ಬೆನಕ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ; ಮಕ್ಕಳ ಆರೈಕೆಯಲ್ಲಿ ಜಾಗರೂಕತೆ ಬಹುಮುಖ್ಯ – ಡಾ. ಗೋಪಾಲಕೃಷ್ಣ

0

ಬೆಳ್ತಂಗಡಿ; ಮಕ್ಕಳು ದೇವರ ಸ್ವರೂಪ ಮತ್ತು ದೇವರು ನಮಗೆ ನೀಡಿದ ಕಾಣಿಕೆ. ಅವರನ್ನು ಸರಿಯಾದ ರೀತಿಯಲ್ಲಿ ಪೋಷಿಸಿ ಆರೋಗ್ಯಕರವಾಗಿ ಮತ್ತು ಉತ್ತಮ ಸಂಸ್ಕಾರ ನೀಡಿ ಬೆಳೆಸುವುದು ಹೆತ್ತವರ ಆದ್ಯ ಕರ್ತವ್ಯ. ಚಿಕಿತ್ಸೆಗಿಂದ ಮುಂಜಾಗ್ರತೆ ಮೇಲು ಎಂಬಂತೆ ಮಕ್ಕಳ ಆರೋಗ್ಯದಲ್ಲಿ ಸ್ವಲ್ಪ ವ್ಯತ್ಯಾಸ ಕಂಡರೂ ಕೂಡಲೇ ಅವರನ್ನು ವೈದ್ಯರಿಗೆ ತೋರಿಸಿ ತಪಾಸಣೆ ನಡೆಸಿ ಸಲಹೆ ಪಡೆಯುವುದು ಪ್ರಾಮುಖ್ಯವಾದದ್ದು, ಎಂದು NABH ಪುರಸ್ಕೃತ ಬೆನಕ ಹೆಲ್ತ್ ಸೆಂಟರ್ ಉಜಿರೆಯ ವೈದ್ಯಕೀಯ ನಿರ್ದೇಶಕರಾದ ಡಾ. ಗೋಪಾಲಕೃಷ್ಣ ರವರು ಹೇಳಿದರು.ಅವರು ಬೆನಕ ಆಸ್ಪತ್ರೆಯಲ್ಲಿ ಜರುಗಿದ ಮಕ್ಕಳ ಉಚಿತ ಆರೋಗ್ಯ...

ತಾಲೂಕಿನಲ್ಲಿ ಸಂಭ್ರಮದಿಂದ ಗರಿಗಳ ಭಾನುವಾರ ಆಚರಣೆ

0

ಬೆಳ್ತಂಗಡಿ: ತಾಲೂಕಿನಲ್ಲಿ ಕ್ರೈಸ್ತ ಬಾಂಧವರು ಗರಿಗಳ ಭಾನುವಾರವನ್ನು ಸಂಭ್ರಮದಿಂದ ಆಚರಿಸಿದರು.ತಾಲೂಕಿನ ಎಲ್ಲ ಚರ್ಚ್ ಗಳಲ್ಲಿಯೂ ವಿಶೇಷ ಪ್ರಾರ್ಥನೆಗಳು ನಡೆಯಿತು, ಬೆಳ್ತಂಗಡಿ ಧರ್ಮಪ್ರಾಂತ್ಯದ ಪ್ರಥಾನ ದೇವಾಲಯವಾದ ಸಂತ ಲಾರೆನ್ಸ್ ದೇವಾಲಯದಲ್ಲಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅ.ವಂ ಲಾರೆನ್ಸ್ ಮುಕ್ಕುಯಿ ಅವರ ಕಾರ್ಮಿಕತ್ವದಲ್ಲಿ ಧಾರ್ಮಿಕ ವಿಧಿ ವಿಧಾನಗಳು ನಡೆಯಿತು.ಗರಿಗಳ ಭಾನುವಾರದೊಂದಿಗೆ ಕ್ರೈಸ್ತರ ಪವಿತ್ರ ವಾರ ಆರಂಭವಾಗುತ್ತದೆ.ಪ್ರಭು ಕ್ರಿಸ್ತನ ಜೆರುಸೆಲಂ ಪ್ರವೇಶನದ ನೆನಪಿನಲ್ಲಿ ಆಚರಿಸುವ ಈ ಹಬ್ಬ ಇದಾಗಿದೆ. ಈ ಹಬ್ಬವು ಪ್ರಭು ಕ್ರಿಸ್ತರ ಶಿಲುಬೆಯ ಮರಣದ ಹಾಗೂ ಪುನರುದ್ಧಾನದ ಸ್ಮರಣೆಯನ್ನು ಆಚರಿಸುವ ಪವಿತ್ರ ವಾರದ ಮೊದಲನೆಯ ದಿನವಾಗಿದೆ.ತಾಲೂಕಿನ ಎಲ್ಲ...

