ನಾರಾವಿಗೆ ಕೆಲಸಕ್ಕೆ ಬಂದು ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ
ಬೆಳ್ತಂಗಡಿ : ಹೆಬ್ರಿಯಿಂದ ನಾರಾವಿಯ ಮನೆಯೊಂದಕ್ಕೆ ಕೆಲಸಕ್ಕೆಂದು ಬಂದು ನಾಪತ್ತೆಯಾಗಿದ್ದ ವ್ಯಕ್ತಿಯೃತದೇಹ ಈದು ಗ್ರಾಮದ ತೋಟವೊಂದರಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.ಮೃತ ವ್ಯಕ್ತಿ ಹೆಬ್ರಿ ಮಿಯಾರು ನಾಲ್ಕೂರು ನಿವಾಸಿ ಪ್ರಭಾಕರ ಶೆಟ್ಟಿ (45) ಎಂಬವರಾಗಿದ್ದಾರೆ. ಇವರು ಜು 7ರಂದು ಬೆಳ್ತಂಗಡಿ ತಾಲೂಕಿನ ನಾರಾವಿ ಅರಸಿಕಟ್ಟೆ ನಿವಾಸಿ ರವಿರಾಜ್ ಜೈನ್ ಎಂಬವರ ಮನೆಗೆ ರೊಟ್ಟಿ ಮಾಡಲು ಬಂದಿದ್ದರು. ಮದ್ಯಾಹ್ನದ ವರೆಗೆ ಕೆಲಸ ಮಾಡಿ ಬಳಿಕ ಅವರು ಅಲ್ಲಿಂದ ಹಿಂತಿರುಗಿದ್ದರು ಆದರೆ ಅಂದು ಪ್ರಭಾಕರ ಶೆಟ್ಟಿ ಮರಳಿ ಮನೆ ಸೇರಿರಲಿಲ್ಲ. ಆತನಿಗಾಗಿ ಹುಡುಕಾಟ ನಡೆಸಿದರೂ ಯಾವುದೇ ಮಾಹಿತಿಗಳು ಸಿಗದ...
ಬೆಳ್ತಂಗಡಿ : ವೈಯಕ್ತಿಕ ದ್ವೇಷ ಹಿನ್ನೆಲೆ ವ್ಯಕ್ತಿಯ ಮೇಲೆ ಹಲ್ಲೆ – ದಲಿತ ದೌರ್ಜನ್ಯ ಪ್ರಕರಣ ದಾಖಲು
ಬೆಳ್ತಂಗಡಿ : ವೈಯಕ್ತಿಕ ದ್ವೇಷ ಹಿನ್ನೆಲೆಯಲ್ಲಿ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದ ಸಂಬಂಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಲಿತ ದೌರ್ಜನ್ಯ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ತಾಲೂಕಿನ ಪಟ್ರಮೆಯಲ್ಲಿ ಜು.10 ರಂದು ಸಂಜೆ ಸುಮಾರು 7:30 ಗಂಟೆಗೆ ಪಟ್ರಮೆ ನಿವಾಸಿ ಬಾಲಕೃಷ್ಣ ಎಂಬವರು ಪರಿಚಯದ ದಿನೇಶ್ ಅವರ ಆಟೋ ರಿಕ್ಷಾದಲ್ಲಿ ಕೊಕ್ಕಡ ಕಡೆಗೆ ತೆರಳುತ್ತಿದ್ದ ಸಮಯದಲ್ಲಿ ದಿನೇಶ್ ಅವರು ರಾಘವ ಎಂಬವರ ಅಂಗಡಿಯ ಬಳಿ ಆಟೋ ನಿಲ್ಲಿಸಿ ಅಂಗಡಿಗೆ ತೆರಳಿದ್ದರು. ಆ ಸಂದರ್ಭದಲ್ಲಿ ರಾಘವ ಮತ್ತು ದಿನೇಶ್ ಅವರ ನಡುವೆ ಕೋಳಿ ಮಾಂಸದ...
