Home ಸ್ಥಳೀಯ ಸಮಾಚಾರ ಬೆಳ್ತಂಗಡಿ;  ಸವಣಾಲು ಹಿತ್ತಲಪೇಲ ನದಿಯಲ್ಲಿ ಕೊಚ್ಚಿ ಹೋದ ಬೈಕ್ ಸವಾರರು. ಪವಾಡ ಸದೃಶ ಪಾರು

ಬೆಳ್ತಂಗಡಿ;  ಸವಣಾಲು ಹಿತ್ತಲಪೇಲ ನದಿಯಲ್ಲಿ ಕೊಚ್ಚಿ ಹೋದ ಬೈಕ್ ಸವಾರರು. ಪವಾಡ ಸದೃಶ ಪಾರು

6
0

ಬೆಳ್ತಂಗಡಿ;  ಸವಣಾಲು ಗ್ರಾಮದ ಹಿತ್ತಿಲಪೇಲ ಕೂಡುಜಾಲು ಸಮೀಪದ ನದಿಯಲ್ಲಿ ಯುವಕರೀರ್ವರು ಬೈಕ್ ಸಮೇತ ನೀರಿನಲ್ಲಿ ಕೊಚ್ಚಿ ಹೋಗಿ ಪವಾಡ ಸದೃಶ ರೀತಿಯಲ್ಲಿ ಬದುಕಿ ಉಳಿದ ಘಟನೆ ಆದಿತ್ಯವಾರ ನಡೆದಿದೆ.

ಸವಣಾಲು ಗ್ರಾಮದ ಮಂಜದಬೆಟ್ಟುವಿನಿಂದ ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಹಿತ್ತಿಲಪೇಲ ಪ್ರದೇಶವನ್ನು ಸಂಪರ್ಕಿಸುವ ಕೂಡುಜಾಲು ಎಂಬಲ್ಲಿ ಹರಿಯುತ್ತಿರುವ ಹಿತ್ತಿಲಪೇಲ ಪ್ರದೇಶದ ಕೆಳಗಿನ ಪೇಲ ಎಂಬಲ್ಲಿನ ನಿವಾಸಿ ಕರಿಯ ಮಲೆಕುಡಿಯ ಎಂಬವರ ಮಗ ಸತೀಶ್ ಮತ್ತು ಸಹ ಸವಾರ ಸುಳ್ಯೋಡಿ ನಿವಾಸಿ ಸಂಜೀವ ಪೂಜಾರಿ ಎಂಬವರು ಕೆಲಸಕ್ಕೆ ಹೋಗುವ ಸಂದರ್ಭದಲ್ಲಿ ಈ ನದಿಯನ್ನು ಬೈಕ್ ಸಮೇತ ದಾಟುವ ಸಂದರ್ಭದಲ್ಲಿ ನದಿ ನೀರಿನಲ್ಲಿ ಕೊಚ್ಚಿ ಹೋಗಿರುತ್ತಾರೆ. ಅದೃಷ್ಟವಶಾತ್ ಬೈಕ್ ನದಿ ಬದಿಯಲ್ಲಿ ಸಿಲುಕಿದ್ದು , ಯುವಕರಿಬ್ಬರು ಯಾವುದೋ ಬಳ್ಳಿಯ ಸಹಾಯದಿಂದ ಪವಾಡ ಸದೃಶ ರೀತಿಯಲ್ಲಿ ಬದುಕುಳಿದಿದ್ದಾರೆ.

ಸೇತುವೆ ನಿರ್ಮಿಸಿ; ಜಯಾನಂದ ಪಿಲಿಕಲ ಒತ್ತಾಯ


ಯಾವುದೇ ಸರ್ಕಾರಗಳು ಬಂದರೂ ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ನಿವಾಸಿಗಳ ಅಭಿವೃದ್ಧಿ ಕಾರ್ಯ ಶೂನ್ಯವಾಗಿದೆ. ಅಭಿವೃದ್ಧಿಯ ಬರವಸೆ ಬರವಸೆಯಾಗಿಯೇ ಉಳಿದಿದೆ. ಸರ್ಕಾರಗಳು ಆದಿವಾಸಿಗಳ ಜೀವ ಬಲಿದಾನಕ್ಕಾಗಿ ರಣಹದ್ದುನಂತೆ ಕಾಯುತ್ತಿರುವುದು ಸರಿಯಲ್ಲ. ಇಲ್ಲಿ ಸೇತುವೆ ನಿರ್ಮಾಣ ಮಾಡುವ ಮೂಲಕ ಜನರ ಜೀವ ಉಳಿಸಬೇಕು ಜೊತೆಗೆ ಈ ಪ್ರದೇಶಕ್ಕೆ ರಸ್ತೆ , ಸೇತುವೆ ಸೇರಿದಂತೆ ವಿದ್ಯುತ್ ಪೂರೈಕೆ ಮಾಡಬೇಕು

ಜಯಾನಂದ ಪಿಲಿಕಲ
ಪ್ರಧಾನ ಕಾರ್ಯದರ್ಶಿ
ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ
ಬೆಳ್ತಂಗಡಿ ತಾಲೂಕು (ದ.ಕ)

LEAVE A REPLY

Please enter your comment!
Please enter your name here