ಬಂಧನ ನಾಪತ್ತೆ ವದಂತಿಗಳ ನಡುವೆ ಠಾಣೆ ಹಾಗೂ ಎಸ್.ಐ.ಟಿ ಕಚೇರಿಗೆ ಬಂದು ಹಿಂತಿರುಗಿದ ಮಹೇಶ್ ಶೆಟ್ಟಿ ತಿಮರೋಡಿ
ಬೆಳ್ತಂಗಡಿ; ಮಹೇಶ್ ಶೆಟ್ಟಿ ಅವರನ್ನು ಎಸ್.ಐ.ಟಿ ತಂಡ ಬಂಧಿಸಲಿದೆ ಅವರು ನಾಪತ್ತೆಯಾಗಿದ್ದಾರೆ ಎಂಬ ವದಂತಿಗಳ ನಡುವೆಯೇ ಬೆಳ್ತಂಗಡಿ ಠಾಣೆಗೆ ಆಗಮಿಸಿದ್ದ ಮಹೇಶ್ ಶೆಟ್ಟಿ ಅವರು ಎಸ್.ಐ.ಟಿ ಠಾಣೆಗೆ ತೆರಳಿ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿ ಹಿಂತಿರುಗಿದ್ದಾರೆ.ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಬ್ರಹ್ಮಾವರ ಪೊಲೀಸರ ದೂರಿನಂತದ ದಾಖಲಾಗಿದ್ದ ಕರ್ತವ್ಯಕ್ಕೆ ಅಡ್ಡಿ ಪ್ರಕರಣದ ಬಗ್ಗೆ ವಿಚಾರಣೆಗಾಗಿ ಮಹೇಶ್ ಶೆಟ್ಟಿ ಅವರು ಶುಕ್ರವಾರ ಬೆಳ್ತಂಗಡಿ ಠಾಣೆಗೆ ಆಗಮಿಸಿದ್ದರು. ಠಾಣೆಯಲ್ಲಿ ಹೇಳಿಕೆ ನೀಡಿದ ಬಳಿಕ ಅವರು ನೇರವಾಗಿ ಎಸ್.ಐ.ಟಿ ಕಚೇರಿಗೆ ತೆರಳಿದ್ದಾರೆ. ಎಸ್.ಐ.ಟಿ ಅಧಿಕಾರಿಗಳು ಅವರಿಗೆ ಯಾವುದೇ ನೋಟೀಸ್ ನೀಡಿದ್ದರೆ ಎಂಬ...
ಬೆಳ್ತಂಗಡಿ : ವಿಚಾರಣೆಗೆ ಹಾಜರಾದ ಲಾಯರ್ ಜಗದೀಶ್
ಬೆಳ್ತಂಗಡಿ : ಸಾಮಾಜಿಕ ಜಾಲತಾಣದಲ್ಲಿ ಧರ್ಮಸ್ಥಳ ಬಗ್ಗೆ ಅವಹೇಳನ ಮಾಡಿ ವಿಡಿಯೋ ವೈರಲ್ ಮಾಡಿದ ಪ್ರಕರಣ ಸಂಬಂಧ ವಿಚಾರಣೆಗಾಗಿ ಆ.29 ರಂದು ಬೆಳ್ತಂಗಡಿ ಪೊಲೀಸ್ ಠಾಣೆಗೆ ಹಾಜರಾಗಿದ್ದಾರೆ. ಬೆಳ್ತಂಗಡಿ ಪೊಲೀಸ್ ಠಾಣೆಗೆ ಹಾಜರಾಗಲು ಜೀವ ಭಯ ಕಾಡುತ್ತಿದ್ದು ಇದರಿಂದ ಪೊಲೀಸ್ ಭದ್ರತೆ ನೀಡಬೇಕಾಗಿ ವಿನಂತಿ ಮಾಡಿದ್ದ ಕಾರಣ ಇಬ್ಬರು ಪೊಲೀಸರ ಜೊತೆ 1:45 ಕ್ಕೆ ಹಾಜರಾಗಿರುವ ಲಾಯರ್ ಜಗದೀಶ್.
