LATEST ARTICLES

31 ವರ್ಷಗಳ ವಿಶ್ವಾಸದ ಪಯಣ: ಸೋಜಾ ಎಲೆಕ್ಟ್ರಾನಿಕ್ಸ್‌ನಲ್ಲಿ ವಿಡಿಯಂ ಸರ್ವಿಸ್ ಕ್ಯಾಂಪ್‌ಗೆ ಚಾಲನೆ, ಸಮಾಜ ಸೇವೆಗೆ ಆಧ್ಯತೆ ಶ್ಲಾಘನೀಯ: ಡಿವೈಎಸ್ಪಿ ರೋಹಿಣಿ ಸಿ.ಕೆ

0

ಬೆಳ್ತಂಗಡಿ: ಕಳೆದ 31 ವರ್ಷಗಳಿಂದ ಗುಣಮಟ್ಟದ ಉತ್ಪನ್ನಗಳು ಮತ್ತು ಅತ್ಯುತ್ತಮ ಗ್ರಾಹಕ ಸೇವೆಯ ಮೂಲಕ ಬೆಳ್ತಂಗಡಿ ಭಾಗದ ಜನರ ವಿಶ್ವಾಸ ಗಳಿಸಿರುವ ಸೋಜಾ ಎಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್ಸ್ ಸಂಸ್ಥೆಯಲ್ಲಿ ವಿಡಿಯಂ ಕಂಪನಿಯ ವಿಶೇಷ ಸರ್ವಿಸ್ ಕ್ಯಾಂಪ್‌ಗೆ ಜು 29ರಂದು ಚಾಲನೆ ನೀಡಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಡಿವೈಎಸ್ಪಿ ರೋಹಿಣಿ ಸಿ.ಕೆ ಅವರು ಬೆಳ್ತಂಗಡಿಯ ಜನರು ಎಲ್ಲರೂ ಒಗ್ಗಟ್ಟಿನಿಂದ ಊರಿನ ಅಭಿವೃದ್ಧಿ ಹಾಗೂ ಸಮಾಜ ಸೇವೆಗೆ ಆದ್ಯತೆ ನೀಡುತ್ತಿರುವುದು ಶ್ಲಾಘನೀಯ ಬೆಳವಣಿಗೆ.ಸಮಾಜಮುಖಿ ಚಿಂತನೆಯೊಂದಿಗೆ ಸಾಗುತ್ತಿರುವ ಸೋಜಾ ಸಂಸ್ಥೆಯ ಸೇವೆ ಇತರರಿಗೆ ಮಾದರಿಯಾಗಿದೆ ಎಂದರು. ರೂರಲ್ ಡೆವಲಪ್ಮೆಂಟ್ ಸೊಸೈಟಿಯ...

ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಸ್ಥಾನಕ್ಕೆ ಶೇಖರ ಕುಕ್ಕೇಡಿ ಅವರಿಂದ ಅರ್ಜಿ ಸಲ್ಲಿಕೆ

0

ಬೆಳ್ತಂಗಡಿ; ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಯುವ ಮುಖಂಡ ಮಾಜಿ ಜಿಲ್ಲಾ ಪಂಚಾಯತು ಸದಸ್ಯ ಶೇಖರ ಕುಕ್ಕೇಡಿ ಅವರು ಅರ್ಜಿ ಸಲ್ಲಿಸಿದ್ದು ಅಧ್ಯಕ್ಷ ಆಯ್ಕೆಯ ಓಟದ ಮುಂಚೂಣಿಯಲ್ಲಿದ್ದಾರೆ.ಜಿಲ್ಲಾ ಕಾಂಗ್ರೆಸ್ ಸಮಿತಿಯ ಎಸ್.ಸಿ ಘಟಕದ ಜಿಲ್ಲಾಧ್ಯಕ್ಷರಾಗಿ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿಯ ಉಪಾಧ್ಯಕ್ಷರೂ ಆಗಿರುವ ಶೇಖರ‌ಕುಕ್ಕೇಡಿ ಅವರು ಜಿಲ್ಲಾಪಂಚಾಯತು ಸದಸ್ಯರಾಗಿಯೂ ಕಾರ್ಯನಿರ್ವಹಿಸಿದ ಜನಪ್ರಿಯ ನಾಯಕರಾಗಿದ್ದಾರೆ. ಸಾಮಾನ್ಯ ಕಾರ್ಯಕರ್ತನಾಗಿ ಕಾಂಗ್ರೆಸ್ ಪಕ್ಷದಲ್ಲಿ ದುಡಿದು ನಾಯಕತ್ವಕ್ಕೆ ಏರಿದ ಶೇಖರ ಕುಕ್ಕೇಡಿ ಅವರು ಸದಾ ಕಾರ್ಯಕರ್ತರೊಂದಿಗೆ ಗುರುತಿಸಿಕೊಂಡಿರುವ ನಾಯಕ, ಜಿಲ್ಲಾ ಎಸ್.ಸಿ ಘಟಕದ ಅಧ್ಯಕ್ಷರಾಗಿ ಜಿಲ್ಲೆಯಾದ್ಯಂತ ಓಡಾಟ ನಡೆಸಿ...