ಮಂಗಳೂರು ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ; ತಲೆ ಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಹಿಂದೂ ಸಂಘಟನೆ ಕಾರ್ಯಕರ್ತ ಹಾಗೂ ಕೋಳಿ ಅಂಗಡಿ ವ್ಯವಹಾರ ನಡೆಸುತ್ತಿದ್ದ ಪ್ರವೀಣ್ ನೆಟ್ಟಾರು(32) ಎಂಬವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ ಪ್ರಕರಣ ಸಂಬಂಧ ಈವರೆಗೆ ರಾಷ್ಟ್ರೀಯ ತನಿಖಾ ದಳ(NIA) ಒಟ್ಟು 28 ಆರೋಪಿಗಳ ಪೈಕಿ 21 ಮಂದಿಯನ್ನು ಈವರೆಗೆ ಬಂಧಿಸಿದ್ದರು. ಉಳಿದ ಆರೋಪಿಗಳ ಬಂಧನಕ್ಕೆ ಬಹುಮಾನ ಘೋಷಣೆ ಮಾಡಿ ಹುಡುಕಾಟ ನಡೆಸುತ್ತಿದ್ದರು. ಇದೀಗ 4 ವರ್ಷಗಳ ಬಳಿಕ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಬೆಂಗಳೂರು ಎನ್.ಐ.ಎ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಬೆಂಗಳೂರು ಎನ್.ಐ.ಎ ಅಧಿಕಾರಿಗಳು...
ಎಸ್ಎಮ್ಎ:ಉತ್ತಮ ಸಮುದಾಯ ಅಭಿಯಾನ ಪ್ರಯುಕ್ತ ಬೆಳ್ತಂಗಡಿಯಲ್ಲಿ ಕಮ್ಯೂನಿಟಿ ಡಿಬೇಟ್ ಕಾರ್ಯಕ್ರಮ
ಬೆಳ್ತಂಗಡಿ; ಸುನ್ನೀ ಮೆನೇಜ್ಮೆಂಟ್ ಅಸೋಸಿಯೇಷನ್ ಎಸ್.ಎಮ್.ಎ ಇದರ ಮುರ ಮತ್ತು ಉಜಿರೆ ರೀಜಿನಲ್ ಸಮಿತಿಗಳ ಜಂಟಿ ಸಮಿತಿ ಉಜಿರೆ ಝೋನಲ್ ವತಿಯಿಂದ ಬೆಳ್ತಂಗಡಿ ಮಹಿಳಾ ಮಂಡಲಗಳ ಒಕ್ಕೂಟದ ಸಭಾಂಗಣದಲ್ಲಿ "ಖೈರು ಉಮ್ಮ" ಉತ್ತಮ ಸಮುದಾಯ ಅಭಿಯಾನ ಪ್ರಯುಕ್ತ ಕಮ್ಯೂನಿಟಿ ಡಿಬೇಟ್ ಕಾರ್ಯಕ್ರಮ ಜು.10 ರಂದು ಜರುಗಿತು.ಅಧ್ಯಕ್ಷತೆಯನ್ನು ಝೋನಲ್ ಅಧ್ಯಕ್ಷ ವಝೀರ್ ಅಹ್ಮದ್ ಬಂಗಾಡಿ ವಹಿಸಿದ್ದರು.ಉದ್ಘಾಟನೆಯನ್ನು ಎಸ್.ಎಮ್.ಎ ರಾಜ್ಯ ಕಾರ್ಯದರ್ಶಿ ಸಾದಿಕ್ ಮಾಸ್ಟರ್ ಮಲೆಬೆಟ್ಟು ನೆರವೇರಿಸಿದರು.ಡಿಬೇಟ್ ನಲ್ಲಿ 'ಮಾದಕ ವ್ಯಸನಗಳು,ಕಾನೂನು ಮತ್ತು ಸೈಬರ್ ಕ್ರೈಂ ಬಗ್ಗೆ ಬೆಳ್ತಂಗಡಿ ಠಾಣಾ ಸಬ್ ಇನ್ಸ್ಪೆಕ್ಟರ್ ಸಿಖಂದರ್ ಪಾಷಾ,...
