Home ಅಪರಾಧ ಲೋಕ ಶಿರ್ಲಾಲು ಗ್ರಾಮಸಭೆಯಲ್ಲಿ ಹೊಡೆದಾಟ ಎರಡೂ ಗು‌ಂಪಿನ ವಿರುದ್ದ ಪ್ರಕರಣ ದಾಖಲು

ಶಿರ್ಲಾಲು ಗ್ರಾಮಸಭೆಯಲ್ಲಿ ಹೊಡೆದಾಟ ಎರಡೂ ಗು‌ಂಪಿನ ವಿರುದ್ದ ಪ್ರಕರಣ ದಾಖಲು

437
0

ಬೆಳ್ತಂಗಡಿ: ಶಿರ್ಲಾಲು ಗ್ರಾಮಸಭೆಯಲ್ಲಿ ನಡೆದ ಹೊಡೆದಾಟಕ್ಕೆ ಸಂಬಂಧಿಸಿದಂತೆ ಎರಡು ತಂಡಗಳ ವಿರುದ್ದ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಆನಂದ ಪೂಜಾರಿ ಎಂಬವರು ನೀಡಿರು ದೂರಿನಲ್ಲಿ ಗ್ರಾಮಸಭೆಯಲ್ಲಿ ಕುಶಾಲಪ್ಪ ಗೌಡ ಮತ್ತು ನವೀನ್ ನಡುವೆ ದೇವಸ್ಥಾನದ ಹಣದ ವಿಚಾರವಾಗಿ ಮಾತಿಗೆ ಮಾತು ಬೆಳೆದಿದೆ ಈ ಸಂದರ್ಭದಲ್ಲಿ ಆನಂದ ಪೂಜಾರಿ ಇದನ್ನು ಆಕ್ಷೇಪಿಸಿದಾಗ ಅವರ ಮೇಲೆ ನವೀನ್ ಸಾಲ್ಯಾನ್, ರಾಮ್ ಕುಮಾರ್, ರವೀಂದ್ರ, ದಿನೇಶ್ ಹಾಗೂ ಪುರುಷೋತ್ತಮ ಅವರು ಅವಾಚ್ಯವಾಗಿ ಬೈದು ಹಲ್ಲೆ ನಡೆಸಿರುವುದಲ್ಲದೆ ಗಲಾಟೆ ತಡೆಯಲು ಬಂದ ಮಹಿಳೆಯೊಬ್ಬರಿಗೆ ಪುರುಷೋತ್ತಮ ಕೈಯಿಂದ ಹಲ್ಲೆ ನಡೆಸಿದ್ದಾನೆ ಎಂದು ದೂರು ನೀಡಲಾಗಿದ್ದು ಅದರಂತೆ ಪ್ರಕರಣ ದಾಖಲಿಸಲಾಗಿದೆ.


ಇದೇ ಘಟನೆಗೆ ಸಂಬಂಧಿಸಿದಂತೆ ರವೀಂದ್ರ ಎಂಬವರು ದೂರು ನೀಡಿದ್ದು ತನಗೆ ಹಾಗೂ ರಾಮ್ ಕುಮಾರ್ ಅವರಿಗೆ ಕುಶಾಲಪ್ಪ ಗೌಡ ಹಾಗೂ ಆನಂದ ಪೂಜಾರಿ ಅವರು ಅವಾಚ್ಯವಾಗಿ ಬೈದು ಹಲ್ಲೆ ನಡೆಸಿರುವುದಾಗಿ ಆರೋಪಿಸಲಾಗಿದೆ.
ಎರಡೂ ದೂರುಗಳನ್ನು ಸ್ವೀಕರಿಸಿರುವ ವೇಣೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಹಲ್ಲೆಗೆ ಒಳಗಾದ ಎರಡೂ ಕಡೆಯವರು ಆಸ್ಪತ್ರೆಗೆ ದಾಖಲಾಗಿದ್ದಾರೆ

LEAVE A REPLY

Please enter your comment!
Please enter your name here