ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣದಲ್ಲಿ ಸಾಕ್ಷಿ ದೂರುದಾರನಾಗಿ ಬಂದು ಆರೋಪಿಯಾಗಿ ಜೈಲಿನಲ್ಲಿರುವ ಆರೋಪಿ ಚಿನ್ನಯ್ಯನ ಎರಡನೇ ಪತ್ನಿ ವಿಚಾರಣೆಗಾಗಿ ಮಲ್ಲಿಕಾ ಅ.13 ರಂದು ಬೆಳಗ್ಗೆ 9:30 ಕ್ಕೆ ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಹಾಜರಾಗಿದ್ದಾರೆ.ಚಿನ್ನಯ್ಯನಿಗೆ ಸಂಬಂಧಿಸಿದ ಕೆಲ ಮಾಹಿತಿಗಳನ್ನು ಪಡೆಯಲು ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಹಾಗೂ ಇತರ ವಿಚಾರಗಳನ್ನು ಪಡೆಯಲು ಎಸ್.ಐ.ಟಿ ಅಧಿಕಾರಿಗಳು ಕರೆಸಿದ್ದಾರೆ ಎನ್ನಲಾಗಿದೆ.ಚಿನ್ನಯ್ಯ...
ಬೆಳ್ತಂಗಡಿ : ನಿಡ್ಲೆ ಗ್ರಾಮದ ಕುದ್ರಾಯ ಬಸ್ ನಿಲ್ದಾಣದ ಅಂಗಡಿ ಬಳಿ ಅಕ್ರಮವಾಗಿ ಮಧ್ಯ ಮಾರಾಟ ಮಾಡಲು ಯತ್ನಿಸುತ್ತಿದ್ದಾಗ ಧರ್ಮಸ್ಥಳ ಪೊಲೀಸರು ದಾಳಿ ಮಾಡಿ ಮಧ್ಯ ಸಮೇತ ಆರೋಪಿಯನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ.
ಧರ್ಮಸ್ಥಳ ಪ್ರಭಾರ ಪಿಎಸ್ಐ ಸಿಕಂಧರ್ ಪಾಷಾ ಸಿಬ್ಬಂದಿಗಳೊಂದಿಗೆ ಕುದ್ರಾಯದ ಅಂಗಡಿಗೆ ದಾಳಿ ನಡೆಸಿ ಪರಿಶೀಲಿಸಿದಾಗ ಅಂಗಡಿಯ ಹೊರಗಡೆ ಹಿಂಬದಿಯಲ್ಲಿ ಗೋಣಿ ಚೀಲದ...
ಬೆಳ್ತಂಗಡಿ: ಗುರುವಾಯನಕೆರೆ ನವಶಕ್ತಿಯ ಉದ್ಯಮಿ ಶಶಿಧರ ಶೆಟ್ಟಿ ಅವರ ತಾಯಿ ಕಾಶಿ ಶೆಟ್ಟಿ (88)ಯವರು ಇಂದು ಮುಂಜಾನೆ ನಿಧನ ಹೊಂದಿದ್ದಾರೆ ಎಂದು ತಿಳಿದು ಬಂದಿದೆ.
ಮಕ್ಕಳಾದ ಉದ್ಯಮಿ ಶಶಿಧರ್ ಶೆಟ್ಟಿ, ಶ್ರೀನಿವಾಸ್ ಶೆಟ್ಟಿ, ಜಯರಾಮ ಶೆಟ್ಟಿ, ಪ್ರಶಾಂತ್ ಶೆಟ್ಟಿ, ಹರೀಶ್ ಶೆಟ್ಟಿ, ರಾಜೇಶ್ ಶೆಟ್ಟಿ ಹಾಗೂ ಅಪಾರ ಬಂಧು ವರ್ಗದವರನ್ನು ಅಗಲಿದ್ದಾರೆ.