ಧರ್ಮಸ್ಥಳ ಬಂಗ್ಲೆಗುಡ್ಡೆಯಲ್ಲಿ ಪತ್ತೆಯಾದ ಅಸ್ಥಿಪಂಜರ ಪ್ರಕರಣ;ಡಿಎನ್ಎ ಮೂಲಕ ಮೂರು ಅಸ್ತಿಪಂಜರಗಳ ಗುರುತು ಪತ್ತೆ

0

ಬೆಳ್ತಂಗಡಿ : ಧರ್ಮಸ್ಥಳ ಬಂಗ್ಲೆಗುಡ್ಡೆಯಲ್ಲಿ ಎಸ್ಐಟಿ ಅಧಿಕಾರಿಗಳು ನಡೆಸಿದ ಶೋಧ ಕಾರ್ಯಾಚರಣೆ ವೇಳೆ ಪತ್ತೆಯಾದ ಅಸ್ಥಿಪಂಜರಗಳಲ್ಲಿ ಒಟ್ಟು ಮೂರು ವ್ಯಕ್ತಿಗಳ ಕುಟುಂಬದ ಡಿಎನ್ಎ ಮೂಲಕ ಎಫ್ಎಲ್ಎಲ್ ದೃಢಪಡಿಸಿದೆ. ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ನೇತ್ರಾವತಿ ಸ್ನಾನಘಟ್ಟದ ಬಂಗ್ಲೆಗುಡ್ಡೆಯಲ್ಲಿ  ಸೌಜನ್ಯಳ ಮಾವ ವಿಠಲ ಗೌಡ ತೋರಿಸಿದ ಜಾಗದಲ್ಲಿ ಎಸ್ಐಟಿ ಅಧಿಕಾರಿಗಳು 17-09-2025 ಮತ್ತು 18-09-2025 ರಂದು ನಡೆಸಿದ ಶೋಧ ಕಾರ್ಯಾಚರಣೆ ವೇಳೆ ಏಳು ಅಸ್ಥಿಪಂಜರಗಳನ್ನು ಪತ್ತೆ ಹಚ್ಚಿ ಎಫ್ಎಲ್ಎಲ್ ಗೆ ಕಳುಹಿಸಿದ್ದರು‌‌. ಅಸ್ಥಿಪಂಜರ ಪತ್ತೆಯಾದ ಜಾಗದಲ್ಲಿ ಕೆಲವೊಂದು ಐಡಿ ಕಾರ್ಡ್ ಗಳು ಕೂಡ ಪತ್ತೆಯಾಗಿತ್ತು ಅದರ...

ನಿವೃತ್ತ ಕನ್ನಡ ಉಪನ್ಯಾಸಕ ಡಾ. ಎಸ್.ಡಿ. ಶೆಟ್ಟಿ‌ ನಿಧನ

0

ಉಜಿರೆ: ಕನ್ನಡ ಸಾಹಿತ್ಯ ಮತ್ತು ಸಂಶೋಧನೆ, ಶಿಲಾಶಾಸನ ತಜ್ಞ ಹಾಗೂ ಉಜಿರೆಯ ಎಸ್.ಡಿ.ಎಂ. ಸ್ವಾಯತ್ತ ಕಾಲೇಜಿನ ನಿವೃತ್ತ ಕನ್ನಡ ಉಪನ್ಯಾಸಕ ಡಾ. ಎಸ್.ಡಿ. ಶೆಟ್ಟಿ (80) ಅಲ್ಪಕಾಲದ ಅನಾರೋಗ್ಯದಿಂದ ಬುಧವಾರ ಮೈಸೂರಿನಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.ಅವರಿಗೆ ಪತ್ನಿ ಮತ್ತು ಇಬ್ಬರು ಪುತ್ರಿಯರು ಇದ್ದಾರೆ.ಅವರ ಅಂತ್ಯಸಂಸ್ಕಾರವನ್ನು ಉಜಿರೆಯಲ್ಲಿ ಗುರುವಾರ ನಡೆಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.ಮೂಲತಃ ಹೊನ್ನಾವರ ಹಳದೀಪುರದ ಸಾಲೆಕೇರಿ ನಿವಾಸಿಯಾದ ಅವರು ಕರ್ನಾಟಕ ವಿ.ವಿ. ಯಿಂದ ೧೯೭೧ ರಲ್ಲಿ ಕನ್ನಡ ಎಂ.ಎ. ಪದವಿ ಪಡೆದರು.ಉಜಿರೆಯಲ್ಲಿ ಎಸ್.ಡಿ.ಎಂ. ಕಾಲೇಜಿನಲ್ಲಿ 35 ವರ್ಷಗಳಲ್ಲಿ ಕನ್ನಡ ಉಪನ್ಯಾಸಕರಾಗಿ, ವಿಭಾಗದ...

