ಮುಂಡಾಜೆ ಗ್ರಾ.ಪಂ ಸಿಬ್ಬಂದಿಜನಾರ್ದನ ನಾಯ್ಕ ನಿಧನ

0

ಮುಂಡಾಜೆ: ಗ್ರಾಮ ಪಂಚಾಯತ್ ಸಿಬ್ಬಂದಿ, ಶಾರದಾ ನಗರ ನಿವಾಸಿಜನಾರ್ದನ ನಾಯ್ಕ (30ವರ್ಷ ) ಅಲ್ಪಕಾಲದ ಅನಾರೋಗ್ಯದಿಂದ ಸ್ವಗೃಹದಲ್ಲಿ ಜು.10 ರಂದು ಶುಕ್ರವಾರ ರಾತ್ರಿ ನಿಧನರಾದರು. ಮೃತರು ತಾಯಿ ಹಾಗೂ ಇಬ್ಬರು ಸಹೋದರಿಯರು, ಬಂಧು ಮಿತ್ರರನ್ನು ಅಗಲಿದ್ದಾರೆ.

ಬೆಳ್ತಂಗಡಿ ತಾಲೂಕಿನ 11 ಸರ್ಕಾರಿ ಶಾಲೆಗಳಿಗೆ ಕೆಪಿಎಸ್ ಸ್ಥಾನಮಾನ : ರಾಜ್ಯ ಸರ್ಕಾರಕ್ಕೆ  ಅಭಿನಂದನೆ ಸಲ್ಲಿಸಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ.

0

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಸರ್ಕಾರಿ ಶಾಲೆಗಳ ಶೈಕ್ಷಣಿಕ ಅಭಿವೃದ್ಧಿಗೆ ಮಹತ್ವದ ಮೈಲಿಗಲ್ಲು ನಿರ್ಮಾಣವಾಗಿದ್ದು ತಾಲೂಕಿನ 10 ಹಿರಿಯ ಪ್ರಾಥಮಿಕ ಶಾಲೆಗಳು ಹಾಗೂ 1 ಸರ್ಕಾರಿ ಪ್ರೌಢಶಾಲೆಯನ್ನು ಕರ್ನಾಟಕ ಪಬ್ಲಿಕ್ ಸ್ಕೂಲ್ (ಕೆಪಿಎಸ್) ಆಗಿ ಮೇಲ್ದರ್ಜೆಗೇರಿಸಲು ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ, ಆಧುನಿಕ ಮೂಲಸೌಕರ್ಯ ಮತ್ತು ಉತ್ತಮ ಶೈಕ್ಷಣಿಕ ಅವಕಾಶಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರದ ಈ ಕ್ರಮ ಮಹತ್ವದ್ದಾಗಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಹೇಳಿದ್ದಾರೆ. ಕೆಪಿಎಸ್ ಆಗಿ ಮೇಲ್ದರ್ಜೆಗೇರಿಸಲಾದ ಶಾಲೆಗಳು: ನಿಟ್ಟಡೆ ಕ್ಲಸ್ಟರ್...

ಬಸ್ಸಿನಲ್ಲಿ ಗುಪ್ತಾಂಗ ಪ್ರದರ್ಶಿಸಿ ವಿದ್ಯಾರ್ಥಿನಿಯರೊಂದಿಗೆ ಅಸಭ್ಯ ವರ್ತನೆ ನಿರ್ವಾಹಕ  ಕಲ್ಲೇರಿ ನಿವಾಸಿ ಇರ್ಫಾನ್ ಬಂಧನ