ಸವಣಾಲು ಹಿತ್ತಿಲ ಪೇಲ ನಿವಾಸಿಗಳಿಗೆ ನದಿ ದಾಟದಂತೆ ದಿಗ್ಬಂಧನ, ಸೇತವೆ ಕೇಳಿದರೆ ಬ್ಯಾನರ್ ಹಾಕಿದ ಅಧಿಕಾರಿಗಳು
ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಸವಣಾಲು ಗ್ರಾಮದ ಹಿತ್ತಿಲಪೇಲ ಎಂಬಲ್ಲಿ ಕಳೆದ ವರ್ಷ ಜೂನ್ 15 ರಂದು ದ್ವಿಚಕ್ರ ವಾಹನದ ಮೂಲಕ ನದಿ ನೀರಿನಲ್ಲಿ ಕೊಚ್ಚಿಕೊಂಡು ಹೋದ ಪ್ರದೇಶದಲ್ಲಿ ನದಿ ತುಂಬಿ ಹರಿಯುತ್ತದೆ ನದಿ ದಾಟುವುದು ನಿಷೇಧಿಸಲಾಗಿದೆ ಎಂಬ ಬ್ಯಾನರ್ ಹಾಕುವ ಮೂಲಕ ಮೂಲನಿವಾಸಿಗಳಿಗೆ ದಿಗ್ಬಂಧನ ವಿಧಿಸುವ ಕಾರ್ಯವನ್ನು ಇಲಾಖೆಗಳು ಮಾಡಿದೆ. ಸವಣಾಲು ಗ್ರಾಮದ ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಹಿತ್ತಿಲಪೇಲ ಎಂಬಲ್ಲಿ 9 ಆದಿವಾಸಿ ಮಲೆಕುಡಿಯ ಕುಟುಂಬಗಳು ಎರಡು ಶತಮಾನಗಳಿಂದ ವಾಸಿಸುತ್ತಿವೆ. ಕೃಷಿ ಚಟುವಟಿಕೆಗಳನ್ನು ನಡೆಸಿಕೊಂಡು ಜೀವಿಸುತ್ತಿರುವ ಕುಟುಂಬಗಳು ವಿದ್ಯುತ್ , ರಸ್ತೆ...
ಮುಂಡಾಜೆ ಗ್ರಾ.ಪಂ ಸಿಬ್ಬಂದಿಜನಾರ್ದನ ನಾಯ್ಕ ನಿಧನ
ಮುಂಡಾಜೆ: ಗ್ರಾಮ ಪಂಚಾಯತ್ ಸಿಬ್ಬಂದಿ, ಶಾರದಾ ನಗರ ನಿವಾಸಿಜನಾರ್ದನ ನಾಯ್ಕ (30ವರ್ಷ ) ಅಲ್ಪಕಾಲದ ಅನಾರೋಗ್ಯದಿಂದ ಸ್ವಗೃಹದಲ್ಲಿ ಜು.10 ರಂದು ಶುಕ್ರವಾರ ರಾತ್ರಿ ನಿಧನರಾದರು. ಮೃತರು ತಾಯಿ ಹಾಗೂ ಇಬ್ಬರು ಸಹೋದರಿಯರು, ಬಂಧು ಮಿತ್ರರನ್ನು ಅಗಲಿದ್ದಾರೆ.
ಬೆಳ್ತಂಗಡಿ ತಾಲೂಕಿನ 11 ಸರ್ಕಾರಿ ಶಾಲೆಗಳಿಗೆ ಕೆಪಿಎಸ್ ಸ್ಥಾನಮಾನ : ರಾಜ್ಯ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ.
