Home ಬ್ರೇಕಿಂಗ್‌ ನ್ಯೂಸ್ ಸಾಕ್ಷಿ ದೂರು ದಾರ ಎಸ್.ಐ.ಟಿ  ಕಸ್ಟಡಿಗೆ

ಸಾಕ್ಷಿ ದೂರು ದಾರ ಎಸ್.ಐ.ಟಿ  ಕಸ್ಟಡಿಗೆ

5
0

ಬೆಳ್ತಂಗಡಿ; ಧರ್ಮಸ್ಥಳದಲ್ಲಿ ಹಲವಾರು ಮೃತದೇಹಗಳನ್ನು ಹೂತು ಹಾಕಿರುವುದಾಗಿ ಹೇಳಿಕೆ ನೀಡಿದ್ದ ಸಾಕ್ಷಿ ದೂರುದಾರನನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು ನ್ಯಾಯಾಲವು ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.
ಕಳೆದ ಎರಡು ತಿಂಗಳಿನಿಂದ ನಡೆಯುತ್ತಿದ್ದ ಘಟನೆಗಳಿಗೆ ಇದೀಗ ಹೊಸ ತಿರುವು ಲಭಿಸಿದೆ. ಸಾಕ್ಷಿ ದೂರುದಾರ ನೀಡುತ್ತಿರುವ ಹೇಳಿಕೆಗಳಲ್ಲಿನ ಗೊಂದಲವೇ ಆತನನ್ನು ಇಕ್ಕಟ್ಟಿಗೆ ಸಿಲುಕಿಸಿದೆ ಎಂಬ ಮಾಹಿತಿಗಳು ಲಭ್ಯವಾಗುತ್ತಿದೆ. ಆತ ತಂದ ತಲೆಬುರುಡೆಯ ವಿಚಾರದಲ್ಲಿ ಈತ ಹೇಳುತ್ತಿರುವ ವಿಚಾರಗಳಬಗ್ಗೆ ಹೆಚ್ಚಿನ ಪರಿಶೀಲನೆ ನಡೆಸಿದ ವೇಳೆ ಈತ ನೀಡಿರುವ ಹೇಳಿಕೆಗಳು ತಾಳೆಯಾಗದ ಹಿನ್ನಲೆಯಲ್ಲಿ ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುವ ಉದ್ದೇಶದಿಂದ ಆತನನ್ನು ಎಸ್.ಐ.ಟಿ ತಂಡ ವಶಕ್ಕೆ ಪಡೆಯಲಾಗಿದೆ ಎಂದು ತಿಳಿದು ಬಂದಿದೆ.

LEAVE A REPLY

Please enter your comment!
Please enter your name here