ಎಸ್.ಡಿ.ಎಂ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ನೂತನ ಮುಖ್ಯಸ್ಥರಾಗಿ ಸುನಿಲ್ ಹೆಗ್ಡೆ ನೇಮಕ

0

ಉಜಿರೆ ಎಸ್.ಡಿ.ಎಂ ಸ್ವಾಯತ್ತ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ನೂತನ ಮುಖ್ಯಸ್ಥರಾಗಿ ಸುನಿಲ್ ಹೆಗ್ಡೆ ನೇಮಕಗೊಂಡಿದ್ದಾರೆ. ಈ ಹಿಂದೆ ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸಿ, ಇತ್ತೀಚೆಗಷ್ಟೇ ನಿವೃತ್ತರಾದ ಡಾ. ಭಾಸ್ಕರ ಹೆಗಡೆಯವರಿಂದ ತೆರವಾದ ಸ್ಥಾನಕ್ಕೆ ಸುನಿಲ್ ಹೆಗ್ಡೆ ನಿಯುಕ್ತಿಗೊಂಡಿದ್ದಾರೆ. ಇವರು ಕಳೆದ 15 ವರ್ಷಗಳಿಂದ ಇದೇ ವಿಭಾಗದಲ್ಲಿ ಸಹ ಪ್ರಾಧ್ಯಾಪಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಉಜಿರೆ ಎಸ್.ಡಿ.ಎಂ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಹಿರಿಯ ವಿದ್ಯಾರ್ಥಿಯೂ ಆಗಿರುವ ಸುನಿಲ್ ಹೆಗ್ಡೆ ಕಸ್ತೂರಿ ವಾಹಿನಿಯಲ್ಲಿ ಕಾಪಿ ಎಡಿಟರ್ ಆಗಿ ವೃತ್ತಿ ಜೀವನ ಆರಂಭಿಸಿದ್ದರು. ನಂತರ 15 ಭಾಷೆಗಳಲ್ಲಿ ಪ್ರಕಟವಾಗುತ್ತಿದ್ದ "ಸಂಡೇ ಇಂಡಿಯನ್"...

ಬೆಳ್ತಂಗಡಿ; ಎಸ್.ಐ.ಆರ್ ಗೆ ತೆರಳಿದ್ದ ದಲಿತ ಸಮುದಾಯದ ಬಿಎಲ್ ಒ ಗೆ ಜಾತಿನಿಂದನೆ; ಪ್ರಕರಣ ದಾಖಲು

0

ಬೆಳ್ತಂಗಡಿ: ಶಿರ್ಲಾಲಿನಲ್ಲಿ ಎಸ್.ಐ ಆರ್ ಕೆಲಸಕ್ಕೆಂದು ತೆರಳಿದ್ದ ದಲಿತ ಸಮುದಾಯಕ್ಕೆ ಸೇರಿದ‌ ಬಿ.ಎಲ್.ಒ ಗೆ ಸ್ಥಳೀಯ ನಿವಾಸಿ ಯಶೋಧ ಆಚಾರಿ ಎಂಬವರು ಮನೆಯೊಳಗೆ ಪ್ರವೇಶಿಸಲು ಅನುಮತಿ ನೀಡದೆ ನೀನು ಹೊರಗೆ ನಿಲ್ಲು ನಿನ್ನ ಜಾತಿಯವರು ಅಲ್ಲಿಯೇ ನಿಲ್ಲುವುದು ಬರಬಾರದು ಎಂದು ಜಾತಿ ನಿಂದನೆ ಮಾಡಿರುವುದಾಗಿ ವೇಣೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ‌ ದಾಖಲಿಸಲಾಗಿದೆ. ಸ್ಥಳೀಯ ಅಂಗನವಾಡಿ ಕಾರ್ಯಕರ್ತೆ ಬಿಎಲ್.ಒ ಆಗಿ ಕೆಲಸ ಮಾಡುತ್ತಿದ್ದು ಶಿರ್ಲಾಲು ಗ್ರಾಮದ ಪಲ್ಲದೋಡಿ ಕಾಳಿಕಾಂಬ ನಿವಾಸಿ ಯಶೋಧ ಆಚಾರಿ ಎಂಬವರ ಮನೆಗೆ ಎ.ಎಲ್.ಒ‌ ಮಾಧವ ಎಂಬರೊಂದಿಗೆ ಜು.6 ರಂದು ಬೆಳಗ್ಗೆ 11:30...