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಸರ್ಕಾರಿ ಶಾಲೆಗಳ ಶೈಕ್ಷಣಿಕ ಅಭಿವೃದ್ಧಿಗೆ ಮಹತ್ವದ ಮೈಲಿಗಲ್ಲು ನಿರ್ಮಾಣವಾಗಿದ್ದು ತಾಲೂಕಿನ 10 ಹಿರಿಯ ಪ್ರಾಥಮಿಕ ಶಾಲೆಗಳು ಹಾಗೂ 1 ಸರ್ಕಾರಿ ಪ್ರೌಢಶಾಲೆಯನ್ನು ಕರ್ನಾಟಕ ಪಬ್ಲಿಕ್ ಸ್ಕೂಲ್ (ಕೆಪಿಎಸ್) ಆಗಿ ಮೇಲ್ದರ್ಜೆಗೇರಿಸಲು ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ, ಆಧುನಿಕ ಮೂಲಸೌಕರ್ಯ ಮತ್ತು ಉತ್ತಮ ಶೈಕ್ಷಣಿಕ ಅವಕಾಶಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರದ ಈ ಕ್ರಮ ಮಹತ್ವದ್ದಾಗಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಹೇಳಿದ್ದಾರೆ. ಕೆಪಿಎಸ್ ಆಗಿ ಮೇಲ್ದರ್ಜೆಗೇರಿಸಲಾದ ಶಾಲೆಗಳು: ನಿಟ್ಟಡೆ ಕ್ಲಸ್ಟರ್...
ಬಸ್ಸಿನಲ್ಲಿ ಗುಪ್ತಾಂಗ ಪ್ರದರ್ಶಿಸಿ ವಿದ್ಯಾರ್ಥಿನಿಯರೊಂದಿಗೆ ಅಸಭ್ಯ ವರ್ತನೆ ನಿರ್ವಾಹಕ ಕಲ್ಲೇರಿ ನಿವಾಸಿ ಇರ್ಫಾನ್ ಬಂಧನ
ಮಂಗಳೂರು: ಬಸ್ಸಿನಲ್ಲಿ ತನ್ನ ಗುಪ್ತಾಂಗ ತೋರಿಸಿ ವಿದ್ಯಾರ್ಥಿನಿಗಳೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದ ಬಸ್ ಕಂಡಕ್ಟರ್ ನನ್ನು ಪೊಲೀಸರು ಬಂಧಿಸಿದ್ದಾರೆ. ಉಪ್ಪಿನಂಗಡಿ ಕಲ್ಲೇರಿ ನಿವಾಸಿ ಇರ್ಫಾನ್ (32 ವರ್ಷ) ಬಂಧಿತ ಆರೋಪಿ. ಪ್ರಸ್ತುತ ಈತ ಉಪ್ಪಿನಂಗಡಿ ಕರ್ವೇಲು ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದು, ವಿಟ್ಲ-ಮಂಗಳೂರು ಖಾಸಗಿ ಬಸ್ ನಲ್ಲಿ ಕಂಡಕ್ಟರ್ ಆಗಿ ಕೆಲಸ ಮಾಡಿಕೊಂಡಿರುತ್ತಾನೆ.ಮಂಗಳೂರು ವಿಟ್ಲ ಬಸ್ ಕಂಡಕ್ಟರ್ ಆಗಿದ್ದು, ದಿನಾಂಕ 9/7/2026 5:00 ಕಾಲೇಜು ವಿದ್ಯಾರ್ಥಿನಿಯ ರನ್ನು ಗುರಿಯಾಗಿರಿಸಿಕೊಂಡು ಬಸ್ಸಿನಲ್ಲಿ ತನ್ನ ಗುಪ್ತಾಂಗ ಪ್ರದರ್ಶನ ಮಾಡಿ ಅಸಭ್ಯವಾದ ಸನ್ನೆಯನ್ನು ಮಾಡಿ ಹಿಂದಿನ ಸೀಟಿಗೆ ಬಾ ಎಂದು...
