ಧರ್ಮಸ್ಥಳ ಪ್ರಕರಣ; ತಾವು ಗುರುತಿಸಿದ ಸ್ಥಳಗಳನ್ನು ಅಗೆದು ಪರಿಶೀಲಿಸುವಂತೆ ಹೈಕೋರ್ಟ್ ಗೆ ಪುರಂದರ, ತುಕಾರಾಮ ಅರ್ಜಿ ಎಸ್.ಐ.ಟಿ.ಗೆ ನೋಟೀಸ್
ಬೆಳ್ತಂಗಡಿ; ಧರ್ಮಸ್ಥಳದ ಗ್ರಾಮದಲ್ಲಿ ನಾವು ಗುರುತಿಸಿರುವ ಸ್ಥಳಗಳಲ್ಲಿ ಕೂಡಲೇ ಅಗೆಯಲು ವಿಶೇಷ ತನಿಖಾ ತಂಡಕ್ಕೆ (ಎಸ್ಐಟಿ) ನಿರ್ದೇಶನ ನೀಡಬೇಕು ಎಂದು ಕೋರಿ ಧರ್ಮಸ್ಥಳ ನಿವಾಸಿಗಳಾದ ಪುರಂದರ ಗೌಡ ಹಾಗೂ ತುಕಾರಾಮ ಗೌಡ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ಸೋಮವಾರ ಎಸ್.ಐ.ಟಿ ಗೆ ನೋಟೀಸ್ ನೀಡಿದೆ ಈ ಸಂಬಂಧ ಧರ್ಮಸ್ಥಳ ಗ್ರಾಮದ ಪುರಂದರ ಗೌಡ ಹಾಗೂ ತುಕಾರಾಂ ಗೌಡ ಸಲ್ಲಿಸಿರುವ ರಿಟ್ ಅರ್ಜಿ ಕುರಿತು ಸೋಮವಾರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ, ಧರ್ಮಸ್ಥಳ ಸಾಮೂಹಿಕ ಅಂತ್ಯ...
ಧರ್ಮಸ್ಥಳ; ಹದಗೆಟ್ಟ ನೇರ್ತನೆ ರಸ್ತೆ ಗ್ರಾಮಸ್ಥರಿಂದ ಶ್ರಮದಾನದ ಮೂಲಕ ದುರಸ್ತಿ
ಬೆಳ್ತಂಗಡಿ; ಧರ್ಮಸ್ಥಳ ಗ್ರಾಮದ ನೇರ್ತನೆ ರಸ್ತೆ ಸಂಪೂರ್ಣವಾಗಿ ಹದಗೆಟ್ಟು ಹೋಗಿದ್ದು ವಾಹನ ಸಂಚಾರ ಕಷ್ಟಕರವಾಗಿದ್ದ ಹಿನ್ನಲೆಯಲ್ಲಿ ಸೆ14 ಭಾನುವಾರ ಸ್ಥಳೀಯ ನಿವಾಸಿಗಳು ಶ್ರಮದಾನದ ಮೂಲಕ ಈ ರಸ್ತೆ ದುರಸ್ತಿಯ ಕಾರ್ಯ ನಡೆಸಿದರು. ಮಳೆಗಾಲದಲ್ಲಿರಸ್ತೆ ಸಂಪೂರ್ಣವಾಗಿ ಹದಗೆಟ್ಟು ಹೋಗಿದ್ದು ಅಲ್ಲಲ್ಲಿ ದೊಡ್ಡ ಹೊಂಡಗಳು ನಿರ್ಮಾಣವಾಗಿತ್ತು ವಾಹನಗಳ ಸಂಚಾರವೇ ಅಸಾಧ್ಯವಾಗುವ ಸ್ಥಿತಿ ನಿರ್ಮಾಣವಾಗಿತ್ತು ಈ ಬಗ್ಗೆ ಗ್ರಾಮಸ್ಥರು ಗ್ರಾಮಪಂಚಾಯತಿನ ಗಮನ ಸೆಳೆದಿದ್ದರೂ ಯಾವದೇ ಕ್ರಮ ಕೈಗೊಳ್ಳದ ಹಿನ್ನಲೆಯಲ್ಲಿ ಸ್ಥಳೀಯರು ಶ್ರಮದಾನ ನಡೆಸಿ ರಸ್ತೆಯನ್ನು ಸಂಚಾರಕ್ಕೆ ಯೋಗ್ಯವಾಗಿಸುವ ಪ್ರಯತ್ನ ನಡೆಸಿದ್ದಾರೆ