0

ಮಂಗಳೂರು: ಬಸ್ಸಿನಲ್ಲಿ ತನ್ನ ಗುಪ್ತಾಂಗ ತೋರಿಸಿ ವಿದ್ಯಾರ್ಥಿನಿಗಳೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದ ಬಸ್‌ ಕಂಡಕ್ಟರ್ ನನ್ನು ಪೊಲೀಸರು ಬಂಧಿಸಿದ್ದಾರೆ. ಉಪ್ಪಿನಂಗಡಿ ಕಲ್ಲೇರಿ ನಿವಾಸಿ ಇರ್ಫಾನ್ (32 ವರ್ಷ) ಬಂಧಿತ ಆರೋಪಿ. ಪ್ರಸ್ತುತ ಈತ ಉಪ್ಪಿನಂಗಡಿ ಕರ್ವೇಲು ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದು, ವಿಟ್ಲ-ಮಂಗಳೂರು ಖಾಸಗಿ ಬಸ್ ನಲ್ಲಿ ಕಂಡಕ್ಟರ್ ಆಗಿ ಕೆಲಸ ಮಾಡಿಕೊಂಡಿರುತ್ತಾನೆ.ಮಂಗಳೂರು ವಿಟ್ಲ ಬಸ್ ಕಂಡಕ್ಟರ್ ಆಗಿದ್ದು, ದಿನಾಂಕ 9/7/2026 5:00 ಕಾಲೇಜು ವಿದ್ಯಾರ್ಥಿನಿಯ ರನ್ನು ಗುರಿಯಾಗಿರಿಸಿಕೊಂಡು ಬಸ್ಸಿನಲ್ಲಿ ತನ್ನ ಗುಪ್ತಾಂಗ ಪ್ರದರ್ಶನ ಮಾಡಿ ಅಸಭ್ಯವಾದ ಸನ್ನೆಯನ್ನು ಮಾಡಿ ಹಿಂದಿನ ಸೀಟಿಗೆ ಬಾ ಎಂದು...

ಮಂಗಳೂರು; ಕಟ್ಟಡ ನಿರ್ಮಾಣ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ ಎಂಟು ಮಂದಿ ಬಾಂಗ್ಲಾದೇಶಿ ಅಕ್ರಮ ವಲಸಿಗರು ಪೊಲೀಸ್ ವಶಕ್ಕೆ

0

ಮಂಗಳೂರು; ನಗರದಲ್ಲಿ ಕಟ್ಟಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ ಎಂಟು ಮಂದಿ ಬಾಂಗ್ಲಾದೇಶ ಪ್ರಜೆಗಳನ್ನು ಪೊಲೀಸರು ಪತ್ತೆಹಚ್ಚಿ ವಶಕ್ಕೆ ಪಡೆದಿದೆ.ನಗರ ಕಮೀಷನರೇಟ್ ನ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ನಿರ್ಮಾಣ ಹಂತದ ಕಟ್ಟಡದಲ್ಲಿ ಕೆಲವು ಬಾಂಗ್ಲಾದೇಶದ ಪ್ರಜೆಗಳು ಇರುವ ಬಗ್ಗೆ ಖಚಿತ ಮಾಹಿತಿಯಂತೆ ಸುರತ್ಕಲ್ ಪೊಲೀಸ್ ಠಾಣಾ ಪೊಲೀಸರು ದಿನಾಂಕ: 09.07.2026 ರಂದು ದಾಳಿ ನಡೆಸಿ ಪರಿಶೀಲಿಸಿದ ಸಮಯ ಒಟ್ಟು 54 ಮಂದಿ ಕಟ್ಟಡ ಕಾರ್ಮಿಕರ ದಾಖಲಾತಿಗಳನ್ನು ಪರಿಶೀಲಿಸಿದ ಸಮಯ ಅಕ್ರಮವಾಗಿ ವಾಸ್ತವ್ಯವಿದ್ದ ಬಾಂಗ್ಲಾದೇಶದ 8 ಮಂದಿ ಪ್ರಜೆಗಳನ್ನು ಪತ್ತೆ ಹಚ್ಚಲಾಗಿರುತ್ತದೆ.ಮುಕ್ತಾರ್ ಆಲಿರಾಕಿಬುರ್ ಹುಸೈನ್ಅಜರುಲ್ ಇಸ್ಲಾಂ(36),ಝಾಹಿದ್...