ಮಂಗಳೂರು; ಕಟ್ಟಡ ನಿರ್ಮಾಣ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ ಎಂಟು ಮಂದಿ ಬಾಂಗ್ಲಾದೇಶಿ ಅಕ್ರಮ ವಲಸಿಗರು ಪೊಲೀಸ್ ವಶಕ್ಕೆ
ಮಂಗಳೂರು; ನಗರದಲ್ಲಿ ಕಟ್ಟಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ ಎಂಟು ಮಂದಿ ಬಾಂಗ್ಲಾದೇಶ ಪ್ರಜೆಗಳನ್ನು ಪೊಲೀಸರು ಪತ್ತೆಹಚ್ಚಿ ವಶಕ್ಕೆ ಪಡೆದಿದೆ.ನಗರ ಕಮೀಷನರೇಟ್ ನ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ನಿರ್ಮಾಣ ಹಂತದ ಕಟ್ಟಡದಲ್ಲಿ ಕೆಲವು ಬಾಂಗ್ಲಾದೇಶದ ಪ್ರಜೆಗಳು ಇರುವ ಬಗ್ಗೆ ಖಚಿತ ಮಾಹಿತಿಯಂತೆ ಸುರತ್ಕಲ್ ಪೊಲೀಸ್ ಠಾಣಾ ಪೊಲೀಸರು ದಿನಾಂಕ: 09.07.2026 ರಂದು ದಾಳಿ ನಡೆಸಿ ಪರಿಶೀಲಿಸಿದ ಸಮಯ ಒಟ್ಟು 54 ಮಂದಿ ಕಟ್ಟಡ ಕಾರ್ಮಿಕರ ದಾಖಲಾತಿಗಳನ್ನು ಪರಿಶೀಲಿಸಿದ ಸಮಯ ಅಕ್ರಮವಾಗಿ ವಾಸ್ತವ್ಯವಿದ್ದ ಬಾಂಗ್ಲಾದೇಶದ 8 ಮಂದಿ ಪ್ರಜೆಗಳನ್ನು ಪತ್ತೆ ಹಚ್ಚಲಾಗಿರುತ್ತದೆ.ಮುಕ್ತಾರ್ ಆಲಿರಾಕಿಬುರ್ ಹುಸೈನ್ಅಜರುಲ್ ಇಸ್ಲಾಂ(36),ಝಾಹಿದ್...
ಅತಿ ಹಿಂದುಳಿದ ಮಠಾಧೀಶರ ಮಹಾಸಭೆಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬೆಂಬಲ
ಬೆಳ್ತಂಗಡಿ: ಇತ್ತೀಚಿನ ದಿನಗಳಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ವಿರುದ್ಧ ಕೇಳಿಬರುತ್ತಿರುವ ಆರೋಪಗಳ ಹಿನ್ನೆಲೆಯಲ್ಲಿ ಅತಿ ಹಿಂದುಳಿದ ಮಠಾಧೀಶರ ಮಹಾಸಭೆ (ರಿ.) ಕೋರ್ ಕಮಿಟಿಯ ಸದಸ್ಯರಾದ ಸ್ವಾಮೀಜಿಗಳು ಧರ್ಮಸ್ಥಳಕ್ಕೆ ಜು.10 ರಂದು ಭೇಟಿ ನೀಡಿ, ನಾವು ಧರ್ಮಸ್ಥಳದ ಜೊತೆ ಇದ್ದೇವೆ ಎಂದು ಬೆಂಬಲ ಸೂಚಿಸಿ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಗೆ ಬೆಂಬಲ ಪತ್ರ ನೀಡಿದೆ.ಅವರು ನೀಡಿರುವ ಪತ್ರದಲ್ಲಿ ರಾಜ್ಯದ ಎಲ್ಲಾ ಹಿಂದುಳಿದ ಮಠಾಧೀಶರು ಸೇರಿದಂತೆ ಅನೇಕ ನಾಗರಿಕರು ಧರ್ಮಸ್ಥಳದ ಪರವಾಗಿ ನಿಂತಿದ್ದೇವೆ ಎಂದು ಉಲ್ಲೇಖಿಸಲಾಗಿದೆ. ಧರ್ಮಸ್ಥಳದ...