ಮುಂಡಾಜೆ ವಾರ್ಡ್ ಸಭೆ: ರಸ್ತೆ ಅಭಿವೃದ್ಧಿ ಮಾಡದಿದ್ದರೆ ಚುನಾವಣೆ ಬಹಿಷ್ಕರಿಸುವ ಎಚ್ಚರಿಕೆ

0

ಬೆಳ್ತಂಗಡಿ ಮುಂಡಾಜೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎರಡನೇ ಹಾಗೂ ಮೂರನೇ ವಾರ್ಡ್‌ ನ ವಾರ್ಡ್ ಸಭೆಯಲ್ಲಿ ನೂರಕ್ಕೂ ಹೆಚ್ಚು ಸಂಖ್ಯೆಯಲ್ಲಿ ಭಾಗವಹಿಸಿದ್ದ ಗ್ರಾಮಸ್ಥರು ತಮ್ಮ ಪ್ರದೇಶದ ರಸ್ತೆಯ ದುರವಸ್ತೆಯ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿ ರಸ್ತೆ ಸರಿಪಡಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ಚುನಾವಣಾ ಬಹಿಷ್ಕಾರದಂತಹ ಕ್ರಮಕ್ಕೆ ಮುಂದಾಗುವುದಾಗಿ ಎಚ್ಚರಿಸಿದ್ದಾರೆ. ವಾರ್ಡ್ ನಲ್ಲಿನ ಮೂಲಸೌಕರ್ಯಗಳ ಕೊರತೆ, ರಸ್ತೆ ಅಭಿವೃದ್ಧಿ, ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಿಂದ ಉಂಟಾಗಿರುವ ಸಮಸ್ಯೆಗಳು ಹಾಗೂ ವಿದ್ಯುತ್ ವ್ಯತ್ಯಯ ಸೇರಿದಂತೆ ಹಲವು ಸಾರ್ವಜನಿಕ ಸಮಸ್ಯೆಗಳ ಕುರಿತು ವ್ಯಾಪಕ ಚರ್ಚೆ ನಡೆಯಿತು. ಸಭೆಯಲ್ಲಿ ಅತಿ ಹೆಚ್ಚಿನ...

ಬೆಳ್ತಂಗಡಿ: ತಾಲೂಕು‌ ಆಸ್ಪತ್ರೆಗೆ ನ್ಯಾಯಾಧೀಶರ ಭೇಟಿ ಪರಿಶೀಲನೆ

0

ಬೆಳ್ತಂಗಡಿ ತಾಲೂಕು ಆಸ್ಪತ್ರೆಗೆ ಶ್ರೀ. ರಾಮಲಿಂಗಪ್ಪ ಗೌರವಾನ್ವಿತ ಪ್ರಧಾನ ಸಿವಿಲ್‍ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿಗಳು ತಾಲೂಕು ಕಾನೂನು ಸೇವೆಗಳ ಸಮಿತಿ, ಬೆಳ್ತಂಗಡಿ ಮತ್ತು ಶ್ರೀ. ಶಶಾಂಕ ನಾಗೇಂದ್ರ ಭಟ್‍ ಗೌರವಾನ್ವಿತ ಒಂದನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಜೆ. ಎಂ.ಎಫ್.ಸಿ. ನ್ಯಾಯಾಲಯ, ಬೆಳ್ತಂಗಡಿ ರವರು ದಿಢೀರ್ ಭೇಟಿ ನೀಡಿ ಗಂಡಸರ ಮತ್ತು ಹೆಂಗಸರ ವಾರ್ಡ್ ಗಳಿಗೆ ಇತರ ವೈಧ್ಯಾಧಿಕಾರಿಗಳ ಕೋಣೆಗಳಿಗೆ ಭೇಟಿ ನೀಡಿ ಸ್ವಚ್ಚತೆ ಹಾಗೂ ಕುಂದು ಕೋರತೆಗಳ ಕುರಿತು ಖುದ್ದಾಗಿ ವಿಕ್ಷಿಸಿದರು ಹಾಗೂ ಕೋವಿಡ್‍ ನಂತರ ಬಂದ ಆಮ್ಲಜನಿಕ ಘಟಕ,...

