Home ಸ್ಥಳೀಯ ಸಮಾಚಾರ ಸತ್ಯಶೋಧಕ ವೇದಿಕೆಯಿಂದ ವಿಶ್ವ ಪರಿಸರ ದಿನಾಚರಣೆ

ಸತ್ಯಶೋಧಕ ವೇದಿಕೆಯಿಂದ ವಿಶ್ವ ಪರಿಸರ ದಿನಾಚರಣೆ

0
26

ಬೆಳ್ತಂಗಡಿ;  ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಸತ್ಯ ಶೋಧಕ ವೇದಿಕೆಯಿಂದ ಭಾನುವಾರ ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಗ್ರಾಮದ ಹಚ್ಚಾಡಿ ಅಂಗನವಾಡಿ ಕೇಂದ್ರದ ಪುಟ್ಟ ಮಕ್ಕಳೊಂದಿಗೆ, ಅಂಗನವಾಡಿ ಪರಿಸರದಲ್ಲಿ ಗಿಡ ನೆಡುವ ಕಾರ್ಯಕ್ರಮ ನಡೆಸಲಾಯಿತು.

ಸಭಾ ಕಾರ್ಯಕ್ರಮದಲ್ಲಿ ಸತ್ಯ ಶೋಧಕ ವೇದಿಕೆಯ ಅಧ್ಯಕ್ಷರಾದ ಸುಕೇಶ್ ಮಾಲಾಡಿ ರವರು ಮಾತಾಡಿ, ನಮ್ಮ ಮುಂದಿನ‌ ಬದುಕಿಗಾಗಿ ನಾವು ಪರಿಸರವನ್ನು ಸಂರಕ್ಷಣೆ ಮಾಡಲೇ ಬೇಕಾಗಿದೆ. ಹಸಿರೇ ಉಸಿರು, ಉಸಿರಿಗಾಗಿ ಪರಿಸರ ಎನ್ನುವಂತೆ ಸತ್ಯ ಶೋಧಕದ ಆಶಯಗಳಲ್ಲಿ ಪರಿಸರ ಜಾಗ್ರತಿ ಕಾರ್ಯಕ್ರಮ ಕೂಡ ಒಂದು. ಪರಿಸರದ ಕಾಳಜಿ ಸಣ್ಣ ಮಕ್ಕಳಿಂದಲೇ ಆರಂಭವಾಗಬೇಕು ಎಂದು ಸಣ್ಣ ಮಕ್ಕಳನ್ನೇ ಆಯ್ಕೆ ಮಾಡಿದ್ದೇವೆ.‌ ಮುಂದಿನ ದಿನಗಳಲ್ಲಿ ಹಚ್ಚಾಡಿ ಅಂಗನವಾಡಿ ಕೇಂದ್ರಕ್ಕೆ ತಮ್ಮ ತಂಡದಿಂದಾಗುವ ಸಂಪೂರ್ಣ ಸಹಕಾರ ನೀಡುವುದಾಗಿ ಹೇಳಿದರು. ವೇದಿಕೆಯಲ್ಲಿದ್ದ ಹಚ್ಚಾಡಿ ಅಂಗನವಾಡಿ ಕೇಂದ್ರದ ಶಿಕ್ಷಕಿ ಗುಲಾಬಿ‌ ರವರು ಪರಿಸರದ ದಿನದ ಪ್ರಯುಕ್ತ ಗಿಡ ನೆಡುವ ಕಾರ್ಯಕ್ರಮಕ್ಕೆ ನಮ್ಮ ಅಂಗನವಾಡಿಯನ್ನು ಆಯ್ಕೆ ಮಾಡಿಕೊಂಡಿದ್ದಕ್ಕಾಗಿ ಸತ್ಯ ಶೋಧಕ ತಂಡಕ್ಕೆ ಧನ್ಯವಾದ ಸಲ್ಲಿಸಿದರು.‌ ವೇದಿಕೆಯಲ್ಲಿ ಪುಟಾಣಿ ವಂಶಿಕಾ ಇದ್ದರು.‌ ಸಭಾ ಕಾರ್ಯಕ್ರಮದ ಬಳಿಕ ಅಂಗನವಾಡಿ ಪರಿಸರದಲ್ಲಿ ಮಕ್ಕಳಿಂದ ಹಾಗೂ ಪೋಷಕರಿಂದ ಗಿಡ ನೆಡಿಸಲಾಯಿತು. ಬಳಿಕ ಹಾಜರಿದ್ದ ಎಲ್ಲರಿಗೂ ಸಿಹಿ ತಿಂಡಿ ವಿತರಿಸಲಾಯಿತು. ಗಿರೀಶ್ ಪಣಕಜೆ ಸ್ವಾಗತಿಸಿ, ಬಾಬಿ ಮಡಂತ್ಯಾರ್ ವಂದಿಸಿದರು.

NO COMMENTS

LEAVE A REPLY

Please enter your comment!
Please enter your name here