ಬೆಳ್ತಂಗಡಿ; ಧರ್ಮಸ್ಥಳ ಗ್ರಾಮದ ನೇತ್ರಾವತಿ ಸ್ನಾನಘಟ್ಟದ ಬಳಿ ಅತ್ಯಾಚಾರಕ್ಕೀಡಾಗಿ ಹತ್ಯೆಯಾಗಿರುವ ಉಜಿರೆ ಎಸ್.ಡಿ.ಎಂ.ಕಾಲೇಜಿನ ವಿದ್ಯಾರ್ಥಿನಿ ಕು.ಸೌಜನ್ಯ ಅವರ ಧರ್ಮಸ್ಥಳ ಗ್ರಾಮದ ಪಾಂಗಳ ಮನೆಗೆ ಆರ್.ಎಸ್.ಎಸ್. ಹಿರಿಯ ಮುಖಂಡ ಡಾ.ಪ್ರಭಾಕರ ಭಟ್ ಕಲ್ಲಡ್ಕ ಅವರು ಆ.26ರಂದು ಭೇಟಿ ನೀಡಿದರು.
ಸೌಜನ್ಯ ಅವರ ತಾಯಿ ಕುಸುಮಾವತಿ ಚಂದಪ್ಪ ಗೌಡ ಅವರೊಂದಿಗೆ ಡಾ. ಪ್ರಭಾಕರ ಭಟ್ ಮಾತುಕತೆ ನಡೆಸಿ ಕುಟುಂಬಕ್ಕೆ ಧೈರ್ಯ ತುಂಬಿದರು. ಉದ್ಯಮಿ ಸದಾನಂದ ನಾವರ, ಪುರಂದರ, ಮೋಹನ್ ಶೆಟ್ಟಿ ಉಜಿರೆ ಮತ್ತಿತರರು ಉಪಸ್ಥಿತರಿದ್ದರು.