ಅತಿ ಹಿಂದುಳಿದ ಮಠಾಧೀಶರ ಮಹಾಸಭೆಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬೆಂಬಲ

0

ಬೆಳ್ತಂಗಡಿ: ಇತ್ತೀಚಿನ ದಿನಗಳಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ವಿರುದ್ಧ ಕೇಳಿಬರುತ್ತಿರುವ ಆರೋಪಗಳ ಹಿನ್ನೆಲೆಯಲ್ಲಿ ಅತಿ ಹಿಂದುಳಿದ ಮಠಾಧೀಶರ ಮಹಾಸಭೆ (ರಿ.) ಕೋರ್ ಕಮಿಟಿಯ ಸದಸ್ಯರಾದ ಸ್ವಾಮೀಜಿಗಳು ಧರ್ಮಸ್ಥಳಕ್ಕೆ ಜು.10 ರಂದು ಭೇಟಿ ನೀಡಿ, ನಾವು ಧರ್ಮಸ್ಥಳದ ಜೊತೆ ಇದ್ದೇವೆ ಎಂದು ಬೆಂಬಲ ಸೂಚಿಸಿ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಗೆ ಬೆಂಬಲ ಪತ್ರ ನೀಡಿದೆ.ಅವರು ನೀಡಿರುವ ಪತ್ರದಲ್ಲಿ ರಾಜ್ಯದ ಎಲ್ಲಾ ಹಿಂದುಳಿದ ಮಠಾಧೀಶರು ಸೇರಿದಂತೆ ಅನೇಕ ನಾಗರಿಕರು ಧರ್ಮಸ್ಥಳದ ಪರವಾಗಿ ನಿಂತಿದ್ದೇವೆ ಎಂದು ಉಲ್ಲೇಖಿಸಲಾಗಿದೆ. ಧರ್ಮಸ್ಥಳದ...

ಕಡಮಗುಂಡಿ ಜಲಪಾತ, ನೇತ್ರಾವತಿ ಪೀಕ್  ಪ್ರವಾಸಿಗರ ವೀಕ್ಷಣೆಗೆ ಮುಕ್ತ

0

ಬೆಳ್ತಂಗಡಿ : ಧಾರಕಾರ ಮಳೆ ಮತ್ತು ಭೂ ಕುಸಿತ,ಮತ್ತು ಜೋರಾದ ಗಾಳಿ ಬೀಸುತ್ತಿದ್ದು ಪರಿಣಾಮಪ್ರವಾಸಿಗರ ಸುರಕ್ಷತೆ ಸಲುವಾಗಿ ತಾಲೂಕಿನ ಪ್ರಸಿದ್ಧ ಚಾರಣ ಪಥ ನೇತ್ರಾವತಿ ಪೀಕ್ ಹಾಗೂ ಕಡಮಗುಂಡಿ ಜಲಪಾತ ಪ್ರವೇಶಕ್ಕೆ ನಿರ್ಭಂಧ ಹೇರಲಾಗಿತ್ತು.  ಇದೀಗ ವನ್ಯಜೀವಿ ವಿಭಾಗ ಮಳೆ ಕಡಿಮೆಯಾಗಿರುವ ಹಿನ್ನಲೆಯಲ್ಲಿ ನಿರ್ಭಂದ ತೆರವುಗೊಂಳಿಸಿದ್ದು  ಜು. 11 ರಿಂದ ಪ್ರವಾಸಿಗರ ವೀಕ್ಷಣೆಗೆ ಈ ಸ್ಥಳ ಮುಕ್ತಗೊಂಡಿರುವುದಾಗಿ ಬೆಳ್ತಂಗಡಿ ವಲಯ ವನ್ಯಜೀವಿ ವಿಭಾಗ ಪ್ರಕಟಣೆಯಲ್ಲಿ ತಿಳಿಸಿದೆ.