ಉಜಿರೆ ರಬ್ಬರ್ ಸೊಸೈಟಿಆಡಳಿತ ಮಂಡಳಿಯ 15 ನಿರ್ದೇಶಕರುಗಳ ಸ್ಥಾನಕ್ಕೆ ಆವಿರೋಧ ಆಯ್ಕೆ
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಹಕಾರ ಸಂಘುಳ ಉಜಿರೆ ಇದರ ಮುಂದಿನ ಐದು ವರ್ಷಗಳ ಆಡಳಿತ ಮಂಡಳಿಯ 15 ನಿರ್ದೇಶಕರುಗಳ ಸ್ಥಾನಕ್ಕೆ ಸೆ.21ರಂದು ನಿಗದಿಯಾಗಿದ್ದ ಚುನಾವಣೆಗೆ ಎಲ್ಲಾ ಸ್ಥಾನಗಳಿಗೆ ನಿರ್ದೇಶಕರುಗಳು ಆವಿರೋಧವಾಗಿ ಆಯ್ಕೆಯಾಗಿದ್ದಾರೆ.ಸಹಕಾರಿ ಸಂಘ- ಸಂಸ್ಥೆಗಳು ಸ್ಥಾನದಿಂದ ಹಾಲಿ ಅಧ್ಯಕ್ಷ ಶ್ರೀಧರ ಜಿ. ಭಿಡೆ, ಸಾಮಾನ್ಯ ಸ್ಥಾನ ಬೆಳ್ತಂಗಡಿ ಫಿರ್ಕಾದಿಂದ ಹಾಲಿ ಉಪಾಧ್ಯಕ್ಷ ಅನಂತ ಭಟ್ ಮಚ್ಚಿಮಲೆ, ಹಿಂದುಳಿದ ವರ್ಗ ಎ ಮೀಸಲು ಸ್ಥಾನ ಬೆಳ್ತಂಗಡಿ ಫಿರ್ಕಾದಿಂದ ಸೋಮನಾಥ ಬಂಗೇರ ವರ್ಪಾಳೆ, ಹಿಂದುಳಿದ ವರ್ಗ ಬಿ.ಮೀಸಲು ಸ್ಥಾನ...
ಬಂಗ್ಲೆ ಗುಡ್ಡ ವಾಮಾಚಾರದತ್ತ ಎಸ್.ಐ.ಟಿ ತನಿಖೆ
ಬೆಳ್ತಂಗಡಿ; ಧರ್ಮಸ್ಥಳ ಪ್ರಕರಣಕ್ಕೆ ಸಬಂಧಿಸಿದಂತೆ ನಡೆಯುತ್ತಿರುವ ಎಸ್.ಐ.ಟಿ ತನಿಖೆಯಲ್ಲಿ ಹೊಸ ಬೆಳವಣಿಗೆಗಗಳು ನಡೆದಿದ್ದು ತನಿಖೆ ಹೊಸ ದಿಕ್ಕಿನತ್ತ ಹೊರಳುತ್ತಿದೆ.ಬಂಗ್ಲೆಗುಡ್ಡದಲ್ಲಿ ಹಲವಾರು ಮೃತದೇಹಗಳು ಪತ್ತೆಯಾಗಿರುವುದಾಗಿಯೂ ವಾಮಾಚಾರ ಮಾಡಲಾಗಿರುವಂತೆ ಕಂಡುಬರುತ್ತಿರುವುದಾಗಿ ವಿಠಲಗೌಡ ವೀಡಿಯೋ ಮಾಡಿ ಆರೋಪ ಮಾಡಿದ್ದ ತಾನು ಇಲ್ಲಿನ ಮೃತದೇಹಗಳನ್ನು ಎಸ್.ಐ.ಟಿ ಗೆ ತೋರಿಸಿರುವುದಾಗಿಯೂ ಹೇಳಿಕೆ ನೀಡಿದ್ದ. ಇದೀಗ ಇಲ್ಲಿ ನಡೆದಿರಬಹುದಾದ ವಾಮಾಚಾರಗಳ ವಿಚಾರದತ್ತ ಎಸ್.ಐ.ಟಿ ತಂಡ ಗಮನ ಹರಿಸುತ್ತಿರುವಿದಾಗಿ ತಿಳಿದು ಬಂದಿದೆ.ಸ್ಥಳೀಯವಾಗಿ ವಾಮಚಾರ ಮಾಡುವವರ ಬಗ್ಗೆ ಮಾಹಿತಿ ಸಂಗ್ರಹಿಸುವ ಪ್ರಯತ್ನವನ್ನು ತಂಡ ನಡೆಸಿರುವವುದಾಗಿ ತಿಳಿದು ಬಂದಿದೆ.ವಾಮಾಚಾರ ನಡೆದಿರುವ ಬಗ್ಗೆ ದೂರುಗಳು ಬಂದಿರುವ ಹಿನ್ನಲೆಯಲ್ಲಿ...
