Home ಅಪರಾಧ ಲೋಕ ಕೊಲೆಯತ್ನ ಪ್ರಕರಣ; 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಧರ್ಮಸ್ಥಳದಲ್ಲಿ ಬಂಧಿಸಿದ ಬಂಟ್ವಾಳ ಪೊಲೀಸರು

ಕೊಲೆಯತ್ನ ಪ್ರಕರಣ; 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಧರ್ಮಸ್ಥಳದಲ್ಲಿ ಬಂಧಿಸಿದ ಬಂಟ್ವಾಳ ಪೊಲೀಸರು

70
0

ಬೆಳ್ತಂಗಡಿ; 2011 ನೇ ಸಾಲಿನಲ್ಲಿ ಬಂಟ್ವಾಳ, ತುಂಬೆ ಗ್ರಾಮದ ಅರ್ಬನಗುಡ್ಡೆ ಎಂಬಲ್ಲಿ ನಡೆದ ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ಕಳೆದ ಎಂಟು ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿ ಅಕ್ಬರ್ ಸಿದ್ದಿಕ್, ಎಂಬಾತನನ್ನು ಬಂಟ್ವಾಳ ಪೊಲೀಸರು ಧರ್ಮಸ್ಥಳ ದಲ್ಲಿ ಬಂಧಿಸಿದ್ದಾರೆ.
ಸುಮಾರು 8 ವರ್ಷಗಳಿಂದ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವಾರೆಂಟ್ ಅಸಾಮಿ ಅಕ್ಬರ್ ಸಿದ್ದಿಕ್, ವಾಸ: ಬಿ ಮೂಡ ಗ್ರಾಮ, ಬಂಟ್ವಾಳ ಎಂಬಾತನನ್ನು ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಜೂನ್ 30 ರಂದು ಧರ್ಮಸ್ಥಳದಲ್ಲಿ ಬಂಧಿಸಿದ್ದಾರೆ. ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರು‌ಪಡಿಸಿದ್ದು, ನ್ಯಾಯಾಲಯವು ಆರೋಪಿತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

LEAVE A REPLY

Please enter your comment!
Please enter your name here