Home ಅಪಘಾತ ಬೆಳ್ತಂಗಡಿ; ಮರದ ಗೆಲ್ಲು ಕಡಿಯುವ ವೇಳೆ ವಿದ್ಯುತ್ ಶಾಕ್ ವ್ಯಕ್ತಿಸಾವು

ಬೆಳ್ತಂಗಡಿ; ಮರದ ಗೆಲ್ಲು ಕಡಿಯುವ ವೇಳೆ ವಿದ್ಯುತ್ ಶಾಕ್ ವ್ಯಕ್ತಿಸಾವು

23
0

ಬೆಳ್ತಂಗಡಿ: ನಗರದ ಹುಣ್ಸೆಕಟ್ಟೆ ಸಮೀಪದ ಪುಂಡಿಕ್ಕು ಎಂಬಲ್ಲಿ ಮರದ ಗೆಲ್ಲು ಕಡಿಯುತ್ತಿರುವಾಗ ಆಕಸ್ಮಿಕವಾಗಿ ವಿದ್ಯುತ್ ತಂತಿ ಮೇಲೆ ಬಿದ್ದು ವಿದ್ಯುತ್ ಶಾಕ್ ತಗಲಿ ಗೆಲ್ಲು ಕಡಿಯುತ್ತಿದ್ದ ಕಾರ್ಮಿಕ ಮೃತಪಟ್ಟ ದಾರುಣ ಘಟನೆ ಗುರುವಾರ ಬೆಳಿಗ್ಗೆ ಪುಂಡಿಕ್ಕು ಎಂಬಲ್ಲಿ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಕಸಬಾ ಗ್ರಾಮದ ಪುಂಡಿಕ್ಕು ಎಂಬಲ್ಲಿ ಚನನ ಗೌಡ (69ವ) ಎಂಬವರು ಇಂದು ಬೆಳಿಗ್ಗೆ ಮೆಸ್ಕಾಂ ಇಲಾಖೆಯ ಅನುಮತಿ ಪಡೆಯದೇ, ಖಾಸಗಿ ಜಮೀನಿನಲ್ಲಿ ಇರುವ ಮರದ ಗೆಲ್ಲು ಕಡಿಯುವಾಗ, ಗೆಲ್ಲು ಆಕಸ್ಮಿಕವಾಗಿ, ಅಲ್ಲಿಯೇ ರಸ್ತೆಯಲ್ಲಿ ಹಾದು ಹೋಗಿರುವ 11ಕೆವಿ ಕುವೆಟ್ಟು ಫೀಡರ್‌ನ ಹೆಚ್.ಟಿ ಲೈನ್‌ಗೆ ಬಿದ್ದು ಈ ಘಟನೆ ನಡೆದಿದೆ. ಗೆಲ್ಲು ತಂತಿ ಮೇಲೆ ಬಿದ್ದುದರಿಂದ ವಿದ್ಯುತ್ ಶಾಕ್ ತಗಲಿ, ಅವರು ಮರದಿಂದ ಕೆಳಗೆ ಬಿದ್ದಿದ್ದು, ಕೂಡಲೇ ಅವರನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ಕರೆದೊಯ್ಯಲಾಯಿತು. ಅಲ್ಲಿಯ ವೈದ್ಯರು ತಪಾಸಣೆ ನಡೆಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದು ಕೊಂಡು ಹೋಗಲು ತಿಳಿಸಿದ್ದು, ಕರೆದುಕೊಂಡು ಹೋಗುವ ವೇಳೆ ಅವರು ಮೃತಪಟ್ಟಿರುವುದಾಗಿ ತಿಳಿದು ಬಂದಿದೆ ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ‌ದಾಖಲಿಸಲಾಗಿದೆ.

LEAVE A REPLY

Please enter your comment!
Please enter your name here