ಧರ್ಮಸ್ಥಳದಲ್ಲಿ 27 ನೇ ವರ್ಷದ ಭಜನಾ ಕಮ್ಮಟ: ಉದ್ಘಾಟನೆ
ಭಜನೆಯಿಂದ ಉತ್ತಮ ಸಂಸ್ಕಾರಯುತ ಆರೋಗ್ಯಪೂರ್ಣ ಸಮಾಜ ನಿರ್ಮಾಣ.ಬೆಳ್ತಂಗಡಿ: ಪಂಚೇಂದ್ರಿಯಗಳ ನಿಯಂತ್ರಣದೊಂದಿಗೆ ಪರಿಶುದ್ಧ ದೇಹ ಮತ್ತು ಮನಸಿನಿಂದ ರಾಗ, ತಾಳ, ಲಯಬದ್ಧವಾಗಿ ಭಜನೆ ಮಾಡುವುದರಿಂದ ಉತ್ತಮ ಸಂಸ್ಕಾರಯುತ ಆರೋಗ್ಯಪೂರ್ಣ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ ಎಂದು ಮೂಡಬಿದ್ರೆಯ ಆಳ್ವಾಸ್ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಹೇಳಿದರು.ಅವರು ಭಾನುವಾರ ಧರ್ಮಸ್ಥಳದಲ್ಲಿ ಮಹೋತ್ಸವ ಸಭಾಭವನದಲ್ಲಿ 27 ನೇ ವರ್ಷದ ಭಜನಾ ಕಮ್ಮಟವನ್ನು ಉದ್ಘಾಟಿಸಿ ಮಾತನಾಡಿದರು.ಭಜನೆಯಿಂದ ಸುಲಭದಲ್ಲಿ ದೇವರ ಅನುಗ್ರಹಕ್ಕೆ ಪಾತ್ರರಾಗಬಹುದು, ಭಜನೆಯಿಂದ ಜನಜಾಗೃತಿ ಉಂಟಾಗಿ ಎಲ್ಲರೂ ಸಮಾನರಾಗಿ, ಗುರು-ಹಿರಿಯರಿಂದ ಮಾರ್ಗದರ್ಶನ, ಪ್ರೇರಣೆ ಪಡೆದು ದೃಢಭಕ್ತಿ ಮತ್ತು...
ಬೆಳ್ತಂಗಡಿ : ಎಸ್.ಐ.ಟಿ ಮುಖ್ಯಸ್ಥ ಪ್ರಣವ್ ಮೊಹಂತಿ ಬೆಳ್ತಂಗಡಿ ಕಚೇರಿಗೆ; ನಾಳೆಯಿಂದ ತನಿಖೆಯಲ್ಲಿ ಆಗಲಿದೆ ಮಹತ್ವದ ಬೆಳವಣಿಗೆ
ಬೆಳ್ತಂಗಡಿ : ಎಸ್.ಐ.ಟಿ ಮುಖ್ಯಸ್ಥ ಪ್ರವವ್ ಮೊಹಂತಿ ಸೆ.14 ರಂದು ಬೆಳಗ್ಗೆ 11:40 ಕ್ಕೆ ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಆಗಮಿಸಿದ್ದಾರೆ. ಜೊತೆಯಲ್ಲಿ ಐಪಿಎಸ್ ಜಿತೇಂದ್ರ ಕುಮಾರ್ ದಯಾಮ, ಎಸ್.ಪಿ ಸನ್ ಕೂಡ ಆಗಮಿಸಿದ್ದಾರೆ. ಬೆಳ್ತಂಗಡಿ ಎಸ್.ಐ.ಟಿ ಕಚೇರಿಯಲ್ಲಿ ಪ್ರಣವ್ ಮೊಹಂತಿ ಅವರು ಅಧಿಕಾರಿಗಳೊಂದಿಗೆ ಮಹತ್ವದ ಸಭೆಗಳನ್ನು ನಡೆಸಲಿರುವುದಾಗಿ ತಿಳಿದು ಬಂದಿದೆ.ಸಾಕ್ಷಿ ದೂರುದಾರ ತಂದಿದ್ದ ತಲೆಬುರುಡೆಯ ವಿಚಾರದಲ್ಲಿ ತನಿಖೆ ಬಹುತೇಕ ಪೂರ್ಣಗೊಳ್ಳುವ ಹಂತದಲ್ಲಿದೆ. ಈಗಾಗಲೆ ಕಳೆದ ಎರಡು ವಾರಗಳಿಂದ ಈ ಬಗ್ಗೆಯೇ ತನಿಖೆ ನಡೆಯುತ್ತಿತ್ತು. ತನಿಖೆ ಬಳಿಕವಿಠಲ ಗೌಡ ಅವರೊಂದಿಗೆ ಸ್ಥಳತನಿಖೆಯನ್ನು ನಡೆಸಲಾಗಿದ್ದು ಪ್ರದೀಪ್ ನ...