ಜು‌ 8 ದ‌.ಕ ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ‌ ಜಿಲ್ಲಾಧಿಕಾರಿ ಘೋಷಣೆ

0

ಮಂಗಳೂರು, ಜು.7: ಹವಾಮಾನ ಇಲಾಖೆಯು ಭಾರೀ ಮಳೆಯ ಮುನ್ಸೂಚನೆ ನೀಡಿರುವ ಕಾರಣ ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ಜು.8ರ ಬುಧವಾರ ರಜೆ ಘೋಷಿಸಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಧರ್ಮಸ್ಥಳ: ಅಜಿಕುರಿ ರಸ್ತೆ ದುರಸ್ತಿಗೆ ಒತ್ತಾಯಿಸಿ ರಸ್ತೆತಡೆ ನಡೆಸಿ ಪ್ರತಿಭಟನೆ

0

ಬೆಳ್ತಂಗಡಿ; ಧರ್ಮಸ್ಥಳ ಗ್ರಾಮದ‌ ನೇತ್ರಾವತಿ‌ ಸ್ನಾನಘಟ್ಟದಿಂದ ಅಜಿಕುರಿ ಹೋಗುವ ರಸ್ತೆ ಸಂಪೂರ್ಣವಾಗಿ ಹದಗೆಟ್ಟು ಹೋಗಿದ್ದು ವಾಹನಗಳ ಹಾಗೂ ಜನರ ಸಂಚಾರ ಅಸಾಧ್ಯವಾಗಿದೆ. ರಸ್ತೆಯಲ್ಲಿ ದೊಡ್ಡ ಹೊಂಡಗಳೇ ಬಿದ್ದಿದ್ದು ಕನಿಷ್ಟ ದುರಸ್ತಿಗೂ ಮುಂದಾಗದ ಹಿನ್ನಲೆಯಲ್ಲಿ ಸ್ಥಳೀಯ ನಿವಾಸಿಗಳು ರಿಕ್ಷಾ ಚಾಲಕರು ಒಟ್ಟಾಗಿ ಮಂಗಳವಾರ ರಸ್ತೆ ತಡೆ ನಡೆಸಿ ಪ್ರತಿಭಟನೆ ಆರಂಭಿಸಿದ್ದಾರೆ.ನೇತ್ರಾವತಿ ಸ್ನಾನಘಟ್ಟದಿಂದ ಅಜಿಕುರಿ ಮಾರ್ಗವಾಗಿ ದಿಡುಪೆ- ಪೈಚಾರು ರಾಜ್ಯಹೆದ್ದಾರಿಗೆ ಸಂಪರ್ಕ ಕಲ್ಪಿಸುವ ಈ ರಸ್ತೆಕಳೆದ 5 ವರ್ಷಗಳಿಂದ ಸಂಪೂರ್ಣ ಹದಗೆಟ್ಟ ರೀತಿಯಲ್ಲಿದ್ದು ವರ್ಷದ ಹಿಂದೆಯೂ ಸ್ಥಳೀಯರು ಪ್ರತಿಭಟನೆ ನಡೆಸಿದ್ದರು. […]