ವೇತನ ಏರಿಕೆಗೇ ಆಗ್ರಹಿಸಿ ಅಕ್ಷರದಾಸೋಹ ನೌಕರರಿಂದ ಸರಕಾರಕ್ಕೆ ಆಗ್ರಹ ಪತ್ರ

0

ಬೆಳ್ತಂಗಡಿ; ಅಕ್ಷರ ದಾಸೋಹ ನೌಕರರಿಗೆ ಕಳೆದ 15 ವರ್ಷಗಳಿಂದ ಕೇಂದ್ರ ಸರಕಾರ ಒಂದು ರೂಪಾಯಿ ಸಂಬಳ ಏರಿಸದೇ ಮಹಿಳಾ ಕಾರ್ಮಿಕರಿಗ ದ್ರೋಹ ಎಸಗಿದೆ ಎಂದು ಸಿಐಟಿಯು ದ.ಕ. ಜಿಲ್ಲಾಧ್ಯಕ್ಷರಾದ ಬಿ.ಎಂ.ಭಟ್ ಹೇಳಿದರು.ಅವರು ಇಂದು ಅಕ್ಷರದಾಸೋಹ ನೌಕರರು ಭಾರತ ದೇಶದಾದತ ನಡೆಸುತ್ತಿರುವ ಕರಾಳ ದಿನದ ಭಾಗವಾಗಿ ಕೇಂದ್ರ ಹಾಗೂ ರಾಜ್ಯ ಸರಕಾರಗಳಿಗೆ ಮನವಿ ನೀಡಿ ಮಾತಾಡುತ್ತಿದ್ದರು. ಕನಿಷ್ಟ ನ್ಯಾಯಯುತ ವೇತನ, ಸವಲತ್ತುಗಳನ್ನು ಕೊಡಲಾಗದ ಆಡಳಿತ ನಡೆಸುವ ರಾಜಕೀಯ ಪಕ್ಷಗಳಿಗೆ ಈ ದೇಶವನ್ನು ಆಳುವ ಯೋಗ್ಯತೆ ಇಲ್ಲ ಎಂದು ಟೀಕಿಸಿದರು. ರಾಮ ಮಂದಿರದಲ್ಲಿ ಕೊಟ್ಯಾಂತರ ಹಣ...

41 ಬಾರಿ ದಸ್ತಗಿರಿ ವಾರೆಂಟ್ ಅದೇಶವಾಗಿದ್ದ ಆರೋಪಿಯನ್ನು ಕೇರಳದಲ್ಲಿ ಬಂಧಿಸಿದ ಪೊಲೀಸರು

0

ಬೆಳ್ತಂಗಡಿ: ಪುತ್ತೂರಿನಲ್ಲಿ ನಡೆದ ದರೋಡೆ ಪ್ರಕರಣದಲ್ಲಿ ನ್ಯಾಯಾಲಯದಿಂದ ಜಾಮೀನು ಪಡೆದು ಹೊರಬಂದು ಬಳಿಕ‌ ನ್ಯಾಯಾಲಯಕ್ಕೆ ಹಾಜರಾಗದೆ ಇದ್ದು 41 ಬಾರಿ ದಸ್ತಗಿರಿ ವಾರೆಂಟ್ ಅದೇಶವಾಗಿದ್ದ ಆರೋಪಿಯನ್ನು ಕೇರಳದಲ್ಲಿ ಪೊಲೀಸರು ಬಂಧಿಸಿದ್ದಾರೆ.ಬಂಧಿತ ಆರೋಪಿ ಕೇರಳ ತ್ರಿಶೂ‌ರ್ ನಿವಾಸಿ ನೆಲ್ಸನ್ ಸಿ.ವಿ (38) ಎಂಬಾತನಾಗಿದ್ದಾನೆ. ಪ್ರಕರಣದ ಹಿನ್ನಲೆ;ದಿನಾಂಕ 22.12.2017 ರಂದು ಪುತ್ತೂರು ನಗರ ಠಾಣಾ ವ್ಯಾಪ್ತಿಯ ಮನೆಯೊಂದರಲ್ಲಿ ಮೂರು ಜನ ಅಪರಿಚಿತ ವ್ಯಕ್ತಿಗಳು ನುಗ್ಗಿ ಮನೆಯಲ್ಲಿದ್ದವರಿಗೆ ಪಿಸ್ತೂಲ್ ಮತ್ತು ಚೂರಿಯನ್ನು ತೋರಿಸಿ ಸುಮಾರು ರೂ 2,88,000/- ಅಂದಾಜು ಮೌಲ್ಯದ ಚಿನ್ನಾಭರಣಗಳನ್ನು ಹಾಗೂ ರೂ 60,0000/- ನಗದು ಹಣವನ್ನು...