ಬೆಳ್ತಂಗಡಿ : ಬ್ರಹ್ಮವಾರ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪ್ರಕರಣ; ವಿಚಾರಣೆಗಾಗಿ ಮಹೇಶ್ ಶೆಟ್ಟಿ ತಿಮರೋಡಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ಹಾಜರು
ಬೆಳ್ತಂಗಡಿ: ಬ್ರಹ್ಮವಾರ ಪೊಲೀಸ್ ಠಾಣೆಯಲ್ಲಿ ಯೂಟ್ಯೂಬ್ ನಲ್ಲಿ ಬಿಜೆಪಿಯ ಸಂತೋಷ್ ಜಿ ಬಗ್ಗೆ ಅವ್ಯಾಚ ಶಬ್ದಗಳಿಂದ ಬೈದು ವಿಡಿಯೋ ಪ್ರಸಾರವಾದ ಬಗ್ಗೆ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಆ.21 ರಂದು ಉಜಿರೆ ನಿವಾಸದಿಂದ ಮಹೇಶ್ ಶೆಟ್ಟಿ ತಿಮರೋಡಿಯನ್ನು ಬ್ರಹ್ಮವಾರ ಪೊಲೀಸರು ಬಂಧಿಸಲು ಬಂದಾಗ ಕರ್ತವ್ಯಕ್ಕೆ ಅಡ್ಡಿಪಡಿಸಿದ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಬ್ರಹ್ಮವಾರ ಪೊಲೀಸರು ಆ.22 ರಂದು ಪ್ರಕರಣ ದಾಖಲಿಸಿದ್ದರು. ಈ ಪ್ರಕರಣದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಆರೋಪಿ -3 ಅಗಿದ್ದರು. ಈ ಪ್ರಕರದಲ್ಲಿ ವಿಚಾರಣೆಗಾಗಿ ತಿಮರೋಡಿ ಮಹೇಶ್ ಶೆಟ್ಟಿ ತಿಮರೋಡಿ ಆ.29...
ಆ31 ಜೆಡಿಎಸ್ ನಿಂದ “ಧರ್ಮಸ್ಥಳ ಸತ್ಯಯಾತ್ರೆ” ನಿಖಿಲ್ ಕುಮಾರ ಸ್ವಾಮಿ
ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ವಿರುದ್ಧ ನಡೆಯುತ್ತಿರುವ ಅಪಪ್ರಚಾರ, ಷಡ್ಯಂತ್ರ ಹಾಗೂ ಸುಳ್ಳು ಆರೋಪಗಳ ವಿರುದ್ಧ ಜಾತ್ಯತೀತ ಜನತಾದಳವು "ಧರ್ಮಸ್ಥಳ ಸತ್ಯ ಯಾತ್ರೆ' ಕೈಗೊಂಡಿದ್ದು ಇದೇ ರವಿವಾರ ಆ 31ರಂದು ಧರ್ಮಸ್ಥಳಕ್ಕೆ ಭೇಟಿ ನೀಡಲಿದ್ದೇವೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು. ಪಕ್ಷದ ಕಚೇರಿ ಜೆಪಿ ಭವನದಲ್ಲಿ ಗುರುವರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು. ಆ. 31ರಂದು ಧರ್ಮಸ್ಥಳ ಸತ್ಯ ಯಾತ್ರೆ ಆರಂಭವಾಗುತ್ತದೆ. ಮೊದಲಿಗೆ ಹಾಸನದಲ್ಲಿ ಸೆಂಟರ್ ಮಾಡಿದ್ದೇವೆ. ರಾಜ್ಯಾದ್ಯಂತ ಮುಖಂಡರು, ಕಾರ್ಯಕರ್ತರು ಆಗಮಿಸಲಿದ್ದು ಅಲ್ಲಿ ತಿಂಡಿ ವ್ಯವಸ್ಥೆ ಮಾಡಿದ್ದೇವೆ....
ಕುತ್ಲೂರು ರಾಮಚಂದ್ರ ಭಟ್ ನಿಧನ
ಬೆಳ್ತಂಗಡಿ; ನಾರಾವಿ ಗ್ರಾಮಪಂಚಾಯತಿನ ಮಾಜಿ ಸದಸ್ಯ ಶಿಕ್ಷಣ ಪ್ರೇಮಿ ಕುತ್ಲೂರು ನಿವಾಸಿ ಕುಕ್ಕುಜೆ ರಾಮಚಂದ್ರಭಟ್ ಆ29 ರಂದು ನಿಧನರಾಗಿದ್ದಾರೆ.ಲೋ ಬಿಪಿಯಿಂದಾಗಿ ಕುಸಿದು ಬಿದ್ದ ಇವರನ್ನು ಕೂಡಲೇ ಆಸ್ಪತ್ರೆಗೆ ಕೊಂಡೊಯ್ದರೂ ಆವೇಳೆಗೆ ಅವರು ಮೃತಪಟ್ಟಿದ್ದರು. ನಾರಾವಿ ಗ್ರಮಾಪಂಚಾಯತಿನ ಮಾಜಿ ಸದಸ್ಯರಾದ ಇವರು ಕುತ್ಲೂರು ಶಾಲೆಯ ಎಸ್.ಡಿ.ಎಂ ಸಿ ಅಧ್ಯಕ್ಷರಾಗಿ ಶಾಲೆ ರಾಷ್ಟ್ರ ಮಟ್ಟದಲ್ಲಿಯೇ ಗುರಿತಿಸುವಂತೆ ಮಾಡಿದ್ದರು. ಇವರ ನೇತೃತ್ವದಲ್ಲಿ ಇತ್ತೀಚೆಗಷ್ಟೆ ಕುತ್ಲೂರು ಶಾಲೆಯ ಮಕ್ಕಳು ಮುಖ್ಯಮಂತ್ರಿ ಅವರನ್ನು ಬೇಟಿಯಾಗಿದ್ದರು. ರಾಮಚಂದ್ರ ಭಟ್ ಅವರು ಪತ್ನಿ ಹಾಗೂ ಮಕ್ಕಳನ್ನು ಅಗಲಿದ್ದಾರೆ.