ಸುಳ್ಯ ತೂಗು ಸೇತುವೆಗಳ ಸರದಾರ ಪದ್ಮಶ್ರೀ ಪುರಸ್ಕೃತ ಡಾ.‌ಗಿರೀಶ್ ಭಾರದ್ವಾಜ್ ನಿಧನ

0

ಸುಳ್ಯ: ದೇಶಾದ್ಯಂತ ತೂಗು ಸೇತುವೆಗಳ ಸರದಾರ' ಹಾಗೂ 'ಭಾರತದ ಸೇತುವೆ ಮನುಷ್ಯ' (Bridge Man of India) ಎಂದೇ ಪ್ರಖ್ಯಾತರಾಗಿದ್ದ, ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ (76) ಅವರು ಮಂಗಳವಾರ ಮುಂಜಾನೆ ವಿಧಿವಶರಾಗಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಉತ್ತರಾಖಂಡದ ಪವಿತ್ರ ದೇಗುಲಗಳ ಪ್ರವಾಸ ಕೈಗೊಂಡಿದ್ದ ಅವರು, ತೀವ್ರ ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದರು. ಸುಳ್ಯದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಅವರು, ಇಂದು ಮುಂಜಾನೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಮೃತರು ಮೂವರು ಮಕ್ಕಳನ್ನು ಅಗಲಿದ್ದಾರೆ. ಗಿರೀಶ್ ಭಾರದ್ವಾಜ್ ಅವರು ದೇಶದ ವಿವಿಧೆಡೆ, ವಿಶೇಷವಾಗಿ ಗ್ರಾಮೀಣ ಭಾಗಗಳಲ್ಲಿ...

ಸ್ಪೇನ್ ವಿರುದ್ದ ಸೋಲು ವಿಶ್ಚಕಪ್ ನಿಂದ ಹೊರಬಿದ್ದ ಪೋರ್ಚುಗಲ್; ರೊನಾಲ್ಡೊ ಕನಸು ಭಗ್ನ

0

ಡಲ್ಲಾಸ್ : ವಿಶ್ಚಕಪ್ 16ರ ಘಟ್ಟದ ಪಂದ್ಯದಲ್ಲಿ ಯೂರೋಪಿಯನ್ ಚಾಂಪಿಯನ್ ಸ್ಪೇನ್ ತಂಡವು ಪೋರ್ಚುಗಲ್ ತಂಡದ ವಿರುದ್ಧ 1-0 ಅಂತರದ ನೀರಸ ಗೆಲುವು ಸಾಧಿಸಿದೆ. ಈ ಮೂಲಕ ಕ್ರಿಸ್ಟಿಯಾನೋ ರೊನಾಲ್ಲೊ ಅವರ ವಿಶ್ವಕಪ್ ಕನಸು ಕೊನೆಗೊಂಡಿದೆ. ತಾರಾ ಆಟಗಾರರಿದ್ದರೂ ಪಂದ್ಯ ಅಷ್ಟೇನೂ ರೋಚಕತೆ ಪಡೆಯಲಿಲ್ಲ. ಈ ಪಂದ್ಯದಲ್ಲಿ ಮೂಡಿಬಂದ ಏಕೈಕ ಅತ್ಯುನ್ನತ ಗುಣಮಟ್ಟದ ಕ್ಷಣವೆಂದರೆ, ಅದು ಮೆರಿನೊ ಹೊಡೆದ ನಿರ್ಣಾಯಕ ಗೋಲು ಮಾತ್ರವಾಗಿತ್ತು. ಆದರೆ, ಉಳಿದ ಯಾವುದೇ ಪ್ರಮುಖ ಆಟಗಾರರು ಈ ಮಹತ್ವದ ಸಂದರ್ಭಕ್ಕೆ ತಕ್ಕ ಆಟವನ್ನು ಪ್ರದರ್ಶಿಸಲು ವಿಫಲರಾದರು.ಈ ಪಂದ್ಯದಲ್ಲಿ ಮೈಕೆಲ್ ಮೆರಿನೊ...