ಉಜಿರೆ; ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕಾರು ಕಳವು

0

ಬೆಳ್ತಂಗಡಿ; ಉಜಿರೆ ಕಾಲೇಜು ರಸ್ತೆಯಲ್ಲಿ ಪಾರ್ಕಿಂಗ್ ಜಾಗದಲ್ಲಿ ನಿಲ್ಲಿಸಿದ್ದ ಕಾರು ಕಳವಾದ ಘಟನೆ ಸಂಭವಿಸಿದ್ದು ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ‌ ದಾಖಲಿಸಲಾಗಿದೆ.ಉಜಿರೆ ನಿವಾಸಿ ವ್ಯಾಪಾರಿಯಾಗಿರುವ ಅಬ್ದುಲ್ ಮತ್ತಲೀಬ್ ಎಂಬರ ಆಲ್ಟೊ ಕಾರು ಕಳ್ಳತನವಾಗಿದೆ.ಇವರು ಕಾರನ್ನು ಉಜಿರೆ ಕಾಲೇಜು ರಸ್ತೆಯಲ್ಲಿರುವ ತಮ್ಮ ಅಂಗಡಿಯ ಸಮೀಪದ ಪಾರ್ಕಿಂಗ್ ಜಾಗದಲ್ಲಿ ಕಾರನ್ನು ನಿಲ್ಲಿಸಿದ್ದರು. ರಾತ್ರಿ ಅಂಗಡಿ ಮುಚ್ಚಿ ಬಂದು ನೋಡಿದಾಗ ನಿಲ್ಲಿಸಿದ್ದ ಕಾರು ನಾಪತ್ತೆಯಾಗಿತ್ತು. ಕಾರಿನ ಅಂದಾಜು ಮೌಲ್ಯ 6,50,000 ಎಂದು ಅಂದಾಜಿಸಲಾಗಿದೆ. ಎ.29ರಂದು ಘಟನೆ ನಡೆದಿದ್ದು ಕಾರಿಗಾಗಿ ಹುಡುಕಾಟ ನಡೆಸಿದರೂ ಯಾವುದೇ ಮಾಹಿತಿ...