ಸೆ 1ಬಿಜೆಪಿಯಿಂದ ಧರ್ಮಸ್ಥಳ ಚಲೋ; ಎಸ್.ಆರ್ ವಿಶ್ವನಾಥ್ ನೇತೃತ್ವದಲ್ಲಿ ಪೂರ್ವಭಾವಿ ಸಭೆ.
ಬೆಳ್ತಂಗಡಿ; ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧದ ಷಡ್ಯಂತ್ರವನ್ನು ಖಂಡಿಸಿ ಸೆಪ್ಟಂಬರ್ 1 ರಂದು ನಡೆಯುವ “ಧರ್ಮಸ್ಥಳ ಚಲೋ “ ನಮ್ಮ ನಡಿಗೆ-ಧರ್ಮದೆಡೆಗೆ ಹಾಗೂ ಬೃಹತ್ ಸಮಾವೇಶ ಕುರಿತು ಇಂದು ಪೂರ್ವಭಾವಿ ಸಭೆ ಮತ್ತು ಸ್ಥಳ ಪರಿಶೀಲನೆ ನಡೆಸಲಾಯಿತು..ಈ ಸಂದರ್ಭದಲ್ಲಿ ಕಾರ್ಯಕ್ರಮದ ರಾಜ್ಯ ಸಂಚಾಲಕರು ಯಲಹಂಕ ವಿಧಾನಸಭಾ ಕ್ಷೇತ್ರದ ಶಾಸಕರು ಎಸ್. ಆರ್. ವಿಶ್ವನಾಥ್, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಕಾರ್ಕಳ ವಿಧಾನಸಭಾ ಕ್ಷೇತ್ರದ ಶಾಸಕರು ಸುನಿಲ್ ಕುಮಾರ್ ಹಾಗೂ ಪ್ರೀತಮ್ ಗೌಡ, ರಾಜ್ಯ ಕಾರ್ಯದರ್ಶಿಗಳು ದ. ಕ. ಜಿಲ್ಲಾ ಸಂಸದರು ಕ್ಯಾ. ಬ್ರಿಜೇಶ್ ಚೌಟರವರು,ಬೆಳ್ತಂಗಡಿ...
ರೆಖ್ಯ ಕಾಂಕ್ರೀಟ್ ಚರಂಡಿಗೆ ಬಿದ್ದು ಲಾರಿ ಚಾಲಕ ಸಾವು
ಬೆಳ್ತಂಗಡಿ: ಕಾಂಕ್ರೀಟ್ ಚರಂಡಿಗೆ ಬಿದ್ದು ಲಾರಿ ಚಾಲಕ ಸಾವನ್ನಪ್ಪಿರುವ ಘಟನೆ ಬೆಳ್ತಂಗಡಿ ತಾಲೂಕು ರೇಖ್ಯಾ ಗ್ರಾಮ ನೇಲ್ಯಡ್ಕ ಎಂಬಲ್ಲಿ ನಡೆದಿದೆ. ಬೆಂಗಳೂರು ನೆಲಮಂಗಲ ನಿವಾಸಿ ಹುನಮಂತರಾಯಪ್ಪ (60) ಮೃತ ಲಾರಿ ಚಾಲಕ. ಈ ಬಗ್ಗೆ ಮೃತರ ಮಗ ರಾಜಶೇಖರ (37) ಎಂಬವರು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ನನ್ನ ತಂದೆ ಹುನಮಂತರಾಯಪ್ಪ (60) ರವರು ಕೆಎ 52 ಬಿ 9011 ಲಾರಿಯಲ್ಲಿ ಚಾಲಕರಾಗಿದ್ದು, ದಿನಾಂಕ: 27-08-2025 ರಂದು ರಾತ್ರಿ ಸಮಯ ಮಂಗಳೂರಿನಿಂದ ಬೆಂಗಳೂರು ಕಡೆಗೆ ಅವರ ಬಾಬು ಲಾರಿಯನ್ನು ಚಲಾಯಿಸಿಕೊಂಡು ಬಂದು ದಿನಾಂಕ:...