ಬೆಳ್ತಂಗಡಿ; ಬೈಕ್ ಸ್ಕಿಡ್‌ಆಗಿ ಬಿದ್ದು ವಿದ್ಯಾರ್ಥಿ ಸ್ಥಳದಲ್ಲಿಯೇ ಸಾವು

0

ಬೆಳ್ತಂಗಡಿ: ಬೈಕ್ ಸ್ಕಿಡ್ ಆಗಿ‌ ವಿದ್ಯಾರ್ಥಿಯೊಬ್ಬ  ಸ್ಥಳದಲ್ಲೇ ಸಾವನ್ನಪ್ಪಿ ಮತ್ತೊಬ್ಬ ಗಾಯಗೊಂಡ ಘಟನೆ ಲಾಯಿಲ ಜಂಕ್ಷನ್ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ರಾತ್ರಿ ನಡೆದಿದೆ.ಮಂಗಳೂರಿನ ಕಾಲೇಜೊಂದರ ನಾಲ್ಕು ಮಂದಿ ವಿದ್ಯಾರ್ಥಿಗಳು ಕೊಟ್ಟಿಗೆಹಾರ ಸಮೀಪದ ದೇವರ ಮನೆಗೆ ಹೋಗಿದ್ದು ಅಲ್ಲಿಂದ ಸಂಜೆ ಹಿಂತಿರುಗುತಿದ್ದ ವೇಳೆ ಲಾಯಿಲ ಬಳಿ ಹೆದ್ದಾರಿಯಲ್ಲಿ ಬೈಕ್ ಸ್ಕಿಡ್ ಆಗಿ ಬಿದ್ದ ಪರಿಣಾಮ ಬೈಕಿನ ಹಿಂಬದಿ ಸವಾರ ಪ್ಯಾರಾ ಮೆಡಿಕಲ್ ವಿದ್ಯಾರ್ಥಿ ಮಂಗಳೂರು ನಿವಾಸಿ ಧೀರಜ್ (23) ಸ್ಥಳದಲ್ಲೇ ಸಾವನ್ಕಪ್ಪಿದ್ದು ,ಸವಾರ ಗಾಯಗೊಂಡಿದ್ದಾರೆ. ಮೇಲ್ನೋಟಕ್ಕೆ ಹೆದ್ದಾರಿಯಲ್ಲಿದ್ದ ಗುಂಡಿಗೆ ಬಿದ್ದು, ತಲೆ ರಸ್ತೆಗೆ...

ಬೆಳ್ತಂಗಡಿ ಬಸ್ ನಿಲ್ದಾಣದ ಬಳಿ ಕುಸಿದು ಬಿದ್ದು ಅರಸಿನಮಕ್ಕಿಯ ಬಾಲಕೃಷ್ಣ ಆಚಾರ್ಯ ಸಾವು

0

ಬೆಳ್ತಂಗಡಿ; ನಗರದ ಬಸ್ ನಿಲ್ದಾಣದ ಸಮೀಪದ ವೈನ್ ಶಾಪ್ ಬಳಿ ಸೋಮವಾರ ಸಂಜೆ ಬೆಳ್ತಂಗಡಿ ತಾಲೂಕಿನ ಹತ್ಯಡ್ಕ ಗ್ರಾಮದ ಅರಸಿನಮಕ್ಕಿ ಉಪ್ಪರಡ್ಕ ನಿವಾಸಿ ಬಾಲಕೃಷ್ಣ ಆಚಾರ್ಯ (69) ಎಂಬವರು ಕುಸಿದು ಕುಳಿತಲ್ಲಿಯೇ ಮೃತಪಟ್ಟ ಘಟನೆ ಸಂಭವಿಸಿದೆ. ಸ್ಥಳೀಯರು ವೈನ್ ಶಾಪ್ ಸಮೀಪ ವೃದ್ಧರೊಬ್ಬರು ಅಸ್ವಸ್ಥ ಸ್ಥಿತಿಯಲ್ಲಿ ಬಿದ್ದಿರುವುದನ್ನು ಗಮನಿಸಿ ಮಾಹಿತಿ ನೀಡಿದ್ದು ಪರಿಶೀಲನೆ ನಡೆಸಿದಾಗ ಅವರು ಮೃತಪಟ್ಟಿರುವುದು ತಿಳಿದುಬಂದಿದೆ. ಮೃತರ ಶರ್ಟ್‌ನ ಕಿಸೆಯಲ್ಲಿ ಪತ್ತೆಯಾದ ಆಧಾರ್ ಕಾರ್ಡ್ ಆಧರಿಸಿ ಅವರ ಗುರುತನ್ನು ಬಾಲಕೃಷ್ಣ ಆಚಾರ್ಯ ಎಂದು ಪತ್ತೆಹಚ್ಚಲಾಯಿತು. ಬಳಿಕ ಮೃತದೇಹವನ್ನು ಆಂಬುಲೆನ್ಸ್ ಮೂಲಕ ಬೆಳ್ತಂಗಡಿ ಸರ್ಕಾರಿ...