ಮಾಲಾಡಿ; ಶಾಸಕ ಹರೀಶ್ ಪೂಂಜ ಅವರಿಂದ ಪೆರ್ಡೆ ಕ್ರಾಸ್ ನಿಂದ ಊರ್ಲ 1 ಕೋಟಿ ವೆಚ್ಚದ ಕಾಂಕ್ರೀಟ್ ರಸ್ತೆ ಉದ್ಘಾಟನೆ
ಬೆಳ್ತಂಗಡಿ; ಮಾಲಾಡಿ ಗ್ರಾಮ ಊರ್ಲ ಪರಿಸರದ ನಾಗರಿಕರ ಹಲವು ದಶಕಗಳ ಬೇಡಿಕೆಯಾದ ಪೂಂಜಾಲಕಟ್ಟೆ ನೈನಾಡ್ ಸಂಪರ್ಕ ರಸ್ತೆಯಲ್ಲಿ ಪೇರ್ಡೆಯಿಂದ ಊರ್ಲದವರೆಗಿನ ರಸ್ತೆ ಕಾಂಕ್ರೀಟಿಕರಣ ಕಾಮಗಾರಿಯಯ ಪೂರ್ಣಗೊಂಡಿದ್ದು ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜ ಅವರು ಸೆ 14ರಂದು ನೆರವೇರಿಸಿದರು.
ಶ್ರವಣಬೆಳಗೊಳದ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳಿಂದ ಆಶೀರ್ವಾದ ಪಡೆದುಕೊಂಡ ಶಾಕ ಹರೀಶ್ ಪೂಂಜ
ಬೆಳ್ತಂಗಡಿ; ಶ್ರೀ ರತ್ನತ್ರಯ ಜೈನ ತೀರ್ಥಕ್ಷೇತ್ರ ಬೆಳ್ತಂಗಡಿಗೆ ಆಗಮಿಸಿದ ಪರಮಪೂಜ್ಯ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳು ಶ್ರೀ ಜೈನಮಠ ಶ್ರವಣಬೆಳಗೊಳ ಇವರನ್ನು ಭೇಟಿ ಮಾಡಿದ ಶಾಸಕ ಹರೀಶ್ ಪೂಂಜ ಅವರು ಸ್ವಾಮೀಜಿಗಳ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್ ಅವರೂ ಇದ್ದರು
ಕೆ.ಪಿ.ಸಿ.ಸಿ ಕಾರ್ಮಿಕ ಘಟಕದ ದ.ಕ ಮತ್ತು ಉಡುಪಿ ಜಿಲ್ಲೆಯ ಉಸ್ತುವಾರಿಯಾಗಿ ಅಬ್ದುಲ್ ರಹಿಮಾನ್ ಪಡ್ಪು ನೇಮಕ
ಬೆಳ್ತಂಗಡಿ; ಕೆ.ಪಿ.ಸಿ.ಸಿ ಕಾರ್ಮಿಕ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಯಶಸ್ವಿಯಾಗಿ ಕಾರ್ಯನಿರ್ವಹಣೆ ಮಾಡುತ್ತಿದ್ದ ಅಬ್ದುಲ್ ರಹಿಮಾನ್ ಪಡ್ಪು ರವರನ್ನು ಕೆ.