ಬಂದಾರು : ತಾಲೂಕಿನಲ್ಲಿ ಸುರಿಯುತ್ತಿರುವ ವಿಪರೀತ ಗಾಳಿ ಮಳೆಯ ಪರಿಣಾಮ ಮೊಗ್ರು ಗ್ರಾಮದ ಕೊಳಬ್ಬೆ ಸಿದ್ದಣ್ಣ ಎಂಬವರ ವಾಸದ ಮನೆಗೆ ಹಾನಿಯುಂಟಾಗಿದೆ. ನಡುಮನೆ,ಬರುoಗುಡೆಲು, ಪುಣ್ಕೆದಡಿ, ಅರ್ತಿದಡಿ, ಪರಕ್ಕಾಜೆ, ಕಡಮ್ಮಾಜೆ ಪರಿಸರದಲ್ಲಿ ಭಾರೀ ಗಾಳಿ ಬೀಸಿದ್ದು ಅಡಿಕೆ ಮರಗಳು ನೆಲಕ್ಕುರುಳಿದೆ. ಕೃಷಿಗೆ ವ್ಯಾಪಕವಾದ ಹಾನಿಯಾಗಿದ್ದು ಅಪಾರ ನಷ್ಟ ಸಂಭವಿಸಿದೆ.
ಸ್ಥಳಕ್ಕೆ ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷ ದಿನೇಶ್ ಗೌಡ ಖಂಡಿಗ, ಸದಸ್ಯರಾದ ಬಾಲಕೃಷ್ಣ ಗೌಡ ಮುಗೇರಡ್ಕ, ಗಂಗಾಧರ ಪೂಜಾರಿ ಹಾಗೂ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ ಭೇಟಿ ನೀಡಿ ಪರಿಶೀಲನೆ ನಡೆಸಿದರು.