ದಿಡುಪೆ ಜಲಪಾತದಲ್ಲಿ ಅರಣ್ಯ ವಾಚರ್ ಮೇಲೆ ಹಲ್ಲೆ:ಹಣ ದೋಚಿ ಪರಾರಿ ಪ್ರಕರಣ ದಾಖಲು

0

ಬೆಳ್ತಂಗಡಿ: ದಿಡುಪೆಯಲ್ಲಿರುವ ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ಜಲಪಾತ ಪ್ರವೇಶ ದ್ವಾರದಲ್ಲಿ ಪ್ರವೇಶ ಶುಲ್ಕದ ಡಿಜಿಟಲ್ ರಶೀದಿ ವಿಚಾರವಾಗಿ ಉಂಟಾದ ವಾಗ್ವಾದ ಹಲ್ಲೆ ಮತ್ತು ಹಣ ದೋಚಿದ ಘಟನೆ ಜು‌.19ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಅರಣ್ಯ ಇಲಾಖೆಯ ಗುತ್ತಿಗೆ ವಾಚರ್ ಆಗಿರುವ ಗೋಪಾಲ (42) ಅವರು ದಿಡುಪೆ ಜಲಪಾತಕ್ಕೆ ಆಗಮಿಸುವ ಪ್ರವಾಸಿಗರಿಂದ ಪ್ರವೇಶ ಶುಲ್ಕ ಸಂಗ್ರಹಿಸುವ ಕರ್ತವ್ಯ ನಿರ್ವಹಿಸುತ್ತಿದ್ದರು. ಮಧ್ಯಾಹ್ನ 15 ಯುವಕರು ಜಲಪಾತಕ್ಕೆ ಆಗಮಿಸಿದ್ದು, ಇಲಾಖೆಯ ನಿಯಮದಂತೆ ತಲಾ 200 ರೂ.ನಂತೆ ಒಟ್ಟು3,000 ರೂ. ನಗದು ಪಡೆದು ಕೈಬರಹದ ರಶೀದಿ ನೀಡಲಾಗಿತ್ತು. ಜತೆಗೆ...

ಮಂಗಳೂರು; ಚಿನ್ನಕ್ಕಾಗಿ ವೃದ್ದೆಯ ಕೊಲೆ ಪ್ರಕರಣ ಮೂವರು  ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟ

0

ಬಂಟ್ವಾಳ; ಚಿನ್ನಕ್ಕಾಗಿ ತಾನು ಆರೈಕೆ‌ಮಾಡುತ್ತಿದ್ದ ವೃದ್ದೆಯನ್ನು ಸ್ನೇಹಿತರೊಂದಿಗೆ ಸೇರಿ‌ ಉಸಿರು ಕಟ್ಟಿಸಿ ಕೊಂದು‌ ಚಿನ್ನಾಭರಣಗಳನ್ನು ದೋಚಿದ ಪ್ರಕರಣದಲ್ಲಿ ಮೂವರು ಆರೋಪಿಗಳಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.ಬಂಟ್ವಾಳ ಅಮ್ಮುಂಜೆ ನಿವಾಸಿಯಾದ ವೃದ್ದೆ ಬೆನಡಿಕ್ಟ್ ಕಾರ್ಲೋ (73) ಎಂಬವರ ಆರೈಕೆ ನೋಡಿಕೊಳ್ಳುತ್ತಿದ್ದ ಆರೋಪಿತೆ ಬಂಟ್ವಾಳ ಅಮ್ಟಾಡಿ ನಿವಾಸಿ ಕು.ಏಲ್ಮಾ ಪ್ರೆಶ್ಚಿತ್ ಬರೆಟ್ರೋ (23)ಎಂಬಾಕೆಯು, ವೃಧ್ದೆಯ ಬಳಿಯಿದ್ದ ಚಿನ್ನಾಭರಣಗಳನ್ನು ಸುಲಿಗೆ ಮಾಡುವ ಉದ್ದೇಶದಿಂದ, ತನ್ನ ಸ್ನೇಹಿತ ಬಂಟ್ವಾಳ ನರಿಕೊಂಬು ನಿವಾಸಿ ಸತೀಶ ನಾಯಕ್ (28) ಎಂಬಾತನ ಸಹಾಯದಿಂದ ವೃದ್ದೆ ಸೇವಿಸುವ ಆಹಾರದಲ್ಲಿ ವಿಷ ಬೆರೆಸಿ ಕೊಲ್ಲಲು ಯತ್ನಿಸಿ,...