ಬೆಳ್ತಂಗಡಿ; ಮುಂಡಾಜೆ ವಿವೇಕಾನಂದ ವಿದ್ಯಾಸಂಸ್ಥೆ ಆತಿಥ್ಯದಲ್ಲಿ ಅಕ್ಟೋಬರ್ ಹತ್ತು ಹಾಗೂ ಹನ್ನೊಂದರಂದು ನಡೆದ ಎಂಟು ಜಿಲ್ಲೆಯನ್ನು ಒಳಗೊಂಡ ಮೈಸೂರು ವಲಯ ಹದಿನಾಲ್ಕು ವರ್ಷ ಕೆಳಗಿನ ವಯೋಮಾನದ ವಾಲಿಬಾಲ್ ಪಂದ್ಯಾ ಕೂಟದಲ್ಲಿ ಇಂದ್ರ ಪ್ರಸ್ಥ ವಿದ್ಯಾಲಯ ಉಪ್ಪಿನಂಗಡಿಯ ವಿದ್ಯಾರ್ಥಿ ಶಿಶಿರ್ ಜಯವಿಕ್ರಮ್
ದಕ್ಷಿಣ ಕನ್ನಡ ಜಿಲ್ಲಾ ತಂಡವನ್ನು ಪ್ರತಿನಿಧಿಸಿ ಮೈಸೂರು ವಲಯ ಮಟ್ಟದಲ್ಲಿ ಪ್ರಥಮ...
ಧರ್ಮಸ್ಥಳ: ಶ್ರದ್ಧಾ-ಭಕ್ತಿಯಿಂದ ಭಗವಂತನ ಆರಾಧನೆಯೊಂದಿಗೆ ಸಾಧ್ಯವಾದಷ್ಟು ಪರೋಪಕಾರ ಹಾಗೂ ಇತರರ ಸೇವೆ ಮಾಡಬೇಕು. ಆಗ ದೇವರು ಸಂತೃಪ್ತರಾಗಿ ನಮ್ಮನ್ನು ಅನುಗ್ರಹಿಸುತ್ತಾರೆ ಎಂದು ಶೃಂಗೇರಿ ಪೀಠದ ಪೂಜ್ಯ ವಿಧುಶೇಖರ ಭಾರತೀ ಸ್ವಾಮೀಜಿ ಹೇಳಿದರು.
ಅವರು ಭಾನುವಾರ ಧರ್ಮಸ್ಥಳದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆಶ್ರಯದಲ್ಲಿ ೬೬೬ನೇ “ವಾತ್ಸಲ್ಯ ಮನೆ” ಹಸ್ತಾಂತರ ಮಾಡಿ ಫಲಾನುಭವಿಗಳಿಗೆ...
ಬೆಳ್ತಂಗಡಿ; ರೋಟರಿ ಸಮುದಾಯ ದಳ ಮುಂಡಾಜೆ, ಕ್ರೈಸ್ಟ್ ಅಕಾಡೆಮಿ ಮುಂಡಾಜೆ, ಪೊಲೀಸ್ ಇಲಾಖೆ ಬೆಳ್ತಂಗಡಿ ಇದರ ಸಹಯೋಗದೊಂದಿಗೆ ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ಅಪರಾಧಗಳು, ಮಾದಕ ದ್ರವ್ಯಗಳಿಂದಾಗುವ ಅಪರಾಧಗಳು, ಹಾಗೂ ಸೈಬರ್ ಅಪರಾಧಗಳ ಬಗ್ಗೆ ಕಾನೂನು ಮಾಹಿತಿ ಕಾರ್ಯಾಗಾರ ನಡೆಯಿತು.ಕಾರ್ಯಕ್ರಮದ ಉದ್ಘಾಟನೆಯನ್ನು ರೋಟರಿ ಸಮುದಾಯ ದಳ ಮುಂಡಾಜೆ ಇದರ ಅಧ್ಯಕ್ಷರಾದ ಪಿ.ಸಿ ಸೆಬಾಸ್ಟಿಯನ್ ಅವರು ನೆರವೇರಿಸಿ...
ಬೆಳ್ತಂಗಡಿ; ಬಡವರ ಮತ್ತು ಮಧ್ಯಮ ವರ್ಗದ ಜನರಿಗೆ ಅಗತ್ಯವಾದ ಯೋಜನೆಗಳನ್ನು ರೂಪಿಸಿ ಅದನ್ನು ಪ್ರತಿಯೊಬ್ಬರಿಗೆ ತಲುಪಿಸುವ ಧ್ಯೇಯವನ್ನು ರಾಜ್ಯ ಸರಕಾರ ಹೊಂದಿದ್ದು ಯಾವುದೇ ಭೇದ ಭಾವವಿಲ್ಲದೆ ರಾಜ್ಯದ ಜನತೆಗೆ ಇದು ತಲುಪುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.ಅವರು ಬೆಳ್ತಂಗಡಿಯಲ್ಲಿ ಇಂದಿರಾ ಕ್ಯಾಂಟೀನ್ ಉದ್ಘಾಟಿಸಿ ಹಾಗೂ ಫಲಾನುಭವಿಗಳಿಗೆ 94 ಸಿ ಮತ್ತು...
ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣಗಳ ಬಗ್ಗೆ ತನಿಖೆ ನಡೆಸುತ್ತಿರುವ ಎಸ್.ಐ.ಟಿ ಯ ಬೆಳ್ತಂಗಡಿ ಕಚೇರಿಗೆ ಸೌಜನ್ಯ ತಾಯಿ ಕುಸುಮವತಿ, ವಿಠಲ್ ಗೌಡ, ಪುರಂದರ ಗೌಡ, ಸೌಜನ್ಯ ಪರ ಹೋರಾಟಗಾರರಾದ ಗಿರೀಶ್ ಮಟ್ಟಣ್ಣವರ್, ಜಯಂತ್.ಟಿ , ವಿಷ್ಣು ಮೂರ್ತಿ ಭಟ್, ಲಕ್ಷಣ್ ಗೌಡ, ಹಾಗೂ ಇತರರು ಶನಿವಾರ ಮಧ್ಯಾಹ್ನದ ವೇಳೆಗೆ ತೆರಳಿದ್ದಾರೆ. ಸೌಜನ್ಯ ಪ್ರಕರಣ ಸೇರಿದಂತೆ ವಿವಿಧ...
ಬೆಳ್ತಂಗಡಿ : ಉಜಿರೆಯ ಖಾಸಗಿ ಕ್ಲಿನಿಕ್ ಗೆ ತೆರಳಿ ಎಸ್.ಐ.ಟಿ ಅಧಿಕಾರಿಗಳಿ ಇವರಿಂದ ಮಾಹಿತಿ ಸಂಗ್ರಹಿಸುವ ಕಾರ್ಯ ನಡೆಸುತ್ತಿದ್ದಾರೆ.
ಬೆಳ್ತಂಗಡಿ ತಾಲೂಕಿನ ಉಜಿರೆ ಬಸ್ ನಿಲ್ದಾಣದ ಪಕ್ಕದಲ್ಲಿರುವ ಎಸ್.ಕೆ.ಮೆಮೋರಿಯಲ್ ಹಾಲ್ ಕಟ್ಟಡದ ಮೊದಲ ಮಹಡಿಯಲ್ಲಿರುವ ಖಾಸಗಿ ದಂತ ಚಿಕಿತ್ಸಾಲಯಕ್ಕೆ ಎಸ್.ಐ.ಟಿ ತಂಡ ಜೊತೆ ಎಫ್ಎಸ್ಎಲ್ ವಿಭಾಗದ ಸೋಕೋ ತಂಡ ಶನಿವಾರ ಮಧ್ಯಾಹ್ ದ ವೇಳೆ ತೆರಳಿದ್ದು...
ಬೆಳ್ತಂಗಡಿ: ಟಿಕೆಟ್ ಹಣದ ವಿಚಾರದಲ್ಲಿ ಮಹಿಳಾ ಕಂಡಕ್ಟರ್ ಹಾಗೂ ಪ್ರಯಾಣಿಕನ ನಡುವೆ ಜಟಾಪಟಿಯಾದ ಘಟನೆ ಶುಕ್ರವಾರ ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ನಡೆದಿದೆ. ಟಿಕೆಟ್ ದುಡ್ಡುಕೊಟ್ಟಿದ್ದೇನೆ ಎಂದು ಪ್ರಯಾಣಿಕ, ಕೊಟ್ಟಿಲ್ಲ ಎಂದು ಮಹಿಳಾ ಕಂಡಕ್ಟರ್ ವಾದ ತಾರಕಕ್ಕೇರಿ, ಪ್ರಯಾಣಿಕನ ಮೇಲೆ ಬಸ್ ನಲ್ಲೇ ಕಂಡಕ್ಟರ್ ಹಲ್ಲೆಗೆ ಮುಂದಾಗಿರುವುದಾಗಿ ಹೇಳಲಾಗಿದೆ.ಮೂಡಿಗೆರೆಯಿಂದ ಮಂಗಳೂರಿಗೆ ತೆರಳುತ್ತಿದ್ದ ಬಸ್ ಗೆ ಉಜಿರೆಯಲ್ಲಿ...