ಪಿ.ಸಿ.ಸಿ. ಅಧ್ಯಕ್ಷರಾದ ಮಾನ್ಯ ಡಿ.ಕೆ.ಶಿವಕುಮಾರ್ ಮತ್ತು ಕೆ.ಪಿ ಸಿ.ಸಿ.ಕಾರ್ಯಾಧ್ಯಕ್ಷರಾದ ಜೆ.ಇ.ಚಂದ್ರಶೇಖರ್ ರವರ ಆದೇಶದಂತೆ,ರಾಜ್ಯ ಪದಾಧಿಕಾರಿಗಳ ಕಾರ್ಯಕಾರಿಣಿ ಸಭೆಯ ನಿರ್ಣಯದಂತೆ ಕಾರ್ಮಿಕ ಘಟಕದ ದ.ಕ ಮತ್ತು ಉಡುಪಿ ಜಿಲ್ಲೆಯ ಉಸ್ತುವಾರಿಯಾಗಿ ರಾಜ್ಯ ಕಾರ್ಮಿಕ ಘಟಕದ ಅಧ್ಯಕ್ಷರಾದ ಕೆ ಪುಟ್ಟಸ್ವಾಮಿಗೌಡ ನೇಮಕಗೊಳಿಸಿರುತ್ತಾರೆ. ಮುಂದಿನ ದಿನಗಳಲ್ಲಿ ದ.ಕ. ಮತ್ತು ಉಡುಪಿ ಜಿಲ್ಲೆಯಲ್ಲಿ ಕಾರ್ಮಿಕ ಘಟಕದ ಬ್ಲಾಕ್ ಪದಾಧಿಕಾರಿಗಳನ್ನು, ಬೂತ್ ಮಟ್ಟದ ಸಮಿತಿಯನ್ನು ,ಘಟಕದ ಎಲ್ಲಾ ವಿಭಾಗದ ಸಮಿತಿಯನ್ನು ರಚಿಸಿ...
ಸ್ನೇಹಮಯಿ ಕೃಷ್ಣ ವಿರುದ್ದ ಬೆಳ್ತಂಗಡಿ ಪೊಲೀಸರಿಗೆ ದೂರು
ಬೆಳ್ತಂಗಡಿ; 2012ರಲ್ಲಿ ಕೊಲೆಯಾದ ಸೌಜನ್ಯಳನ್ನು ಆಕೆಯ ಮಾವ ವಿಠಲ ಗೌಡ ಕೊಲೆ ಮಾಡಿದ್ದಾನೆ ಎಂದು ಆರೋಪ ಮಾಡಿ ಹೇಳಿಕೆ ನಿಡಿದ್ದ ಸ್ನೇಹಮಯಿ ಕೃಷ್ಣ ವಿರುದ್ದ ಬೆಳ್ತಂಗಡಿ ವೃತ್ತ ನಿರೀಕ್ಷಕರಿಗೆ ವೆಂಕಪ್ಪ ಕೋಟ್ಯಾನ್ ದೂರು ನೀಡಿದ್ದಾರೆ.ಸ್ನೇಹಮಯಿ ಕೃಷ್ಣ ಅವರು ವಿಠಲ ಗೌಡ ಅವರ ಬಗ್ಗೆ ಪೊಲೀಸರಿಗೆ ದೂರು ನೀಡಿರುವುದಾಗಿ ತಿಳಿಸಿ ಬಳಿಕ ಮಾದ್ಯಮಗಳಿಗೆ ಹೇಳಿಕೆ ನೀಡಿದ್ದು ಇದು ಸೌಜನ್ಯ ಕೊಲೆಗಾರರನ್ನು ಪತ್ತೆ ಹಚ್ಚಬೇಕು ಎಂದು ನಡೆಯುತ್ತಿರುವ ಹೋರಾಟವನ್ನು ದಾರಿ ತಪ್ಪಿಸುವ ದುರುದ್ದೇಶದಿಂದ ಮಾಡಿರುವುದಾಗಿದೆ ಈತನನ್ನು ಮೈಸೂರಿನಿಂದ ಕರೆಸಿ ಈ ರೀತಿ ಹೇಳಿಕೆ ನೀಡಿರುವುದರ ಹಿಂದೆ...