ಬೆಳ್ತಂಗಡಿ :ಕಾಲುಗಳನ್ನು ಕತ್ತರಿಸಿದ ರೀತಿಯಲ್ಲಿ ಚಿರತೆ ಮೃತದೇಹ ಪತ್ತೆ

0

ಬೆಳ್ತಂಗಡಿ: ಕಾಲುಗಳನ್ನು ಕತ್ತರಿಸಿದ ಕೊಳೆತ ರೀತಿಯಲ್ಲಿ ಚಿರತೆಯೊಂದು ಸವಣಾಲು ಗ್ರಾಮದ ಮೀಸಲು ಅರಣ್ಯ ಪ್ರದೇಶದಲ್ಲಿ ಪತ್ತೆಯಾಗಿದೆ. ಸ್ಥಳಕ್ಕೆ ಕಾರ್ಕಳ ಮತ್ತು ಬೆಳ್ತಂಗಡಿ ವನ್ಯಜೀವಿ ಇಲಾಖೆ ಅಧಿಕಾರಿಗಳು ತಂಡ ದೌಡಿಯಿಸಿ ಕಾನೂನು ಕ್ರಮ ಕೈಗೊಳ್ಳುತ್ತಿದ್ದಾರೆ. ಬೆಳ್ತಂಗಡಿ ತಾಲೂಕಿನ ಸವಣಾಲು ಗ್ರಾಮದ ಮೀಸಲು ಅರಣ್ಯ ಪ್ರದೇಶ ಇತ್ತಿಲಪೇಲ ಎಂಬಲ್ಲಿ ಕೊಳೆತ ಸ್ಥಿತಿಯಲ್ಲಿ ಚಿರತೆಯ ಮೃತ ದೇಹ ನಾಲ್ಕು ಕಾಲುಗಳನ್ನು ತುಂಡರಿಸಿದ ರೀತಿಯಲ್ಲಿ ಪತ್ತೆಯಾಗಿದ್ದು.ಏ.11 ರಂದು ಸಂಜೆ ಬೆಳ್ತಂಗಡಿ ವನ್ಯಜೀವಿ ವಿಭಾಗದ ಆರ್.ಎಫ್.ಓ ಶರ್ಮಿತಾ ಅವರಿಗೆ ಮಾಹಿತಿ ಬಂದಿದ್ದು. ಏ.12 ರಂದು ಬೆಳಗ್ಗೆ ಘಟನಾ ಸ್ಥಳಕ್ಕೆ ಹೋಗಿ ಪರಿಶೀಲನೆ...

ಕೊಯ್ಯೂರು ಕೂಲಿ ಕಾರ್ಮಿಕನ ಮೇಲೆ ಹಲ್ಲೆ ಜಾತಿ ನಿಂದನೆ; ಆರೋಪಿ ಪೊಲೀಸ್ ವಶಕ್ಕೆ

0

ಬೆಳ್ತಂಗಡಿ; ಕೊಯ್ಯೂರು ಗ್ರಾಮದ ಆದೂರ್ ಪೆರಾಲ್ ಎಂಬಲ್ಲಿ ಕೂಲಿ ಕೆಲಸ ಮಾಡಲು ಬಂದವರ ಮೇಲೆ ಹಲ್ಲೆ ನಡೆಸಿ ಜಾತಿ ನಿಂದನೆ ಮಾಡಿರುವ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು ಆರೋಪಿ ಉಜ್ವಲ್ ಗೌಡ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿರುವುದಾಗಿ ತಿಳಿದು ಬಂದಿದೆ.ಕೊಯ್ಯೂರಿನ ಆದೂರ್ ಪೆರಾಲ್ ಎಂಬಲ್ಲಿಗೆ ಬೇಲಿಯ ಕೆಲಸಕ್ಕೆಂದು ಸ್ಥಳೀಯ ಆರು ಮಂದಿ ಯುವಕರು ಹೋಗಿದ್ದರು. ಈ ವೇಳೆ ಅಲ್ಲಿಗೆ ಬಂದ ಉಜ್ವಲ್ ಗೌಡ ತಮಗೆ ಸೇರಿದ ಜಾಗ ಇದು ಎಂದು ಬೇಲಿ ಹಾಕುತ್ತಿರುವ ಬಗ್ಗೆ ತಕರಾರು ತೆಗೆದಿದ್ದು ಕಾರ್ಮಿಕ ಕೊಯ್ಯೂರು ಗ್ರಾಮದ...

ಬೆಳ್ತಂಗಡಿ; ಶಾಸಕರ ಆಪ್ತ ಕಾರ್ಯದರ್ಶಿ ಯಾಗಿ ಮಂಜುನಾಥ್ ನೇಮಕ

0

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಹರೀಶ್ ಪೂಂಜರವರ ಆಪ್ತ ಕಾರ್ಯದರ್ಶಿಯಾಗಿ 2ನೇ ಅವಧಿಗೂ ಶ್ರೀ ಮಂಜುನಾಥ. ಎಂ. ರವರು ಮರು ನೇಮಕವಾಗಿದ್ದಾರೆ. ಇವರು ಮೂಲತಃ ರೇಷ್ಮೆ ಇಲಾಖೆಯ ಅಧೀಕ್ಷಕರಾಗಿದ್ದು ಪ್ರಸ್ತುತ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು- ಇಲ್ಲಿ ಸಹಾಯಕ ಸಾಂಖ್ಯಿಕ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದು ಸರ್ಕಾರದ ಆದೇಶದಂತೆ ವಿಧಾನಸಭಾ ಸಚಿವಾಲಯದಿಂದ ನಿಯೋಜನೆಗೊಂಡಿದ್ದು ಮುಂದಿನ ದಿನಗಳಲ್ಲಿ ಶ್ರಮಿಕ ಶಾಸಕರ ಕಚೇರಿಯಲ್ಲಿ ಸಾರ್ವಜನಿಕ ಸೇವೆಗೆ ಲಭ್ಯರಿರುತ್ತಾರೆ.

