ಬೆಳ್ತಂಗಡಿ; ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಅಪರಾಧ ಪ್ರಕರಣಗಳ ಬಗ್ಗೆ ವ್ಯಕ್ತಿಯೊಬ್ಬ ಧರ್ಮಸ್ಥಳ ಠಾಣೆಗೆ ಬಂದು ಮಾಹಿತಿ ನೀಡುತ್ತಾನೆ ಎಂಬ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಮಾಹಿತಿಯ ಬಗ್ಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರು ಸ್ಪಷ್ಟನೆ ನೀಡಿದ್ದಾರೆ.
ಧರ್ಮಸ್ಥಳ ಪೊಲೀಸರು ಈ ಪತ್ರದ ಬಗ್ಗೆ ಸದ್ರಿ ವಕೀಲರುಗಳನ್ನು ಸಂಪರ್ಕಿಸಿದ್ದು ಅವರು ಈ ಬಗ್ಗೆ ಸ್ಪಷ್ಟನೆ ನೀಡಿದ್ದು ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಅಪರಾಥ ಕೃತ್ಯಗಳ ಬಗ್ಗೆ ತನಗೆ ಮಾಹಿತಿಯಿರುವುದಾಗಿ ಹಾಗೂ ತಾನು ಪೊಲೀಸ್ ಠಾಣೆಗೆ ಶರಣಾಗಿ ಮಾಹಿತಿಯನ್ನು ನೀಡಲು ಸಿದ್ದನಿರುವುದಾಗಿ ತಿಳಿಸಿರುತ್ತಾರೆ. ಎಂದು ವಕೀಲರು ಪೊಲೀಸರುಲಿಗೆ ಮಾಹಿತಿ ನೀಡಿದ್ದಾರೆ. ಅಲ್ಲದೆ ಸದ್ರಿ ವ್ಯಕ್ತಿಗೆ ಅಗತ್ಯವಾದ ಕಾನೂನು ಸುರಕ್ಷತೆಯನ್ನು ಕಲ್ಪಿಸಿ ಆಬಳಿಕ ಆತನನ್ನು ಹಾಜರುಪಡಿಸುವುದಾಗಿ ವಕೀಲರು ಮಾಹಿತಿ ನೀಡಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ. ಅದರಂತೆ ಸದ್ರಿ ವ್ಯಕ್ತಿ ಹಾಜರಾಗಿ ಮಾಹಿತಿ ನೀಡಿದಲ್ಲಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರು ಮಾಹಿತಿ ನೀಡಿದ್ದಾರೆ.
ಸಾಮಾಜಿಕ ಜಾಕತಾಣದಲ್ಲಿ ಹರಿದಾಡಿದ ಪತ್ರದಲ್ಲಿ ಏನಿತ್ತು
ಬೆಂಗಳೂರಿನ ವಕೀಲರಾದ ಓಜಸ್ವಿ ಗೌಡ ಮತ್ತು ಸಚಿನ್ ಎಸ್ ದೇಶಪಾಂಡೆ ಎಂಬವರ ಹೆಸರಿನಲ್ಲಿ ಇದು ಬಂದಿದ್ದು ಅದರಲ್ಲಿ ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಹಲವಾರು ಹತ್ಯೆಗಳನ್ನು ಮುಚ್ಚಿ ಹಾಕುವ ಸಲುವಾಗಿ ಮೃತದೇಹಗಳನ್ನು ಹೂತು ಹಾಕಿದ್ದ ವ್ಯಕ್ತಿಯೊಬ್ಬ ಧರ್ಮಸ್ಥಳ ಠಾಣೆಗೆ ಹಾಜರಾಗಿ ಶರಣಾಗುವ ನಿರ್ಧಾರ ಮಾಡಿದ್ದಾರೆ. ಮತ್ತು ತಾನು ಹೂತು ಹಾಕಿರುವ ಮೃತದೇಹಗಳನ್ನು ಪೊಲೀಸರ ಸಮ್ಮುಖದಲ್ಲಿ ಹೊರತೆಗೆಯುವುದಾಗಿ ನಿರ್ಧಾರ ಮಾಡಿದ್ದಾರೆ ಎಂಬ ಪತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಇದೀಗ ಈ ವಿಚಾರ ಹಲವಾರು ಚರ್ಚೆಗಳಿಗೆ ಎಡೆ ಮಾಡಿಕೊಟ್ಟಿದ್ದು ಇದರ ಹಿನ್ನಲೆಯೇನು ಎಂಬ ವಿಚಾರಗಳು ಇನ್ನಷ್ಟೇ ಜೊರಬರಬೇಕಾಗಿದೆ.
