ಬೆಳ್ತಂಗಡಿ: ಟಾಕ್ಸಿಕ್ ಸಿನಿಮಾದ ಪ್ರಚಾರದಲ್ಲಿ ತೊಡಗಿರುವ ಸ್ಯಾಂಡಲ್ವುಡ್ ನಟ ರಾಕಿಂಗ್ ಸ್ಟಾರ್ ಯಶ್ ಅವರು ಆ.25ರ ಮಂಗಳವಾರ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಜೊತೆ ಮಾತುಕತೆ ನಡೆಸಿ ಆಶೀರ್ವಾದ ಪಡೆದು ಬಳಿಕ, ಮಂಜುನಾಥ ಸ್ವಾಮಿಯ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದರು.
ಸಿನಿಮಾ ಬಿಡುಗಡೆಗೂ ಮುನ್ನ ಯಶ್ ಪ್ರತಿ ಬಾರಿ ಧರ್ಮಸ್ಥಳಕ್ಕೆ ಬಂದು, ಮಂಜುನಾಥನ ದರ್ಶನ ಪಡೆಯುವ ಸಂಪ್ರದಾಯ ಇದ್ದು, ಈ ಬಾರಿಯೂ ಬಹುನಿರೀಕ್ಷಿತ ಟಾಕ್ಸಿಕ್ ಸಿನಿಮಾ ಬಿಡುಗಡೆಗೂ ಮೊದಲು ಧರ್ಮಸ್ಥಳಕ್ಕೆ ಬಂದು, ದೇವರ ದರ್ಶನ ಪಡೆದಿದ್ದಾರೆ.