ನಾರಾವಿ; ಭೀಕರ ಅಪಘಾತ ಇಬ್ಬರು ಸ್ಥಳದಲ್ಲಿಯೇ ಸಾವು

0

ಬೆಳ್ತಂಗಡಿ; ನಾರಾವಿ ಕುತ್ಲೂರಿನಲ್ಲಿ ಸಂಭವಿಸಿದ ಭೀಕರ ಬೈಕ್ ಅಪಘಾತದಲ್ಲಿ ಇಬ್ಬರು ಯುವಕರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಸಂಭವಿಸಿದೆ.ಶುಕ್ರವಾರ ತಡ ರಾತ್ರಿಯ ವೇಳೆ ಅಪಘಾತ ಸಂಭವಿಸಿದೆ.ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ಪ್ರಶಾಂತ್ ಹಾಗೂ ದಿನೇಶ್ ಎಂಬವರೇ ಮೃತ ವ್ಯಕ್ತಿಗಳಾಗಿದ್ದಾರೆ. ಕುತ್ಲೂರು ಗ್ರಾಮದ ಪುರುಷ ಗುಡ್ಡೆ ಎಂಬಲ್ಲಿ ಕೊಕ್ರಾಡಿ ನಾರಾವಿ ರಸ್ತೆಯಲ್ಲಿ  ಪ್ರಶಾಂತ್ ಚಲಾಯಿಸುತ್ತಿದ್ದ ಬೈಕ್ ನಿಯಂತ್ರಣ ಕಳೆದುಕೊಂಡು ಮರಕ್ಕೆ ಡಿಕ್ಕಿ ಹೊಡೆದಿದ್ದು ಗಂಭೀರವಾಗಿ ಗಾಯಗೊಂಡ ಇಬ್ಬರು ಪ್ರಯಾಣಿಕರೂ ಸ್ಥಳದಲ್ಲಿಯೇ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.ರಾತ್ರಿಯ ವೇಳೆ ಯಾವುದೋ ಕಾರ್ಯಕ್ರಮ ಮುಗಿಸಿ ಹಿಂತಿರುಗುವ ವೇಳೆ ರಾತ್ರಿ ಹನ್ನೆರಡು...

ಉಜಿರೆ; ಮಹಿಳೆಯ ಕುತ್ತಿಗೆಯಿಂದ ಚಿನ್ನದ ಸರ ಅಪಹರಣ

0

ಬೆಳ್ತಂಗಡಿ; ಉಜಿರೆ ಓಡಲದಲ್ಲಿ ರಸ್ತೆಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಬೈಕಿನಲ್ಲಿ ಬಂದ ಇಬ್ಬರು ಯುವಕರು ಮಹಿಳೆಯ ಕುತ್ತಿಗೆಯಿಂದ ಚಿನ್ನದ ಸರ ಕಳ್ಳತನ ಮಾಡಿದ ಘಟನೆ ನಡೆದಿದೆ.ಸ್ಥಳೀಯ ನಿವಾಸಿ ರತ್ನ (55) ಎಂಬವರು ಎ.10 ರಂದು 6.30 ಗಂಟೆಯ ಸುಮಾರಿಗೆ ಉಜಿರೆ ಓಡಲ ವ್ಯಾಘ್ರ ಚಾಮುಂಡಿ ದ್ವಾರದ ಬಳಿ ಕೆಲಸ ಮುಗಿಸಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಬೈಕಿನಲ್ಲಿ ಬಂದ ಇಬ್ಬರು ಅಪರಿಚಿತರು ಮಹಿಳೆಯ ಸಮೀಪ ಬಂದು ಬೈಕ್ ಅನ್ನು ಚಾಲೂ ಸ್ತಿತಿಯಲ್ಲಿ ನಿಲ್ಲಿಸಿ ಒಬ್ಬ ಬೈಕ್ ನಿಂದ‌ ಇಳಿದು ಮಹಿಳೆಯ ಕುತಗತಿಗೆಯಿಂದ ಚಿನ್ನದ ಸರವನ್ನು...

