Home ಅಪರಾಧ ಲೋಕ ಪುತ್ತೂರು ಗುಂಪು ಘರ್ಷಣೆ ಹಲವರ ವಿರುದ್ದ ಪ್ರಕರಣ ದಾಖಲು

ಪುತ್ತೂರು ಗುಂಪು ಘರ್ಷಣೆ ಹಲವರ ವಿರುದ್ದ ಪ್ರಕರಣ ದಾಖಲು

3
0

ಪುತ್ತೂರು: ಸಾರ್ವಜನಿಕ ಸ್ಥಳದಲ್ಲಿ ಗುಂಪು ಸೇರಿ ಗಲಾಟೆ ನಡೆಸಿದ ಆರೋಪಕ್ಕೆ ಸಂಬಂಧಿಸಿ ಮೂವರು ಸೇರಿದಂತೆ ಇತರರ ವಿರುದ್ಧ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸೆ.1ರಂದು ಮಧ್ಯಾಹ್ನ ಪ್ರೆಸ್‌ಕ್ಲಬ್ ಎದುರು ಕೆಲವರು ಗುಂಪು ಸೇರಿ ಗಲಾಟೆ ನಡೆಸುತ್ತಿರುವ ಬಗ್ಗೆ ಪೊಲೀಸ್ ನಿರೀಕ್ಷಕ ಜಾನ್ಸನ್ ಡಿಸೋಜ ಅವರಿಗೆ ಮಾಹಿತಿ ಲಭಿಸಿತ್ತು. ಮಾಹಿತಿ ಮೇರೆಗೆ ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ತೆರಳಿದಾಗ ಕೆಲವರು ಪರಸ್ಪರ ಕೈ ಕೈ ಮಿಲಾಯಿಸಿ ಗಲಾಟೆ ನಡೆಸುತ್ತಿದ್ದು, ಸಾರ್ವಜನಿಕ ಶಾಂತಿಗೆ ಭಂಗ ಉಂಟು ಮಾಡುತ್ತಿರುವುದು ಕಂಡುಬಂದಿದೆ.ಪೊಲೀಸರು ತಿಳುವಳಿಕೆ ನೀಡಿದರೂ ಗಲಾಟೆ ಮುಂದುವರಿಸಿದ ಹಿನ್ನೆಲೆಯಲ್ಲಿ ಮುಂಡೂರು ಗ್ರಾಮದ ಪ್ರವೀಣ್‌ ಆಚಾರ್ಯ, ಕೂರ್ನಡ್ಕದ ರವೂಫ್, ಬೋಳ್ವಾರದ ಹಕೀಂ ಸೇರಿದಂತೆ ಇತರರ ವಿರುದ್ಧ ಅ.ಕ್ರ. 104/2026, ಬಿಎನ್‌ಎಸ್ ಕಲಂ 194(2)ರಡಿ ಪ್ರಕರಣ ದಾಖಲಿಸಲಾಗಿದೆ. ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here