡಿ ಕಳೆದ 25 ಕ್ಕೂ ಹೆಚ್ಚು ವರ್ಷಗಳಿಂದ ಸತತವಾಗಿ ಗಣಿಗಾರಿಕೆ ನಡೆಸುತ್ತಿದ್ದು , ಕಾನೂನು ಬಾಹಿರವಾಗಿ ಸ್ಫೋಟಕಗಳನ್ನು ಸ್ಫೋಟಿಸುತ್ತಿದ್ದಾರೆ ಇದರಿಂದಾಗಿ ಶಾಲೆಯ ಮಕ್ಕಳು ಸೇರಿದಂತೆ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದಾರೆ. ಸ್ಥಳೀಯರ ಮನೆಗಳು ಬಿರುಕು ಬಿಟ್ಟಿದೆ. ಕೃಷಿ ಕೃತಾವಳಿಗಳಿಗೆ ಕಲ್ಲು , ಕಲ್ಲಿನ ಪುಡಿಯಿಂದ ತೊಂದರೆಯಾಗಿದೆ. ಬೃಹತ್ ಗಾತ್ರದ ಲಾರಿಗಳ ಸಂಚಾರದಿಂದ ಗ್ರಾಮ ಪಂಚಾಯತ್ ರಸ್ತೆಗಳು , ಮೋರಿಗಳು ನಾಶಗೊಂಡಿದೆ. ಐತಿಹಾಸಿಕ ಬರಾಯಕೆರೆ ಸಂಪೂರ್ಣ ಕಲುಷಿತಗೊಂಡಿದೆ ಎಂದು ಮನವಿಯಲ್ಲಿ ತಮ್ಮ ಅಳಲು ತೋಡಿಕೊಂಡಿದ್ದಾರೆ‌. ಸಂಬಂಧಪಟ್ಟ ಇಲಾಖೆಗಳಿಗೆ ತಪ್ಪು ಮಾಹಿತಿ ನೀಡಿ ಕೃಷಿ ಚಟುವಟಿಕೆ ಹೆಸರಿನಲ್ಲಿ ಕಳೆದ 25 ವರ್ಷಗಳಿಂದ ಗಣಿಗಾರಿಕೆ ನಡೆಸುತ್ತಿದ್ದರೂ ಯಾವುದೇ ಇಲಾಖೆಗಳು ಕಾನೂನು ಕ್ರಮ ಕೈಗೊಂಡಿಲ್ಲ ಎಂದು ತಮ್ಮ ನೋವು ಜಿಲ್ಲಾಧಿಕಾರಿಗಳ ಮುಂದೆ ತೋಡಿಕೊಂಡರು.

ಈ ಸಂದರ್ಭದಲ್ಲಿ ಮಾಜಿ ತಾಲೂಕು ಪಂಚಾಯತ್ ಸದಸ್ಯ ಪ್ರಶಾಂತ್ ವೇಗಸ್ , ಬರಾಯಕೆರೆ ಸಂರಕ್ಷಣಾ ಸಮಿತಿ ಮುಖಂಡರಾದ ಲಿಯೋ ಪಿರೇರಾ , ಹರೀಶ್ ಪೂಜಾರಿ , ಗಣೇಶ್ ದೇವಾಡಿಗ , ಮೇಲ್ವಿನ್ ಡಿಸೋಜ , ಪ್ರವೀಣ್ ನಿನ್ನಿಕಲ್ಲು , ಜೋನ್ ಡಿಸೋಜ , ದಿನೇಶ್ ಪೂಜಾರಿ , ಕೂಸ ಅಳದಂಗಡಿ ಸಾಮಾಜಿಕ ಹೋರಾಟಗಾರ ಶೇಖರ್ ಲಾಯಿಲ ಉಪಸ್ಥಿತರಿದ್ದರು.

NO COMMENTS

LEAVE A REPLY

Please enter your comment!
Please enter your name here