ಬೆಳ್ತಂಗಡಿ; ಯುವ ಕಾಂಗ್ರೆಸ್ ನಿಂದ “ಸರಕಾರದ ನಡೆ ಕಾರ್ಯಕರ್ತರ ಕಡೆ” ಸಮಾವೇಶದ ಬಗ್ಗೆ ಸಮಾಲೋಚನಾ ಸಭೆ

0

ಬೆಳ್ತಂಗಡಿ;  ಯುವ ಕಾಂಗ್ರೆಸ್ ಸಮಿತಿ ಬೆಳ್ತಂಗಡಿ ವತಿಯಿಂದ ಇಂದು ದಿನಾಂಕ 20-04-2025 ರಂದು ಡಿ.ಕೆ ಶಿವಕುಮಾರ್ ಉಪಸ್ಥಿತಿಯಲ್ಲಿ ನಡೆಯುವ "ಸರ್ಕಾರದ ನಡೆ ಕಾರ್ಯಕರ್ತರ ಕಡೆ" ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆಯು ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಉಪಾಧ್ಯಕ್ಷರಾದ ಅರುಣ್ ರೋಯಲ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಡಿಜಿಟಲ್ ಯೂತ್ ಫಾರ್ ಬೂತ್ ಅಜೆಂಡಾದ ಬಗ್ಗೆ ಯುವ ಕಾಂಗ್ರೆಸ್ ಗ್ರಾಮೀಣ ಘಟಕದ ಅಧ್ಯಕ್ಷರಾದ ಅಜಾರುದ್ದೀನ್ ಬಗ್ಗೆ ಮಾಹಿತಿ ನೀಡಿದರು.ಸಭೆಯ ಅಧ್ಯಕ್ಷರಾದ ಅರುಣ್ ಲೋಬೋ ಸಂಘಟನೆಯ ಬಗ್ಗೆ ಪ್ರಸ್ತಾವಿಕವಾಗಿ ಮಾತನಾಡಿದರು. ವಿಧಾನಸಭಾ...

ಬೆಳ್ತಂಗಡಿ; ಸರಕಾರಿ ನೌಕರರ ಸಂಘದ ಪದಾಧಿಕಾರಿಗಳ ಪದಗ್ರಹಣ ಹಾಗೂ ಸಾಧಕರಿಗೆ ಸನ್ಮಾನ

0

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ ಮತ್ತು ನೂತನ ಪದಾಧಿಕಾರಿಗಳ, ನಿರ್ದೇಶಕರ ಪದಗ್ರಹಣ ಮತ್ತು 2025 ರ ಸಾಧಕರ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಎ.11 ರಂದು ಬೆಳ್ತಂಗಡಿ ಎಸ್.ಡಿ.ಎಂ. ಆಂಗ್ಲಮಾಧ್ಯಮ ಶಾಲೆಯಲ್ಲಿ ನಡೆಯಿತು.ಕಾರ್ಯಕ್ರಮದ ಉದ್ಘಾಟನೆಯನ್ನು ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿಸಾನಿಕಂ ಅವರು ನೆರವೇರಿಸಿ ಶುಭ ಹಾರೈಸಿದರು. ಸಂಘದ ಅಧ್ಯಕ್ಷ ಜಯರಾಜ್ ಜೈನ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ ಸಂಘ ಕಳೆದ ವರ್ಷದಲ್ಲಿ ಮಾಡಿದ ಸಾಧನಡಗಳನ್ನು ವಿವರಿಸಿದರು ಮುಂದಿನ ದಿನಗಳಲ್ಲಿಯೂ ಸಂಘವನ್ನು ಮುನ್ನಡೆಸಲು ಎಲ್ಲರ ಸಹಕಾರ ಕೋರಿದರು. ಮುಖ್ಯ...