ಭಾರೀ ಮಳೆ ಹಿನ್ನಲೆ ಆ29 ರಂದು ದ.ಕ ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ
ಮಂಗಳೂರು,ಆ.28: ಹವಾಮಾನ ಇಲಾಖೆಯು ದ.ಕ.ಜಿಲ್ಲೆಗೆ ಆ.29ರಂದು ರೆಡ್ ಅಲರ್ಟ್ ಘೋಷಿಸಿದೆ. ಮುಂಜಾಗ್ರತಾ ಕ್ರಮವಾಗಿ ಆ.29ರಂದು (ಶುಕ್ರವಾರ) ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ದ.ಕ.ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ವಸಂತ ಗಿಳಿಯಾರ್ ವಿರುದ್ದ ಬೆಳ್ತಂಗಡಿ ಠಾಣೆಗೆ ದೂರು
ಬೆಳ್ತಂಗಡಿ; ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಕಾಂಗ್ರೆಸ್ ನಾಯಕರುಗಳನ್ನು ತೇಜೋವಧೆ ಮಾಡಿ ಸುಳ್ಳು ಸುದ್ದಿಗಳನ್ನು ಹರಿಬಿಟ್ಟು ಅಪಪ್ರಚಾರ ಮಾಡುತ್ತಿರುವ ಬಗ್ಗೆ ವಸಂತ ಗಿಳಿಯಾರ್ ಅವರ ವಿರುದ್ದ ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ನಾಗೇಶ್ ಕುಮಾರ್ ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿದ್ದಾರೆ.ಕೆಪಿಸಿಸಿ ಕಾರ್ಯದರ್ಶಿ ರಕ್ಷಿತ್ ಶಿವರಾಂ ಬಗ್ಗೆ ಹಾಗೂ ಕಾಂಗ್ರೆಸ್ ಹೈಕಮಾಂಡ್ ಬಗ್ಗೆ ಸುಳ್ಳು ಸುದ್ದಿಯನ್ನು ಹರಡಿದ್ದು ರಕ್ಷಿತ್ ಶಿವರಾಂ ಅವರ ಮಾನಹಾನಿ ನಡೆಸಿ ಘನತೆ ಗೌರವಕ್ಕೆ ಧಕ್ಕೆಯುಂಟುಮಾಡಿದ್ದಲ್ಲದೆ ಇದರಿಂದಾಗಿ ಜನರಲ್ಲಿ ಗೊಂದಲ ಸೃಷ್ಟಿಯಾಗಲು ಕಾರಣವಾಗಿದ್ದು ಈಬಗ್ಗೆ ವಸಂತ ಗಿಳಿಯಾರ್...
ಬೆಳ್ತಂಗಡಿ ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾಗಿ ಧರ್ಮಗುರುಗಳಾದ ಫಾ. ಜೇಮ್ಸ್ ಪಟ್ಟೇರಿಲ್ ಆಯ್ಕೆ
ಬೆಳ್ತಂಗಡಿ; ಬೆಳ್ತಂಗಡಿ ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾಗಿ ಅ.ವಂ ಫಾ. ಜೇಮ್ಸ್ ಪಟ್ಟೇರಿಲ್ ಅವರು ಆಯ್ಕೆಯಾಗಿದ್ದಾರೆ. ಪೋಪ್ ಲಿಯೋ 14ಅವರ ಆದೇಶದಂತೆಎರ್ನಾಕುಳಂ ನಲ್ಲಿ ಸಿರೋ ಮಲಬಾರ್ ಚರ್ಚ್ ನ ಕಾರ್ಡಿನಲ್ ಅ.ವಂ ರಾಫೇಲ್ ತಟ್ಟಿಲ್ ಅವರು ಹೊಸ ಧರ್ಮಾಧ್ಯಕ್ಷರ ಹೆಸರನ್ನು ಘೋಷಣೆ ಮಾಡಿದ್ದಾರೆ.ಬೆಳ್ತಂಗಡಿ ಧರ್ಮಪ್ರಾಂತ್ಯದ ಸ್ಥಾಪಕ ಧರ್ಮಾಧ್ಯಕ್ಷರಾಗಿದ್ದಬಿಷಪ್ ಲಾರೆನ್ಸ್ ಮುಕ್ಕುಯಿ ಅವರು ಕಳೆದ 26 ವರ್ಷಗಳಿಂದ ಧರ್ಮಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರುಇದೀಗ ಅವರು ನಿವೃತ್ತರಾಗುತ್ತಿದ್ದು ಇವರ ಸ್ಥಾನಕ್ಕೆ ಹೊಸ ಧರ್ಮಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಜೇಮ್ಸ್ ಪಟ್ಟೇರಿಲ್ ಅವರು ಬೆಳ್ತಂಗಡಿ ತಾಲೂಕೊನ ಕಳೆಂಜ ಗ್ರಾಮದವರಾಗಿದ್ದಾರೆ















