
ಬೆಳ್ತಂಗಡಿ; ಕೊಕ್ಕಡ ಕಡೆಯಿಂದ ಧರ್ಮಸ್ಥಳ ಕಡೆಗೆ ಬರುತ್ತಿದ್ದ ಕಾರು ಹಾಗೂ ಧರ್ಮಸ್ಥಳದಿಂದ ಶಿಬರಾಜೆ ಕಡೆಗೆ ಹೋಗುತ್ತಿದ್ದ ಬೈಕ್ ನಡುವೆ ಅಪಘಾತ ಸಂಭವಿಸಿದ್ದು ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಧರ್ಮಸ್ಥಳ ಸಮೀಪದ ಬೊಳಿಯಾರ್ ಎಂಬಲ್ಲಿ ನಡೆದಿದೆ.
ಶಿಬರಾಜೆ ನಿವಾಸಿ, ನೀರಚಿಲುಮೆ ನರ್ಸರಿಯಲ್ಲಿ ಕೆಲಸ ಮಾಡುತ್ತಿದ್ದ ಮಂಜುನಾಥ್ ಅವರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದು, ತಕ್ಷಣ ಅವರನ್ನು ಉಜಿರೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರುಚಾಲಕನ ಅಜಾಗರೂಕತೆ ಪರಿಣಾಮ ಅಪಘಾತ ಸಂಭವಿಸಿದ್ದು, ಡಿಕ್ಕಿಯ ತೀವ್ರತೆಗೆ ಕಾರು ಬೈಕ್ ನ ಮುಂಭಾಗಕ್ಕೆ ಹೊಡೆದು ಸಂಪೂರ್ಣ ಜಖಂಗೊಂಡಿದೆ. ಘಟನಾ ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.