ಬೆಳ್ತಂಗಡಿ ತಹಶೀಲ್ದಾರ್ ಆಗಿ ಎಸ್.ಎನ್. ನರಗುಂದ ಅಧಿಕಾರ ಸ್ವೀಕಾರ

0

ಬೆಳ್ತಂಗಡಿ : ತಹಶೀಲ್ದಾರ್ ಪೃಥ್ವಿ ಸಾನಿಕಂ ವರ್ಗಾವಣೆಯಾದ ಜಾಗಕ್ಕೆ ಹೊಸ ತಹಶೀಲ್ದಾರ್ ಆಗಿ ಎಸ್.ಎನ್.ನರಗುಂದ ಅವರನ್ನು ಸರಕಾರ ನೇಮಕ ಮಾಡಿ ಜು.2 ರಂದು ಆದೇಶ ಹೊರಡಿಸಿತ್ತು.‌ ಇದೀಗ ಮೈಸೂರು ಜಿಲ್ಲೆಯ ಅಭಿವೃದ್ಧಿ ಪ್ರಾಧಿಕಾರದ ವಿಶೇಷ ಗ್ರೇಡ್-1 ತಹಶೀಲ್ದಾರ್ ಆಗಿರುವ ಎಸ್.ಎನ್.ನರಗುಂದ ಅವರು ಬೆಳ್ತಂಗಡಿ ತಹಶೀಲ್ದಾರ್ ಕಚೇರಿಯಲ್ಲಿ ಜು.9 ರಂದು ಅಧಿಕಾರ ಸ್ವೀಕರಿಸಿಕೊಂಡರು. ಈ ಹಿಂದೆ ಮೈಸೂರು ಜಿಲ್ಲೆಯ ಸಾಲಿಗ್ರಾಮ, ಹೆಚ್. ಡಿ. ಕೋಟೆ ಹಾಗೂ ಕೊಡಗು ಜಿಲ್ಲೆಯ ಸೋಮವಾರಪೇಟೆಯಲ್ಲಿ ತಹಶೀಲ್ದಾರ್ ಆಗಿ ಸೇವೆ ಸಲ್ಲಿಸಿದ್ದರು.

ಬೆಳ್ತಂಗಡಿ : ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ: ಆರೋಪಿಗೆ 20 ವರ್ಷ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ

0

ಬೆಳ್ತಂಗಡಿ : ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಅಪ್ರಾಪ್ತ ಬಾಲಕಿಯ ಅತ್ಯಾಚಾರ ಮಾಡಿದ ಪ್ರಕರಣ ಸಂಬಂಧ ಆರೋಪಿ ಅಪರಾಧಿ ಎಂದು ಸಾಬೀತಾದ ಹಿನ್ನೆಲೆಯಲ್ಲಿ 20 ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಿ ಮಂಗಳೂರು ಪೋಕ್ಸೋ ನ್ಯಾಯಾಲಯ ಆದೇಶ ಮಾಡಿದೆ. ಬೆಳ್ತಂಗಡಿ ತಾಲೂಕಿನ ಪುಂಜಾಲಕಟ್ಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕಿಯ ಅತ್ಯಾಚಾರ ಮಾಡಿದ ಬಗ್ಗೆ 3-11-2025 ರಂದು ಕಲಂ 376(2)(n) 506 IPC ಹಾಗೂ 6 ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿ ಆರೋಪಿ ಮಂಗಳೂರು ನಗರ ಗುರುಪುರದ ಅಡ್ಡೂರು ನಿವಾಸಿ ಆಫ್ರಿದ್ @ ಅಪ್ಪಿ(21)...