Home ಸಾಧಕರೊಂದಿಗೆ ಕಳೆದು ಸಿಕ್ಕಿದ್ದ 2.50ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ನಗದು ಮರಳಿಸಿ ಪ್ರಾಮಾಣಿಕತೆ ಮೆರೆದ ವಿನಯ್ ನಿವೇದಿತಾ

ಕಳೆದು ಸಿಕ್ಕಿದ್ದ 2.50ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ನಗದು ಮರಳಿಸಿ ಪ್ರಾಮಾಣಿಕತೆ ಮೆರೆದ ವಿನಯ್ ನಿವೇದಿತಾ

35
0

ಉಪ್ಪಿನಂಗಡಿ : ಬೆಳ್ತಂಗಡಿ ತಾಲೂಕು ಬಂದಾರು ಗ್ರಾಮ ಅಂಡಿಲ ನಿವಾಸಿ ರಕ್ಷಿತ್ ಇವರ ಪತ್ನಿ ಶ್ರೀಮತಿ ದೀಕ್ಷ ರಕ್ಷಿತ್ ರವರ ರೂ 2.50 ಲಕ್ಷ ಮೌಲ್ಯದ ಚಿನ್ನ ಹಾಗೂ 10 ಸಾವಿರ ನಗದು ಇದ್ದ ಪರ್ಸ್ ಉಪ್ಪಿನಂಗಡಿ ಹೋಟೆಲ್ ನಲ್ಲಿ ಡಿಸೆಂಬರ್ ಸಂಜೆ 10 ರಂದು ಕೈ ತಪ್ಪಿ ಕಳೆದು ಹೋಗಿತ್ತು. ಮನೆಗೆ ಹೋಗಿ ನೋಡುವಾಗ ಚಿನ್ನ, ನಗದು ಕಳೆದುಹೋಗಿರುವ ಬಗ್ಗೆ ಅರಿವಾಗುತ್ತೆ, ತಕ್ಷಣ ತನ್ನ ಸಂಬಂಧಿಕರಲ್ಲಿ ತಿಳಿಸಿ ಹೋಟೆಲ್ ನಲ್ಲಿ ವಿಚಾರಿಸಲು ತಿಳಿಸಿದಾಗ ನಂತರ ಚೆಕ್ ಮಾಡಿದಾಗ ಯಾರಿಗೆ ಸಿಕ್ಕಿದೆ ಅನ್ನೋದು ಅರಿವಾಗುತ್ತೆ, ಇದಾದ‌ ಬಳಿಕ ಡಿ 11 ಇಂದು ಬಜತ್ತೂರು ಗ್ರಾಮ ವಲಾಲ್ ಬೆದ್ರೂಡಿ ವಿದ್ಯಾನಗರ ಮಂತ್ರ ನಿಲಯ ನಿವಾಸಿ ವಿನಯ್ ನಿವೇದಿತಾ ರವರು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ತಮಗೆ ಸಿಕ್ಕಿದ್ದ ಚಿನ್ನ ಹಾಗೂ ನಗದನ್ನು ವಾರಸುದಾರರಿಗೆ ಹಸ್ತಾಂತರ ಮಾಡಿದರು.
ಈ ಸಂದರ್ಭದಲ್ಲಿ ಹಣ ಚಿನ್ನ ಕಳೆದುಕೊಂಡ ಶ್ರೀಮತಿ ದೀಕ್ಷಾ ರಕ್ಷಿತ್ ದಂಪತಿಗಳು ವಿನಯ್ ನಿವೇದಿತಾ ಅವರಿಗೆ ಕೃತಜ್ಞತೆ ಸಲ್ಲಿಸಿ, ಸನ್ಮಾನಿಸಿದರು. ಉಪ್ಪಿನಂಗಡಿ ಪೊಲೀಸ್ ಅಧಿಕಾರಿ ವರ್ಗಕ್ಕೂ ಕೃತಜ್ಞತೆ ಸಲ್ಲಿಸಿದರು.

LEAVE A REPLY

Please enter your comment!
Please enter your name here