ಬಿಸಿರೋಡ್ ಲಾವಣ್ಯ ಕೊಲೆ ಪ್ರಕರಣ‌; ಆರೋಪಿ ಚೇತನ್ ಪೊಲೀಸ್ ವಶಕ್ಕೆ

0

ಬಂಟ್ವಾಳ : ಬಿ.ಸಿ.ರೋಡು ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜು.16ರಂದು ನಡೆದ ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಚೇತನ್ ಆರೋಗ್ಯ ಸ್ಥಿರವಾಗಿರುವ ಹಿನ್ನೆಲೆಯಲ್ಲಿ ಬಂಟ್ವಾಳ ನಗರ ಪೊಲೀಸರು 11 ದಿನಗಳ ಬಳಿಕ ಸೋಮವಾರ ವಶಕ್ಕೆ ತೆಗೆದುಕೊಂಡಿದ್ದಾರೆ. ಕಕ್ಯಪದವು ನಿವಾಸಿ ಲಾವಣ್ಯ ಎಂಬ ಯುವತಿಯನ್ನು ಬೆಳ್ತಂಗಡಿ ಓಡಿಲ್ನಾಳ ನಿವಾಸಿ ಚೇತನ್ ಮಾರಕಾಸ್ತ್ರದಿಂದ ಹಲ್ಲೆ ನಡೆಸಿ ಹತ್ಯೆಗೈದಿರುವ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಘಟನೆ ನಡೆದ ಬಳಿಕ ಆತ ಕಾರಿನಲ್ಲಿ ಸ್ಥಳದಿಂದ ಪರಾರಿಯಾಗಿದ್ದನು. ಘಟನೆಯ ಮರುದಿನ ಮಂಗಳೂರಿನಲ್ಲಿ ಆರೋಪಿಯನ್ನು ಪೊಲೀಸರು ವಶಕ್ಕೆ...

12 ವರ್ಷಗಳ‌ ಹಿಂದೆ ನಡೆದ ಗಂಗಾಧರ ಪಾಂಗಾಳ ಕೊಲೆ ಪ್ರಕರಣ; ಸತೀಶ್ ಬೈಕಂಪಾಡಿ ಸೇರಿ ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ

0

ಮಂಗಳೂರು; ಹನ್ನೆರಡು ವರ್ಷಗಳ‌ಹಿಂದೆ ಮಂಗಳೂರಿನ ಪಣಂಬೂರಿನಲ್ಲಿ ನಡೆದಿದ್ದ ಗಂಗಾಧರ ಪಾಂಗಳ ಕೊಲೆ ಪ್ರಕರಣದ ಎಲ್ಲ ನಾಲ್ಕು ಮಂದಿ ಆರೋಪಿಗಳಿಗೆ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.ದಿನಾಂಕ: 15-05-2014 ರಂದು ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ಮೀನಕಳಿಯಾ ಗಣೇಶ್ ಶಿಪ್ಪಿಂಗ್ ಗೋಡೌನ್ ಬಳಿ ಸಾರ್ವಜನಿಕ ಡಾಂಬಾರು ರಸ್ತೆಯಲ್ಲಿ ಮೀನಕಳಿಯ ನಿವಾಸಿ ಗಂಗಾಧರ ಪಾಂಗಾಳ ಎಂಬವರನ್ನು ಆರೋಪಿಗಳಾದ ಸತೀಶ್ ಬೈಕಂಪಾಡಿ, ಪುಷ್ಪರಾಜ್, ಹರೀಶ್ ಬೈಕಂಪಾಡಿ, ಭಾಸ್ಕರ್ ಬೈಕಂಪಾಡಿ ಎಂಬವರುಗಳು ಸೇರಿ ಹಳೆ ದ್ವೇಷದಿಂದ ಒಳಸಂಚು ನಡೆಸಿ ಕೊಲೆ ಮಾಡಿದ್ದರು. ಆದರೆ ಮೊದಲಿಗೆ ರಸ್ತೆಯಲ್ಲಿ ಅಪಘಾತದಿಂದ...