



ಉಜಿರೆ: ಇಲ್ಲಿಯ ಅರಳಿ ಬಳಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಹಾಡಹಗಲೇ ಯಾರೋ ಕಳ್ಳರು ಕಳ್ಳತನ ಮಾಡಿ ನಗ -ನಗದು ದೋಚಿ ಪರಾರಿಯಾದ ಘಟನೆ ಅ.9ರಂದು ನಡೆದಿದೆ.
ಬೆಟ್ಟು ಮನೆಯ ಅರಳಿ ನಿವಾಸಿ ಮಹಾಬಲ ರವರು ಬೆಳಗ್ಗೆ ಎಂದಿನಂತೆ ಕೆಲಸ ಹೋಗಿದ್ದು ಈ ವೇಳೆ ಮನೆಯಲ್ಲಿ ಯಾರು ಇಲ್ಲದ ವೇಳೆ ಕಳ್ಳರು ಮನೆಯ ಪಕ್ಕಾಸು ತೆಗೆದು ಮನೆಯ ಒಳನುಗ್ಗಿ ಕಪಾಟಿನಲ್ಲಿದ್ದ ರೂ. 10000 ನಗದು ಹಾಗೂ 50ಗ್ರಾಂ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿದ್ದಾರೆ.
ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.