ಜು.8ರಿಂದ ಗಡಾಯಿಕಲ್ಲು ಚಾರಣ ನಿಷೇಧ

0

ಬೆಳ್ತಂಗಡಿ : ನಿರಂತರವಾಗಿ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ನಡ ಗ್ರಾಮದ ಗಡಾಯಿಕಲ್ಲು ಚಾರಣ ನಡೆಸುವುದು ಅಪಾಯಕಾರಿಯಾಗಿರುವ ಕಾರಣ ಜು. 8 ರಿಂದ ಮುಂದಿನ ಆದೇಶದ ವರೆಗೆ ಗಡಾಯಿಕಲ್ಲು ಚಾರಣಕ್ಕೆ ನಿರ್ಬಂಧ ಹೇರಲಾಗಿದೆ ಎಂದು ಬೆಳ್ತಂಗಡಿ ವಲಯ ವನ್ಯಜೀವಿ ವಿಭಾಗದ ಇಲಾಖೆಯ ಅಧಿಕಾರಿಗಳು ಜು.6 ರಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಶಿಶಿಲ ಭಾರೀ ಮಳೆಗೆ ರಸ್ತೆಗೆ ಬಿದ್ದ ಮರ “ಶೌರ್ಯ” ತಂಡದಿಂದ ತೆರವು

0

ಕೊಕ್ಕಡ: ಭಾರೀ ಗಾಳಿ-ಮಳೆಯಿಂದ ಶಿಶಿಲ ಅರಸಿನಮಕ್ಕಿ ಭಾಗದಲ್ಲಿ ರಸ್ತೆ ಹಾಗೂ ವಿದ್ಯುತ್ ತಂತಿ ಮೇಲೆ ಮರ ಉರುಳಿ ಬಿದ್ದು ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ಮರ ಬಿದ್ದ ಪರಿಣಾಮ ಕೆಲಕಾಲ ಸಂಚಾರಕ್ಕೆ ತೊಂದರೆ ಉಂಟಾಗಿದ್ದು, ಸ್ಥಳೀಯರು ಆತಂಕಕ್ಕೊಳಗಾಗಿದ್ದರು.ಮಾಹಿತಿ ತಿಳಿಯುತ್ತಿದ್ದಂತೆಯೇ ಶೌರ್ಯ ವಿಪತ್ತು ನಿರ್ವಹಣಾ ಘಟಕ ಶಿಶಿಲ ಅರಸಿನಮಕ್ಕಿ ಸದಸ್ಯರು ಸ್ಥಳಕ್ಕೆ ಧಾವಿಸಿ, ಮರವನ್ನು ಸುರಕ್ಷಿತವಾಗಿ ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಿದರು. ಜೊತೆಗೆ ವಿದ್ಯುತ್‌ ತಂತಿಗಳಿಗೆ ಯಾವುದೇ ಹೆಚ್ಚಿನ ಹಾನಿಯಾಗದಂತೆ ಎಚ್ಚರಿಕೆಯಿಂದ ಕಾರ್ಯಾಚರಣೆ ನಡೆಸಲಾಯಿತು. ಕಾರ್ಯಾಚರಣೆಯಲ್ಲಿ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರಾದ ಕಿರಣ್,...